“ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸು, ನಾನು ಲೆಕ್ಕಕ್ಕೆ ಇಟ್ಟಿಲ್ಲ ಹಾಸನ ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು”: ಹೆಚ್.ಡಿ. ರೇವಣ್ಣ ತಿರುಗೇಟು

ಹಾಸನ: ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸಾಗಿದೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ವಿರುದ್ಧ ಕಿಡಿಕಾರಿದ ಅವರು, ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ತಿರುಗೇಟು ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಶಾಸಕರು ಇದ್ಯಾವೊದೋ ಆಕಸ್ಮಿಕವಾಗಿ ಬಂದಿರುವ ಕೂಸು ಎಂದು ವ್ಯಂಗ್ಯವಾಡಿದರು. ಹಾಸನ ಜಿಲ್ಲೆಯಲ್ಲಿ ೧೯೬೨ನೆ ಸಾಲಿನಿಂದ ದೇವೆಗೌಡರು ಸೋಲು ಗೆಲುವು ನೋಡಿದ್ದಾರೆ. ಮಾಜಿ ಶಾಸಕ ದಿವಂಗತ. ಹೆಚ್.ಎಸ್. ಪ್ರಕಾಶ್ ರನ್ನು ಹಾಸನ ಜನತೆ ೪ ಬಾರಿ ಗೆಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹೊಸ ಕೆಲಸ ವಿಮಾನ ನಿಲ್ದಾಣ ಕಾಮಗಾರಿ ಮಾಡಲಿ, ೧೦೦ ಕೋಟಿ ವೆಚ್ಚದ ಜಿಲ್ಲಾ ಕೋರ್ಟ್ ಸ್ಥಾಪಿಸಿದ್ದೇನೆ. ಕೆಲವರು ಹಾಸನ, ಮಂಡ್ಯ ಬಜೆಟ್ ಎಂದು ಚಪ್ಪಾಳೆ ತಟ್ಟಿದವರು ಹಾಸನದಲ್ಲಿ ಯಾವ ಇಲಾಖೆಯಲ್ಲಿ ಲೂಟಿ ನಡೆಯುತ್ತಿದೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ನಮ್ಮ ಕೈಯಲ್ಲಿ ಚಿನ್ನದ ಲೇಪನ ಮಾಡಲು ಆಗಲಿಲ್ಲ ಅವರೇ ಲೇಪನ ಮಾಡಲಿ ಎಂದ ಅವರು, ನಾನು ಕಟ್ಟಿರುವ ನರ್ಸಿಂಗ್ ಶಾಲೆ ಮತ್ತು ಕಟ್ಟಡಗಳಿಗೆ ಬಣ್ಣ ಹೊಡೆಯಲಿ ಎಂದು ಟಾಂಗ್ ನೀಡಿದರು. ಪ್ರೀತಂ ಜೆ. ಗೌಡ ಆರೋಪಕ್ಕೆ ನಾನು ಉತ್ತರ ನೀಡುವುದಿಲ್ಲ ಉತ್ತರ ನೀಡಿದ್ದರೆ ಪೊಳ್ಳೆದು ಹೊಗುತ್ತೇನೆ. .ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರ ಸಮಯ ಬಂದಾಗ ಹೇಳುತ್ತೆನೆ ಚನ್ನಪಟ್ಟಣ ಕೆರೆ ಎಂಗೆ ಮಾಡಿಸುವುದು ನನಗೆ ಗೊತ್ತಿದೆ. ಹಾಸನ ಹೈಟೆಕ್ ಬಸ್ಸು ನಿಲ್ದಾಣ ಮಾಡಲು ರೇವಣ್ಣ ಬರಬೇಕಿತ್ತಾ, ಹಾಸನ ತಾಲ್ಲೂಕು ರಸ್ತೆ ಅಭಿವೃದ್ಧಿಗೆ ೧೫೦ ಕೋಟಿ ಹಣ ನೀಡಿದ್ದೇನೆ ಎಂದು ಜೆಡಿಎಸ್ ಆಡಳಿತವಧಿಯ ಅಭಿವೃದ್ಧಿ ಕೆಲಸದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಸಾಧನೆ ಎನು? ಅವರ ಕೊಡುಗೆ ಬಗ್ಗೆ ತಿಳಿಸಲಿ? ಎಂದು ಪ್ರಶ್ನಿಸಿದ ಅವರು, ನಾವು ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರು ಮಾಡಿದ ಕೆಲಸವನ್ನು ಈಗ ತಡೆ ಹಿಡಿದಿದ್ದಾರೆ. ಹಾಸನ ಬೇಲೂರು ರಸ್ತೆ ಯಡೆಗೌಡನಹಳ್ಳಿ ಬಿಳಿಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ ತಡೆಹಿಡಿದಿದ್ದಾರೆ . ತಡೆಹಿಡಿದ ಕಾಮಗಾರಿಗಳು ಸದನದಲ್ಲಿ ಅಂಗಿಕಾರವಾಗಿ ಬಡ್ಜೆಟ್ ನಲ್ಲಿ ಬಂದ ಕಾಮಗಾರಿಗಳು ಅವುಗಳನ್ನು ತಡೆ ಹಿಡಿಯಲು ಸಾಧ್ಯವಿಲ್ಲ. ಈ ಜಿಲ್ಲೆಗೆ ಬಿಜೆಪಿ ಸರ್ಕಾರದ ಸಾಧನೆ ಏನು? ಗಡ್ಕರಿ ಅವರು ಫೌಂಡೇಶನ್ ಹಾಕಿದ್ದ ನೂತನ ಹೆದ್ದಾರಿಯನ್ನು ನಿಲ್ಲಿಸಿದರು. ಮಂತ್ರಿಯಾದವರು ಸರಿಯಾಗಿ ಮಾಹಿತಿ ಪಡೆದು ಹೇಳಿಕೆ ನೀಡಬೇಕು ಎಂದರು.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…

    Spread the love

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…

    Spread the love

    You Missed

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    • By admin
    • October 16, 2024
    • 33 views
    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    • By admin
    • October 11, 2024
    • 62 views
    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    • By admin
    • October 11, 2024
    • 26 views
    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    • By admin
    • October 7, 2024
    • 83 views
    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    • By admin
    • October 2, 2024
    • 45 views
    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

    • By admin
    • October 1, 2024
    • 430 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು