“ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸು, ನಾನು ಲೆಕ್ಕಕ್ಕೆ ಇಟ್ಟಿಲ್ಲ ಹಾಸನ ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು”: ಹೆಚ್.ಡಿ. ರೇವಣ್ಣ ತಿರುಗೇಟು

ಹಾಸನ: ಈ ಕೂಸು ಆಕಸ್ಮಿಕವಾಗಿ ಬಂದಿರುವ ಕೂಸಾಗಿದೆ ಎಂದು ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ವಿರುದ್ಧ ಕಿಡಿಕಾರಿದ ಅವರು, ಅಭಿವೃದ್ಧಿಗೆ ಮತ್ತೆ ನಾನೆ ಬರಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ತಿರುಗೇಟು ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಶಾಸಕರು ಇದ್ಯಾವೊದೋ ಆಕಸ್ಮಿಕವಾಗಿ ಬಂದಿರುವ ಕೂಸು ಎಂದು ವ್ಯಂಗ್ಯವಾಡಿದರು. ಹಾಸನ ಜಿಲ್ಲೆಯಲ್ಲಿ ೧೯೬೨ನೆ ಸಾಲಿನಿಂದ ದೇವೆಗೌಡರು ಸೋಲು ಗೆಲುವು ನೋಡಿದ್ದಾರೆ. ಮಾಜಿ ಶಾಸಕ ದಿವಂಗತ. ಹೆಚ್.ಎಸ್. ಪ್ರಕಾಶ್ ರನ್ನು ಹಾಸನ ಜನತೆ ೪ ಬಾರಿ ಗೆಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹೊಸ ಕೆಲಸ ವಿಮಾನ ನಿಲ್ದಾಣ ಕಾಮಗಾರಿ ಮಾಡಲಿ, ೧೦೦ ಕೋಟಿ ವೆಚ್ಚದ ಜಿಲ್ಲಾ ಕೋರ್ಟ್ ಸ್ಥಾಪಿಸಿದ್ದೇನೆ. ಕೆಲವರು ಹಾಸನ, ಮಂಡ್ಯ ಬಜೆಟ್ ಎಂದು ಚಪ್ಪಾಳೆ ತಟ್ಟಿದವರು ಹಾಸನದಲ್ಲಿ ಯಾವ ಇಲಾಖೆಯಲ್ಲಿ ಲೂಟಿ ನಡೆಯುತ್ತಿದೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ನಮ್ಮ ಕೈಯಲ್ಲಿ ಚಿನ್ನದ ಲೇಪನ ಮಾಡಲು ಆಗಲಿಲ್ಲ ಅವರೇ ಲೇಪನ ಮಾಡಲಿ ಎಂದ ಅವರು, ನಾನು ಕಟ್ಟಿರುವ ನರ್ಸಿಂಗ್ ಶಾಲೆ ಮತ್ತು ಕಟ್ಟಡಗಳಿಗೆ ಬಣ್ಣ ಹೊಡೆಯಲಿ ಎಂದು ಟಾಂಗ್ ನೀಡಿದರು. ಪ್ರೀತಂ ಜೆ. ಗೌಡ ಆರೋಪಕ್ಕೆ ನಾನು ಉತ್ತರ ನೀಡುವುದಿಲ್ಲ ಉತ್ತರ ನೀಡಿದ್ದರೆ ಪೊಳ್ಳೆದು ಹೊಗುತ್ತೇನೆ. .ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರ ಸಮಯ ಬಂದಾಗ ಹೇಳುತ್ತೆನೆ ಚನ್ನಪಟ್ಟಣ ಕೆರೆ ಎಂಗೆ ಮಾಡಿಸುವುದು ನನಗೆ ಗೊತ್ತಿದೆ. ಹಾಸನ ಹೈಟೆಕ್ ಬಸ್ಸು ನಿಲ್ದಾಣ ಮಾಡಲು ರೇವಣ್ಣ ಬರಬೇಕಿತ್ತಾ, ಹಾಸನ ತಾಲ್ಲೂಕು ರಸ್ತೆ ಅಭಿವೃದ್ಧಿಗೆ ೧೫೦ ಕೋಟಿ ಹಣ ನೀಡಿದ್ದೇನೆ ಎಂದು ಜೆಡಿಎಸ್ ಆಡಳಿತವಧಿಯ ಅಭಿವೃದ್ಧಿ ಕೆಲಸದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

ಹಾಸನ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಸಾಧನೆ ಎನು? ಅವರ ಕೊಡುಗೆ ಬಗ್ಗೆ ತಿಳಿಸಲಿ? ಎಂದು ಪ್ರಶ್ನಿಸಿದ ಅವರು, ನಾವು ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರು ಮಾಡಿದ ಕೆಲಸವನ್ನು ಈಗ ತಡೆ ಹಿಡಿದಿದ್ದಾರೆ. ಹಾಸನ ಬೇಲೂರು ರಸ್ತೆ ಯಡೆಗೌಡನಹಳ್ಳಿ ಬಿಳಿಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ ತಡೆಹಿಡಿದಿದ್ದಾರೆ . ತಡೆಹಿಡಿದ ಕಾಮಗಾರಿಗಳು ಸದನದಲ್ಲಿ ಅಂಗಿಕಾರವಾಗಿ ಬಡ್ಜೆಟ್ ನಲ್ಲಿ ಬಂದ ಕಾಮಗಾರಿಗಳು ಅವುಗಳನ್ನು ತಡೆ ಹಿಡಿಯಲು ಸಾಧ್ಯವಿಲ್ಲ. ಈ ಜಿಲ್ಲೆಗೆ ಬಿಜೆಪಿ ಸರ್ಕಾರದ ಸಾಧನೆ ಏನು? ಗಡ್ಕರಿ ಅವರು ಫೌಂಡೇಶನ್ ಹಾಕಿದ್ದ ನೂತನ ಹೆದ್ದಾರಿಯನ್ನು ನಿಲ್ಲಿಸಿದರು. ಮಂತ್ರಿಯಾದವರು ಸರಿಯಾಗಿ ಮಾಹಿತಿ ಪಡೆದು ಹೇಳಿಕೆ ನೀಡಬೇಕು ಎಂದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ