ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ)

ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ ಅಪಾಯದ ಮುನ್ಸೂಚನೆ ಅಂತೂ ಖಂಡಿತಾ ಹೌದು. ಮಳೆಗಾಲದ ಭೂಕುಸಿತವೇ ಅಪಾಯಕಾರಿ, ಅದಕ್ಕೇ ಇನ್ನೂ ನಮ್ಮ ಸರಕಾರದ ಯಾವ ಕ್ರಮಗಳೂ ಆಗಿಲ್ಲ, ಅದರ ಬಗ್ಗೆ ಅಧ್ಯಯನ ವರದಿಯೂ ಆಗಲಿಲ್ಲ, ಅದು ಇನ್ನು ಮುಂದೆ ಆಗದಂತೆ ಯೋಚನಾ ಕ್ರಮಗಳೂ, ಕ್ರಿಯೆಗಳೂ ಆಗಿಲ್ಲ. ಇದು ಈ ಸಮಯದಲ್ಲಿ ಏಕಾಏಕಿ ಭೂಕುಸಿತ ಆಗುತ್ತಿದೆ ಎಂದರೆ ಬಹಳಷ್ಟು ಯೋಚಿಸಬೇಕಾದ ಮತ್ತು ಯೋಚನೆಗಳಿಗೆ ಪೂರಕ ಕ್ರಮಗಳನ್ನು ಕೈ ಗೊಳ್ಳಬೇಕಾದ ಪ್ರಮುಖ ವಿಚಾರವಿದು.

ನೇತ್ರಾವತಿ ನದಿಯು ಪಶ್ಚಿಮ ಘಟ್ಟದ ಹಲವಾರು ಗಿರಿ, ಕಾನನ, ಕಣಿವೆಗಳಿಂದ ಹರಿದು ಬರುವ ಕರಾವಳಿಯ ಜೀವನದಿ ಯಾಗಿದ್ದು ಇದರ ಮಹತ್ವ ಮತ್ತು ಅಗತ್ಯವು ರಾಜಕಾರಣಿಗಳಿಗೆ ಬಿಡಿ ದಕ್ಷಿಣ ಕನ್ನಡದ ಕೆಲವು ಪಕ್ಷ, ರಾಜಕೀಯ ಕೃಪಾ ಪೋಷಿತ ಜನತೆಗೆ ಇನ್ನೂ ಅರ್ಥವಾಗಿಲ್ಲ. ಕಡ್ತಕಲ್, ಎಳನೀರು, ಚಾರ್ಮಾಡಿ, ಶಿರಾಡಿ, ಬಿಸಿಲೆ, ಬೈರಾಪುರ ಘಾಟಿ ಪ್ರದೇಶಗಳಿಂದ ಬರುವ 9 ಉಪ ನದಿಗಳಲ್ಲಿ ಎಳನೀರು ಘಾಟಿಯ ಬಂಗ್ರ ಬಲಿಕೆ ಕಣಿವೆಯ ಮೂಲ ಸ್ಥಾನದ ನೀರಿನ ಹರಿವೇ ಪ್ರಮುಖವಾಗಿರುತ್ತದೆ. ಕುದುರೆ ಮುಖದ ಹಿರಿಮರಿ, ತಿರಿಮರಿ ಗುಪ್ಪೆ, ಕೃಷ್ಣ ಗಿರಿಯ ನಡುವಿನ ಶೋಲಾ ಅಡವಿಯಲ್ಲಿ ಉಗಮವಾಗಿ ಅಲ್ಲಿ ಇನ್ನಿತರ ಕಣಿವೆಗಳಲ್ಲಿ ಹರಿದು ಬರುವ ಎಳನೀರು ಹೊಳೆ, ಮಾವಿನಸಸಿ ಹೊಳೆ, ಬಡಮನೆ ಹೊಳೆ, ಶಿರ್ಲಾಲು, ಶಿವನಾಳ ಹೊಳೆ ನೇತ್ರಾವತಿಯ ಪ್ರಮುಖ ಭಾಗವೇ ಆಗಿರುವ ಎಳನೀರು ಹೊಳೆಯ ಹೃದಯ ಭಾಗವೇ ಆಗಿರುತ್ತದೆ. ಬಹುಶಃ ಎಳನೀರು ಹೊಳೆಯ ಮಳೆಗಾಲದ ನೀರಿನ ಇಳುವರಿ ( ವಾಟರ್ ಕ್ಯಾಚ್ ಮೆಂಟ್ ಏರಿಯಾ ) ಕಡಿಮೆ ಆಗುತ್ತಿದ್ದು ನೀರನ್ನು ಹಿಡಿದಿಟ್ಟು ಕೊಳ್ಳುವಂತಹ ಬೆಟ್ಟದ ಮೇಲ್ನೈ ಪದರವು ಗಡಸುತನ ಕಳೆದುಕೊಂಡು ಮೆದುವಾಗುತ್ತಾ ವರ್ಷದಿಂದ ವರ್ಷಕ್ಕೆ ನೀರಿನ ಹಿಡಿತದ ವ್ಯಾಪ್ತಿ ಕಡಿಮೆಯಾಗುತ್ತಾ ಒರತೆಯ ಕೊರತೆ ಆಗುತ್ತಾ ಇರುವುದರಿಂದ 65 ಡಿಗ್ರೀಯಿಂದ 85 ಡಿಗ್ರಿ ವರೆವಿನ ಕಣಿವೆ, ಕಂದರದಲ್ಲಿ ಈ ರೀತಿಯ ಭೂಕುಸಿತ ಆಗುವ ಸಾಧ್ಯತೆಗಳು ಇವೆ. ಈ ಸಂದರ್ಭದಲ್ಲೇ ಭೂಕುಸಿತ ಆದರೆ ಇನ್ನು ಮುಂದಿನ ಮಳೆಗಾಲದಲ್ಲಿ ಇನ್ನಷ್ಟು ಕುಸಿತ ಆಗುವದಂತೂ ಖಂಡಿತ. ಚಾರ್ಮಾಡಿಯಲ್ಲಿ ಕಳೆದ 2 ವರ್ಷಗಳಲ್ಲಿ ಭೂಕುಸಿತ ಆಗಿ ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿ ಬಡಕಲಾಗುತ್ತ ಬಂದಿದೆ. ಶಿರಾಡಿ ಘಾಟಿಯಲ್ಲಿ ಎತ್ತಿನ ಹೊಳೆ ಯೋಜನೆ ಕಾಮಗಾರಿಯಿಂದ ನೇತ್ರಾವತಿಯ ಇನ್ನೊಂದು ಉಪನದಿ ಕೆಂಪು ಹೊಳೆ ಈಗಾಗಲೇ ಅರ್ಧ ಜೀವವನ್ನು ಕಳೆದು ಕೊಂಡಿದೆ. ಈಗಾಗಲೇ 4 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗುತ್ತಿದ್ದು ಬರಗಾಲದ ತೀರ್ವತೆ ಹೆಚ್ಚಾಗುತ್ತಾ ಇದೆ. ರಾಜಕೀಯದ ಅ0ಡೇ ಪಿರ್ಕಿಗಳಿಗಂತೂ ನದಿ ಎಂದರೆ ದುಡ್ಡು ಲೂಟಿ ಮಾಡುವ ಬಿಗ್ ಪ್ರಾಜೆಕ್ಟ್ ಆಗಿ ಬಿಟ್ಟಿದೆ, ಆದರೆ ನದಿಯನ್ನೇ ಆಶ್ರಯಿಸಿಕೊಂಡು ಬದುಕುವ ಜನರಿಗೆ ಅರ್ಥ ಆಗುತ್ತಿಲ್ಲಾ ಎಂದರೆ ಇದು ಮುಂದೆ ಆಗಲಿರುವ ಪ್ರಾಕೃತಿಕ ದುರಂತ ಕ್ಕಿಂತಲೂ ದೊಡ್ಡ ದುರಂತ…
“ಜೈ ನೇತ್ರಾವತಿ

Spread the love
  • Related Posts

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…

    Spread the love

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    You Missed

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 36 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 170 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 82 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 281 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 192 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 114 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು