ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ)

ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ ಅಪಾಯದ ಮುನ್ಸೂಚನೆ ಅಂತೂ ಖಂಡಿತಾ ಹೌದು. ಮಳೆಗಾಲದ ಭೂಕುಸಿತವೇ ಅಪಾಯಕಾರಿ, ಅದಕ್ಕೇ ಇನ್ನೂ ನಮ್ಮ ಸರಕಾರದ ಯಾವ ಕ್ರಮಗಳೂ ಆಗಿಲ್ಲ, ಅದರ ಬಗ್ಗೆ ಅಧ್ಯಯನ ವರದಿಯೂ ಆಗಲಿಲ್ಲ, ಅದು ಇನ್ನು ಮುಂದೆ ಆಗದಂತೆ ಯೋಚನಾ ಕ್ರಮಗಳೂ, ಕ್ರಿಯೆಗಳೂ ಆಗಿಲ್ಲ. ಇದು ಈ ಸಮಯದಲ್ಲಿ ಏಕಾಏಕಿ ಭೂಕುಸಿತ ಆಗುತ್ತಿದೆ ಎಂದರೆ ಬಹಳಷ್ಟು ಯೋಚಿಸಬೇಕಾದ ಮತ್ತು ಯೋಚನೆಗಳಿಗೆ ಪೂರಕ ಕ್ರಮಗಳನ್ನು ಕೈ ಗೊಳ್ಳಬೇಕಾದ ಪ್ರಮುಖ ವಿಚಾರವಿದು.

ನೇತ್ರಾವತಿ ನದಿಯು ಪಶ್ಚಿಮ ಘಟ್ಟದ ಹಲವಾರು ಗಿರಿ, ಕಾನನ, ಕಣಿವೆಗಳಿಂದ ಹರಿದು ಬರುವ ಕರಾವಳಿಯ ಜೀವನದಿ ಯಾಗಿದ್ದು ಇದರ ಮಹತ್ವ ಮತ್ತು ಅಗತ್ಯವು ರಾಜಕಾರಣಿಗಳಿಗೆ ಬಿಡಿ ದಕ್ಷಿಣ ಕನ್ನಡದ ಕೆಲವು ಪಕ್ಷ, ರಾಜಕೀಯ ಕೃಪಾ ಪೋಷಿತ ಜನತೆಗೆ ಇನ್ನೂ ಅರ್ಥವಾಗಿಲ್ಲ. ಕಡ್ತಕಲ್, ಎಳನೀರು, ಚಾರ್ಮಾಡಿ, ಶಿರಾಡಿ, ಬಿಸಿಲೆ, ಬೈರಾಪುರ ಘಾಟಿ ಪ್ರದೇಶಗಳಿಂದ ಬರುವ 9 ಉಪ ನದಿಗಳಲ್ಲಿ ಎಳನೀರು ಘಾಟಿಯ ಬಂಗ್ರ ಬಲಿಕೆ ಕಣಿವೆಯ ಮೂಲ ಸ್ಥಾನದ ನೀರಿನ ಹರಿವೇ ಪ್ರಮುಖವಾಗಿರುತ್ತದೆ. ಕುದುರೆ ಮುಖದ ಹಿರಿಮರಿ, ತಿರಿಮರಿ ಗುಪ್ಪೆ, ಕೃಷ್ಣ ಗಿರಿಯ ನಡುವಿನ ಶೋಲಾ ಅಡವಿಯಲ್ಲಿ ಉಗಮವಾಗಿ ಅಲ್ಲಿ ಇನ್ನಿತರ ಕಣಿವೆಗಳಲ್ಲಿ ಹರಿದು ಬರುವ ಎಳನೀರು ಹೊಳೆ, ಮಾವಿನಸಸಿ ಹೊಳೆ, ಬಡಮನೆ ಹೊಳೆ, ಶಿರ್ಲಾಲು, ಶಿವನಾಳ ಹೊಳೆ ನೇತ್ರಾವತಿಯ ಪ್ರಮುಖ ಭಾಗವೇ ಆಗಿರುವ ಎಳನೀರು ಹೊಳೆಯ ಹೃದಯ ಭಾಗವೇ ಆಗಿರುತ್ತದೆ. ಬಹುಶಃ ಎಳನೀರು ಹೊಳೆಯ ಮಳೆಗಾಲದ ನೀರಿನ ಇಳುವರಿ ( ವಾಟರ್ ಕ್ಯಾಚ್ ಮೆಂಟ್ ಏರಿಯಾ ) ಕಡಿಮೆ ಆಗುತ್ತಿದ್ದು ನೀರನ್ನು ಹಿಡಿದಿಟ್ಟು ಕೊಳ್ಳುವಂತಹ ಬೆಟ್ಟದ ಮೇಲ್ನೈ ಪದರವು ಗಡಸುತನ ಕಳೆದುಕೊಂಡು ಮೆದುವಾಗುತ್ತಾ ವರ್ಷದಿಂದ ವರ್ಷಕ್ಕೆ ನೀರಿನ ಹಿಡಿತದ ವ್ಯಾಪ್ತಿ ಕಡಿಮೆಯಾಗುತ್ತಾ ಒರತೆಯ ಕೊರತೆ ಆಗುತ್ತಾ ಇರುವುದರಿಂದ 65 ಡಿಗ್ರೀಯಿಂದ 85 ಡಿಗ್ರಿ ವರೆವಿನ ಕಣಿವೆ, ಕಂದರದಲ್ಲಿ ಈ ರೀತಿಯ ಭೂಕುಸಿತ ಆಗುವ ಸಾಧ್ಯತೆಗಳು ಇವೆ. ಈ ಸಂದರ್ಭದಲ್ಲೇ ಭೂಕುಸಿತ ಆದರೆ ಇನ್ನು ಮುಂದಿನ ಮಳೆಗಾಲದಲ್ಲಿ ಇನ್ನಷ್ಟು ಕುಸಿತ ಆಗುವದಂತೂ ಖಂಡಿತ. ಚಾರ್ಮಾಡಿಯಲ್ಲಿ ಕಳೆದ 2 ವರ್ಷಗಳಲ್ಲಿ ಭೂಕುಸಿತ ಆಗಿ ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿ ಬಡಕಲಾಗುತ್ತ ಬಂದಿದೆ. ಶಿರಾಡಿ ಘಾಟಿಯಲ್ಲಿ ಎತ್ತಿನ ಹೊಳೆ ಯೋಜನೆ ಕಾಮಗಾರಿಯಿಂದ ನೇತ್ರಾವತಿಯ ಇನ್ನೊಂದು ಉಪನದಿ ಕೆಂಪು ಹೊಳೆ ಈಗಾಗಲೇ ಅರ್ಧ ಜೀವವನ್ನು ಕಳೆದು ಕೊಂಡಿದೆ. ಈಗಾಗಲೇ 4 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗುತ್ತಿದ್ದು ಬರಗಾಲದ ತೀರ್ವತೆ ಹೆಚ್ಚಾಗುತ್ತಾ ಇದೆ. ರಾಜಕೀಯದ ಅ0ಡೇ ಪಿರ್ಕಿಗಳಿಗಂತೂ ನದಿ ಎಂದರೆ ದುಡ್ಡು ಲೂಟಿ ಮಾಡುವ ಬಿಗ್ ಪ್ರಾಜೆಕ್ಟ್ ಆಗಿ ಬಿಟ್ಟಿದೆ, ಆದರೆ ನದಿಯನ್ನೇ ಆಶ್ರಯಿಸಿಕೊಂಡು ಬದುಕುವ ಜನರಿಗೆ ಅರ್ಥ ಆಗುತ್ತಿಲ್ಲಾ ಎಂದರೆ ಇದು ಮುಂದೆ ಆಗಲಿರುವ ಪ್ರಾಕೃತಿಕ ದುರಂತ ಕ್ಕಿಂತಲೂ ದೊಡ್ಡ ದುರಂತ…
“ಜೈ ನೇತ್ರಾವತಿ

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 22 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 19 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 46 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 40 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 61 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 58 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ