ರೋಡ್‌ ಸೇಫ್ಟಿ ಸೀರೀಸ್‌: ಇಂಡಿಯಾ ಲೆಜೆಂಡ್ಸ್‌ ಚಾಂಪಿಯನ್‌

ರಾಯ್ಪುರ: ಉದ್ಘಾಟನಾ ಆವೃತ್ತಿಯ ರಸ್ತೆ ಸುರಕ್ಷತಾ ವಿಶ್ವ ಸೀರೀಸ್‌ ಟಿ20 ಕ್ರಿಕೆಟ್‌ ಟೂರ್ನಿಯ ಚಾಂಪಿಯನ್‌ ಆಗಿ ಇಂಡಿಯಾ ಲೆಜೆಂಡ್ಸ್‌ ತಂಡ ಹೊರಹೊಮ್ಮಿದೆ. ಕಳೆದ 2 ವಾರಗಳಿಂದ ಇಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು.

ಸಚಿನ್‌ ತೆಂಡುಲ್ಕರ್‌ ನೇತೃತ್ವದ ಇಂಡಿಯಾ ಲೆಜೆಂಡ್ಸ್‌ ತಂಡ, ಸನತ್‌ ಜಯಸೂರ್ಯ, ತಿಲಕರತ್ನೆ ದಿಲ್ಶಾನ್‌ ಸೇರಿ ಹಲವು ದಿಗ್ಗಜ ಕ್ರಿಕೆಟಿಗರನ್ನು ಒಳಗೊಂಡಿದ್ದ ಲಂಕಾ ವಿರುದ್ಧ 14 ರನ್‌ಗಳ ಗೆಲುವು ಸಾಧಿಸಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸಚಿನ್ ತೆಂಡುಲ್ಕರ್ ನೇತೃತ್ವದ ಇಂಡಿಯಾ ಲೆಜೆಂಡ್ಸ್‌, ಯುವರಾಜ್‌ ಸಿಂಗ್(60), ಯೂಸುಫ್‌ ಪಠಾಣ್‌(62) ಸ್ಫೋಟಕ ಆಟದ ನೆರವಿನಿಂದ ಭಾರತ 4 ವಿಕೆಟ್‌ಗೆ 181 ರನ್‌ ಗಳಿಸಿತ್ತು.

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಶ್ರೀಲಂಕಾ ಲೆಜೆಂಡ್ಸ್‌ ಸನತ್ ಜಯಸೂರ್ಯ(43) ಹಾಗೂ ಚಿಂತಕ ಜಯಸಿಂಘೆ(40) ಆಕರ್ಷಕ ಬ್ಯಾಟಿಂಗ್‌ ಹೊರತಾಗಿಯೂ 14 ರನ್‌ಗಳ ಸೋಲು ಕಂಡಿತು. ಫೈನಲ್‌ ಪಂದ್ಯದಲ್ಲಿ ಆಲ್ರೌಂಡ್‌ ಪ್ರದರ್ಶನ ತೋರಿದ ಯೂಸುಫ್ ಪಠಾಣ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ತಿಲಕರತ್ನೆ ದಿಲ್ಶಾನ್‌ ಸರಣಿಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    • By admin
    • July 11, 2026
    • 12 views
    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    • By admin
    • July 10, 2026
    • 19 views
    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    • By admin
    • July 9, 2026
    • 33 views
    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    • By admin
    • July 7, 2026
    • 77 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    • By admin
    • July 7, 2026
    • 364 views
    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    • By admin
    • July 7, 2026
    • 78 views
    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ