“ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸು, ನಾನು ಲೆಕ್ಕಕ್ಕೆ ಇಟ್ಟಿಲ್ಲ ಹಾಸನ ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು”: ಹೆಚ್.ಡಿ. ರೇವಣ್ಣ ತಿರುಗೇಟು

ಹಾಸನ: ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸಾಗಿದೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ವಿರುದ್ಧ ಕಿಡಿಕಾರಿದ ಅವರು, ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ತಿರುಗೇಟು ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಶಾಸಕರು ಇದ್ಯಾವೊದೋ ಆಕಸ್ಮಿಕವಾಗಿ ಬಂದಿರುವ ಕೂಸು ಎಂದು ವ್ಯಂಗ್ಯವಾಡಿದರು. ಹಾಸನ ಜಿಲ್ಲೆಯಲ್ಲಿ ೧೯೬೨ನೆ ಸಾಲಿನಿಂದ ದೇವೆಗೌಡರು ಸೋಲು ಗೆಲುವು ನೋಡಿದ್ದಾರೆ. ಮಾಜಿ ಶಾಸಕ ದಿವಂಗತ. ಹೆಚ್.ಎಸ್. ಪ್ರಕಾಶ್ ರನ್ನು ಹಾಸನ ಜನತೆ ೪ ಬಾರಿ ಗೆಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹೊಸ ಕೆಲಸ ವಿಮಾನ ನಿಲ್ದಾಣ ಕಾಮಗಾರಿ ಮಾಡಲಿ, ೧೦೦ ಕೋಟಿ ವೆಚ್ಚದ ಜಿಲ್ಲಾ ಕೋರ್ಟ್ ಸ್ಥಾಪಿಸಿದ್ದೇನೆ. ಕೆಲವರು ಹಾಸನ, ಮಂಡ್ಯ ಬಜೆಟ್ ಎಂದು ಚಪ್ಪಾಳೆ ತಟ್ಟಿದವರು ಹಾಸನದಲ್ಲಿ ಯಾವ ಇಲಾಖೆಯಲ್ಲಿ ಲೂಟಿ ನಡೆಯುತ್ತಿದೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ನಮ್ಮ ಕೈಯಲ್ಲಿ ಚಿನ್ನದ ಲೇಪನ ಮಾಡಲು ಆಗಲಿಲ್ಲ ಅವರೇ ಲೇಪನ ಮಾಡಲಿ ಎಂದ ಅವರು, ನಾನು ಕಟ್ಟಿರುವ ನರ್ಸಿಂಗ್ ಶಾಲೆ ಮತ್ತು ಕಟ್ಟಡಗಳಿಗೆ ಬಣ್ಣ ಹೊಡೆಯಲಿ ಎಂದು ಟಾಂಗ್ ನೀಡಿದರು. ಪ್ರೀತಂ ಜೆ. ಗೌಡ ಆರೋಪಕ್ಕೆ ನಾನು ಉತ್ತರ ನೀಡುವುದಿಲ್ಲ ಉತ್ತರ ನೀಡಿದ್ದರೆ ಪೊಳ್ಳೆದು ಹೊಗುತ್ತೇನೆ. .ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರ ಸಮಯ ಬಂದಾಗ ಹೇಳುತ್ತೆನೆ ಚನ್ನಪಟ್ಟಣ ಕೆರೆ ಎಂಗೆ ಮಾಡಿಸುವುದು ನನಗೆ ಗೊತ್ತಿದೆ. ಹಾಸನ ಹೈಟೆಕ್ ಬಸ್ಸು ನಿಲ್ದಾಣ ಮಾಡಲು ರೇವಣ್ಣ ಬರಬೇಕಿತ್ತಾ, ಹಾಸನ ತಾಲ್ಲೂಕು ರಸ್ತೆ ಅಭಿವೃದ್ಧಿಗೆ ೧೫೦ ಕೋಟಿ ಹಣ ನೀಡಿದ್ದೇನೆ ಎಂದು ಜೆಡಿಎಸ್ ಆಡಳಿತವಧಿಯ ಅಭಿವೃದ್ಧಿ ಕೆಲಸದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಸಾಧನೆ ಎನು? ಅವರ ಕೊಡುಗೆ ಬಗ್ಗೆ ತಿಳಿಸಲಿ? ಎಂದು ಪ್ರಶ್ನಿಸಿದ ಅವರು, ನಾವು ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರು ಮಾಡಿದ ಕೆಲಸವನ್ನು ಈಗ ತಡೆ ಹಿಡಿದಿದ್ದಾರೆ. ಹಾಸನ ಬೇಲೂರು ರಸ್ತೆ ಯಡೆಗೌಡನಹಳ್ಳಿ ಬಿಳಿಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ ತಡೆಹಿಡಿದಿದ್ದಾರೆ . ತಡೆಹಿಡಿದ ಕಾಮಗಾರಿಗಳು ಸದನದಲ್ಲಿ ಅಂಗಿಕಾರವಾಗಿ ಬಡ್ಜೆಟ್ ನಲ್ಲಿ ಬಂದ ಕಾಮಗಾರಿಗಳು ಅವುಗಳನ್ನು ತಡೆ ಹಿಡಿಯಲು ಸಾಧ್ಯವಿಲ್ಲ. ಈ ಜಿಲ್ಲೆಗೆ ಬಿಜೆಪಿ ಸರ್ಕಾರದ ಸಾಧನೆ ಏನು? ಗಡ್ಕರಿ ಅವರು ಫೌಂಡೇಶನ್ ಹಾಕಿದ್ದ ನೂತನ ಹೆದ್ದಾರಿಯನ್ನು ನಿಲ್ಲಿಸಿದರು. ಮಂತ್ರಿಯಾದವರು ಸರಿಯಾಗಿ ಮಾಹಿತಿ ಪಡೆದು ಹೇಳಿಕೆ ನೀಡಬೇಕು ಎಂದರು.

Spread the love
  • Related Posts

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    You Missed

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 7 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 3 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 10 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 15 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 10 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ