ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ)

ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ ಅಪಾಯದ ಮುನ್ಸೂಚನೆ ಅಂತೂ ಖಂಡಿತಾ ಹೌದು. ಮಳೆಗಾಲದ ಭೂಕುಸಿತವೇ ಅಪಾಯಕಾರಿ, ಅದಕ್ಕೇ ಇನ್ನೂ ನಮ್ಮ ಸರಕಾರದ ಯಾವ ಕ್ರಮಗಳೂ ಆಗಿಲ್ಲ, ಅದರ ಬಗ್ಗೆ ಅಧ್ಯಯನ ವರದಿಯೂ ಆಗಲಿಲ್ಲ, ಅದು ಇನ್ನು ಮುಂದೆ ಆಗದಂತೆ ಯೋಚನಾ ಕ್ರಮಗಳೂ, ಕ್ರಿಯೆಗಳೂ ಆಗಿಲ್ಲ. ಇದು ಈ ಸಮಯದಲ್ಲಿ ಏಕಾಏಕಿ ಭೂಕುಸಿತ ಆಗುತ್ತಿದೆ ಎಂದರೆ ಬಹಳಷ್ಟು ಯೋಚಿಸಬೇಕಾದ ಮತ್ತು ಯೋಚನೆಗಳಿಗೆ ಪೂರಕ ಕ್ರಮಗಳನ್ನು ಕೈ ಗೊಳ್ಳಬೇಕಾದ ಪ್ರಮುಖ ವಿಚಾರವಿದು.

ನೇತ್ರಾವತಿ ನದಿಯು ಪಶ್ಚಿಮ ಘಟ್ಟದ ಹಲವಾರು ಗಿರಿ, ಕಾನನ, ಕಣಿವೆಗಳಿಂದ ಹರಿದು ಬರುವ ಕರಾವಳಿಯ ಜೀವನದಿ ಯಾಗಿದ್ದು ಇದರ ಮಹತ್ವ ಮತ್ತು ಅಗತ್ಯವು ರಾಜಕಾರಣಿಗಳಿಗೆ ಬಿಡಿ ದಕ್ಷಿಣ ಕನ್ನಡದ ಕೆಲವು ಪಕ್ಷ, ರಾಜಕೀಯ ಕೃಪಾ ಪೋಷಿತ ಜನತೆಗೆ ಇನ್ನೂ ಅರ್ಥವಾಗಿಲ್ಲ. ಕಡ್ತಕಲ್, ಎಳನೀರು, ಚಾರ್ಮಾಡಿ, ಶಿರಾಡಿ, ಬಿಸಿಲೆ, ಬೈರಾಪುರ ಘಾಟಿ ಪ್ರದೇಶಗಳಿಂದ ಬರುವ 9 ಉಪ ನದಿಗಳಲ್ಲಿ ಎಳನೀರು ಘಾಟಿಯ ಬಂಗ್ರ ಬಲಿಕೆ ಕಣಿವೆಯ ಮೂಲ ಸ್ಥಾನದ ನೀರಿನ ಹರಿವೇ ಪ್ರಮುಖವಾಗಿರುತ್ತದೆ. ಕುದುರೆ ಮುಖದ ಹಿರಿಮರಿ, ತಿರಿಮರಿ ಗುಪ್ಪೆ, ಕೃಷ್ಣ ಗಿರಿಯ ನಡುವಿನ ಶೋಲಾ ಅಡವಿಯಲ್ಲಿ ಉಗಮವಾಗಿ ಅಲ್ಲಿ ಇನ್ನಿತರ ಕಣಿವೆಗಳಲ್ಲಿ ಹರಿದು ಬರುವ ಎಳನೀರು ಹೊಳೆ, ಮಾವಿನಸಸಿ ಹೊಳೆ, ಬಡಮನೆ ಹೊಳೆ, ಶಿರ್ಲಾಲು, ಶಿವನಾಳ ಹೊಳೆ ನೇತ್ರಾವತಿಯ ಪ್ರಮುಖ ಭಾಗವೇ ಆಗಿರುವ ಎಳನೀರು ಹೊಳೆಯ ಹೃದಯ ಭಾಗವೇ ಆಗಿರುತ್ತದೆ. ಬಹುಶಃ ಎಳನೀರು ಹೊಳೆಯ ಮಳೆಗಾಲದ ನೀರಿನ ಇಳುವರಿ ( ವಾಟರ್ ಕ್ಯಾಚ್ ಮೆಂಟ್ ಏರಿಯಾ ) ಕಡಿಮೆ ಆಗುತ್ತಿದ್ದು ನೀರನ್ನು ಹಿಡಿದಿಟ್ಟು ಕೊಳ್ಳುವಂತಹ ಬೆಟ್ಟದ ಮೇಲ್ನೈ ಪದರವು ಗಡಸುತನ ಕಳೆದುಕೊಂಡು ಮೆದುವಾಗುತ್ತಾ ವರ್ಷದಿಂದ ವರ್ಷಕ್ಕೆ ನೀರಿನ ಹಿಡಿತದ ವ್ಯಾಪ್ತಿ ಕಡಿಮೆಯಾಗುತ್ತಾ ಒರತೆಯ ಕೊರತೆ ಆಗುತ್ತಾ ಇರುವುದರಿಂದ 65 ಡಿಗ್ರೀಯಿಂದ 85 ಡಿಗ್ರಿ ವರೆವಿನ ಕಣಿವೆ, ಕಂದರದಲ್ಲಿ ಈ ರೀತಿಯ ಭೂಕುಸಿತ ಆಗುವ ಸಾಧ್ಯತೆಗಳು ಇವೆ. ಈ ಸಂದರ್ಭದಲ್ಲೇ ಭೂಕುಸಿತ ಆದರೆ ಇನ್ನು ಮುಂದಿನ ಮಳೆಗಾಲದಲ್ಲಿ ಇನ್ನಷ್ಟು ಕುಸಿತ ಆಗುವದಂತೂ ಖಂಡಿತ. ಚಾರ್ಮಾಡಿಯಲ್ಲಿ ಕಳೆದ 2 ವರ್ಷಗಳಲ್ಲಿ ಭೂಕುಸಿತ ಆಗಿ ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿ ಬಡಕಲಾಗುತ್ತ ಬಂದಿದೆ. ಶಿರಾಡಿ ಘಾಟಿಯಲ್ಲಿ ಎತ್ತಿನ ಹೊಳೆ ಯೋಜನೆ ಕಾಮಗಾರಿಯಿಂದ ನೇತ್ರಾವತಿಯ ಇನ್ನೊಂದು ಉಪನದಿ ಕೆಂಪು ಹೊಳೆ ಈಗಾಗಲೇ ಅರ್ಧ ಜೀವವನ್ನು ಕಳೆದು ಕೊಂಡಿದೆ. ಈಗಾಗಲೇ 4 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗುತ್ತಿದ್ದು ಬರಗಾಲದ ತೀರ್ವತೆ ಹೆಚ್ಚಾಗುತ್ತಾ ಇದೆ. ರಾಜಕೀಯದ ಅ0ಡೇ ಪಿರ್ಕಿಗಳಿಗಂತೂ ನದಿ ಎಂದರೆ ದುಡ್ಡು ಲೂಟಿ ಮಾಡುವ ಬಿಗ್ ಪ್ರಾಜೆಕ್ಟ್ ಆಗಿ ಬಿಟ್ಟಿದೆ, ಆದರೆ ನದಿಯನ್ನೇ ಆಶ್ರಯಿಸಿಕೊಂಡು ಬದುಕುವ ಜನರಿಗೆ ಅರ್ಥ ಆಗುತ್ತಿಲ್ಲಾ ಎಂದರೆ ಇದು ಮುಂದೆ ಆಗಲಿರುವ ಪ್ರಾಕೃತಿಕ ದುರಂತ ಕ್ಕಿಂತಲೂ ದೊಡ್ಡ ದುರಂತ…
“ಜೈ ನೇತ್ರಾವತಿ

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ