ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ)

ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ ಅಪಾಯದ ಮುನ್ಸೂಚನೆ ಅಂತೂ ಖಂಡಿತಾ ಹೌದು. ಮಳೆಗಾಲದ ಭೂಕುಸಿತವೇ ಅಪಾಯಕಾರಿ, ಅದಕ್ಕೇ ಇನ್ನೂ ನಮ್ಮ ಸರಕಾರದ ಯಾವ ಕ್ರಮಗಳೂ ಆಗಿಲ್ಲ, ಅದರ ಬಗ್ಗೆ ಅಧ್ಯಯನ ವರದಿಯೂ ಆಗಲಿಲ್ಲ, ಅದು ಇನ್ನು ಮುಂದೆ ಆಗದಂತೆ ಯೋಚನಾ ಕ್ರಮಗಳೂ, ಕ್ರಿಯೆಗಳೂ ಆಗಿಲ್ಲ. ಇದು ಈ ಸಮಯದಲ್ಲಿ ಏಕಾಏಕಿ ಭೂಕುಸಿತ ಆಗುತ್ತಿದೆ ಎಂದರೆ ಬಹಳಷ್ಟು ಯೋಚಿಸಬೇಕಾದ ಮತ್ತು ಯೋಚನೆಗಳಿಗೆ ಪೂರಕ ಕ್ರಮಗಳನ್ನು ಕೈ ಗೊಳ್ಳಬೇಕಾದ ಪ್ರಮುಖ ವಿಚಾರವಿದು.

ನೇತ್ರಾವತಿ ನದಿಯು ಪಶ್ಚಿಮ ಘಟ್ಟದ ಹಲವಾರು ಗಿರಿ, ಕಾನನ, ಕಣಿವೆಗಳಿಂದ ಹರಿದು ಬರುವ ಕರಾವಳಿಯ ಜೀವನದಿ ಯಾಗಿದ್ದು ಇದರ ಮಹತ್ವ ಮತ್ತು ಅಗತ್ಯವು ರಾಜಕಾರಣಿಗಳಿಗೆ ಬಿಡಿ ದಕ್ಷಿಣ ಕನ್ನಡದ ಕೆಲವು ಪಕ್ಷ, ರಾಜಕೀಯ ಕೃಪಾ ಪೋಷಿತ ಜನತೆಗೆ ಇನ್ನೂ ಅರ್ಥವಾಗಿಲ್ಲ. ಕಡ್ತಕಲ್, ಎಳನೀರು, ಚಾರ್ಮಾಡಿ, ಶಿರಾಡಿ, ಬಿಸಿಲೆ, ಬೈರಾಪುರ ಘಾಟಿ ಪ್ರದೇಶಗಳಿಂದ ಬರುವ 9 ಉಪ ನದಿಗಳಲ್ಲಿ ಎಳನೀರು ಘಾಟಿಯ ಬಂಗ್ರ ಬಲಿಕೆ ಕಣಿವೆಯ ಮೂಲ ಸ್ಥಾನದ ನೀರಿನ ಹರಿವೇ ಪ್ರಮುಖವಾಗಿರುತ್ತದೆ. ಕುದುರೆ ಮುಖದ ಹಿರಿಮರಿ, ತಿರಿಮರಿ ಗುಪ್ಪೆ, ಕೃಷ್ಣ ಗಿರಿಯ ನಡುವಿನ ಶೋಲಾ ಅಡವಿಯಲ್ಲಿ ಉಗಮವಾಗಿ ಅಲ್ಲಿ ಇನ್ನಿತರ ಕಣಿವೆಗಳಲ್ಲಿ ಹರಿದು ಬರುವ ಎಳನೀರು ಹೊಳೆ, ಮಾವಿನಸಸಿ ಹೊಳೆ, ಬಡಮನೆ ಹೊಳೆ, ಶಿರ್ಲಾಲು, ಶಿವನಾಳ ಹೊಳೆ ನೇತ್ರಾವತಿಯ ಪ್ರಮುಖ ಭಾಗವೇ ಆಗಿರುವ ಎಳನೀರು ಹೊಳೆಯ ಹೃದಯ ಭಾಗವೇ ಆಗಿರುತ್ತದೆ. ಬಹುಶಃ ಎಳನೀರು ಹೊಳೆಯ ಮಳೆಗಾಲದ ನೀರಿನ ಇಳುವರಿ ( ವಾಟರ್ ಕ್ಯಾಚ್ ಮೆಂಟ್ ಏರಿಯಾ ) ಕಡಿಮೆ ಆಗುತ್ತಿದ್ದು ನೀರನ್ನು ಹಿಡಿದಿಟ್ಟು ಕೊಳ್ಳುವಂತಹ ಬೆಟ್ಟದ ಮೇಲ್ನೈ ಪದರವು ಗಡಸುತನ ಕಳೆದುಕೊಂಡು ಮೆದುವಾಗುತ್ತಾ ವರ್ಷದಿಂದ ವರ್ಷಕ್ಕೆ ನೀರಿನ ಹಿಡಿತದ ವ್ಯಾಪ್ತಿ ಕಡಿಮೆಯಾಗುತ್ತಾ ಒರತೆಯ ಕೊರತೆ ಆಗುತ್ತಾ ಇರುವುದರಿಂದ 65 ಡಿಗ್ರೀಯಿಂದ 85 ಡಿಗ್ರಿ ವರೆವಿನ ಕಣಿವೆ, ಕಂದರದಲ್ಲಿ ಈ ರೀತಿಯ ಭೂಕುಸಿತ ಆಗುವ ಸಾಧ್ಯತೆಗಳು ಇವೆ. ಈ ಸಂದರ್ಭದಲ್ಲೇ ಭೂಕುಸಿತ ಆದರೆ ಇನ್ನು ಮುಂದಿನ ಮಳೆಗಾಲದಲ್ಲಿ ಇನ್ನಷ್ಟು ಕುಸಿತ ಆಗುವದಂತೂ ಖಂಡಿತ. ಚಾರ್ಮಾಡಿಯಲ್ಲಿ ಕಳೆದ 2 ವರ್ಷಗಳಲ್ಲಿ ಭೂಕುಸಿತ ಆಗಿ ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿ ಬಡಕಲಾಗುತ್ತ ಬಂದಿದೆ. ಶಿರಾಡಿ ಘಾಟಿಯಲ್ಲಿ ಎತ್ತಿನ ಹೊಳೆ ಯೋಜನೆ ಕಾಮಗಾರಿಯಿಂದ ನೇತ್ರಾವತಿಯ ಇನ್ನೊಂದು ಉಪನದಿ ಕೆಂಪು ಹೊಳೆ ಈಗಾಗಲೇ ಅರ್ಧ ಜೀವವನ್ನು ಕಳೆದು ಕೊಂಡಿದೆ. ಈಗಾಗಲೇ 4 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗುತ್ತಿದ್ದು ಬರಗಾಲದ ತೀರ್ವತೆ ಹೆಚ್ಚಾಗುತ್ತಾ ಇದೆ. ರಾಜಕೀಯದ ಅ0ಡೇ ಪಿರ್ಕಿಗಳಿಗಂತೂ ನದಿ ಎಂದರೆ ದುಡ್ಡು ಲೂಟಿ ಮಾಡುವ ಬಿಗ್ ಪ್ರಾಜೆಕ್ಟ್ ಆಗಿ ಬಿಟ್ಟಿದೆ, ಆದರೆ ನದಿಯನ್ನೇ ಆಶ್ರಯಿಸಿಕೊಂಡು ಬದುಕುವ ಜನರಿಗೆ ಅರ್ಥ ಆಗುತ್ತಿಲ್ಲಾ ಎಂದರೆ ಇದು ಮುಂದೆ ಆಗಲಿರುವ ಪ್ರಾಕೃತಿಕ ದುರಂತ ಕ್ಕಿಂತಲೂ ದೊಡ್ಡ ದುರಂತ…
“ಜೈ ನೇತ್ರಾವತಿ

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!