“ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸು, ನಾನು ಲೆಕ್ಕಕ್ಕೆ ಇಟ್ಟಿಲ್ಲ ಹಾಸನ ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು”: ಹೆಚ್.ಡಿ. ರೇವಣ್ಣ ತಿರುಗೇಟು

ಹಾಸನ: ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸಾಗಿದೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ವಿರುದ್ಧ ಕಿಡಿಕಾರಿದ ಅವರು, ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ತಿರುಗೇಟು ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಶಾಸಕರು ಇದ್ಯಾವೊದೋ ಆಕಸ್ಮಿಕವಾಗಿ ಬಂದಿರುವ ಕೂಸು ಎಂದು ವ್ಯಂಗ್ಯವಾಡಿದರು. ಹಾಸನ ಜಿಲ್ಲೆಯಲ್ಲಿ ೧೯೬೨ನೆ ಸಾಲಿನಿಂದ ದೇವೆಗೌಡರು ಸೋಲು ಗೆಲುವು ನೋಡಿದ್ದಾರೆ. ಮಾಜಿ ಶಾಸಕ ದಿವಂಗತ. ಹೆಚ್.ಎಸ್. ಪ್ರಕಾಶ್ ರನ್ನು ಹಾಸನ ಜನತೆ ೪ ಬಾರಿ ಗೆಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹೊಸ ಕೆಲಸ ವಿಮಾನ ನಿಲ್ದಾಣ ಕಾಮಗಾರಿ ಮಾಡಲಿ, ೧೦೦ ಕೋಟಿ ವೆಚ್ಚದ ಜಿಲ್ಲಾ ಕೋರ್ಟ್ ಸ್ಥಾಪಿಸಿದ್ದೇನೆ. ಕೆಲವರು ಹಾಸನ, ಮಂಡ್ಯ ಬಜೆಟ್ ಎಂದು ಚಪ್ಪಾಳೆ ತಟ್ಟಿದವರು ಹಾಸನದಲ್ಲಿ ಯಾವ ಇಲಾಖೆಯಲ್ಲಿ ಲೂಟಿ ನಡೆಯುತ್ತಿದೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ನಮ್ಮ ಕೈಯಲ್ಲಿ ಚಿನ್ನದ ಲೇಪನ ಮಾಡಲು ಆಗಲಿಲ್ಲ ಅವರೇ ಲೇಪನ ಮಾಡಲಿ ಎಂದ ಅವರು, ನಾನು ಕಟ್ಟಿರುವ ನರ್ಸಿಂಗ್ ಶಾಲೆ ಮತ್ತು ಕಟ್ಟಡಗಳಿಗೆ ಬಣ್ಣ ಹೊಡೆಯಲಿ ಎಂದು ಟಾಂಗ್ ನೀಡಿದರು. ಪ್ರೀತಂ ಜೆ. ಗೌಡ ಆರೋಪಕ್ಕೆ ನಾನು ಉತ್ತರ ನೀಡುವುದಿಲ್ಲ ಉತ್ತರ ನೀಡಿದ್ದರೆ ಪೊಳ್ಳೆದು ಹೊಗುತ್ತೇನೆ. .ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರ ಸಮಯ ಬಂದಾಗ ಹೇಳುತ್ತೆನೆ ಚನ್ನಪಟ್ಟಣ ಕೆರೆ ಎಂಗೆ ಮಾಡಿಸುವುದು ನನಗೆ ಗೊತ್ತಿದೆ. ಹಾಸನ ಹೈಟೆಕ್ ಬಸ್ಸು ನಿಲ್ದಾಣ ಮಾಡಲು ರೇವಣ್ಣ ಬರಬೇಕಿತ್ತಾ, ಹಾಸನ ತಾಲ್ಲೂಕು ರಸ್ತೆ ಅಭಿವೃದ್ಧಿಗೆ ೧೫೦ ಕೋಟಿ ಹಣ ನೀಡಿದ್ದೇನೆ ಎಂದು ಜೆಡಿಎಸ್ ಆಡಳಿತವಧಿಯ ಅಭಿವೃದ್ಧಿ ಕೆಲಸದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಸಾಧನೆ ಎನು? ಅವರ ಕೊಡುಗೆ ಬಗ್ಗೆ ತಿಳಿಸಲಿ? ಎಂದು ಪ್ರಶ್ನಿಸಿದ ಅವರು, ನಾವು ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರು ಮಾಡಿದ ಕೆಲಸವನ್ನು ಈಗ ತಡೆ ಹಿಡಿದಿದ್ದಾರೆ. ಹಾಸನ ಬೇಲೂರು ರಸ್ತೆ ಯಡೆಗೌಡನಹಳ್ಳಿ ಬಿಳಿಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ ತಡೆಹಿಡಿದಿದ್ದಾರೆ . ತಡೆಹಿಡಿದ ಕಾಮಗಾರಿಗಳು ಸದನದಲ್ಲಿ ಅಂಗಿಕಾರವಾಗಿ ಬಡ್ಜೆಟ್ ನಲ್ಲಿ ಬಂದ ಕಾಮಗಾರಿಗಳು ಅವುಗಳನ್ನು ತಡೆ ಹಿಡಿಯಲು ಸಾಧ್ಯವಿಲ್ಲ. ಈ ಜಿಲ್ಲೆಗೆ ಬಿಜೆಪಿ ಸರ್ಕಾರದ ಸಾಧನೆ ಏನು? ಗಡ್ಕರಿ ಅವರು ಫೌಂಡೇಶನ್ ಹಾಕಿದ್ದ ನೂತನ ಹೆದ್ದಾರಿಯನ್ನು ನಿಲ್ಲಿಸಿದರು. ಮಂತ್ರಿಯಾದವರು ಸರಿಯಾಗಿ ಮಾಹಿತಿ ಪಡೆದು ಹೇಳಿಕೆ ನೀಡಬೇಕು ಎಂದರು.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 73 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views