ವಿಶೇಷ ಸಾಧನೆ ಮಾಡಿದ ಬೆಳ್ತಂಗಡಿಯ ಸಬಿತಾ ಮೋನಿಸ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ

ಬೆಳ್ತಂಗಡಿ: ನವದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಪತ್ರಿಕೆಗಳ ಸಂಘ ಜಂಟಿಯಾಗಿ ಪ್ರಾಯೋಜಿಸುತ್ತಿರುವ ಈ ಪ್ರಶಸ್ತಿ ಅತ್ಯಂತ ಗೌರವದ ಹೆಜ್ಜೆ ಗುರುತು ಮೂಡಿಸಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುವ ಸಬಿತಾ ಮೋನಿಸ್ ತಮ್ಮ ದೈಹಿಕ‌ ನ್ಯೂನತೆಯನ್ನು ಮೆಟ್ಟಿನಿಂತು ಛಲ ಬಿಡದೇ ತಮ್ಮ ಎರಡು ಕಾಲುಗಳಿಂದಲೇ ಪರೀಕ್ಷೆ ಬರೆದು ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ.

ಪ್ರತಿ ಸಾರ್ವತ್ರಿಕ ಚುನಾವಣೆಯಲ್ಲೂ ಕಾಲಿನಿಂದಲೇ ಮತ ಚಲಾಯಿಸುವ ಮೂಲಕ ಅವರು ರಾಜ್ಯದ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಸದ್ಯ ಅವರು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಈ ವಿಶೇಷ ಸಾಧನೆಯನ್ನು ಅಸಾಮಾನ್ಯ ಸಾಧನೆ ಎಂದು ಪರಿಗಣಿಸಿ ಅವರನ್ನು ಈ‌ ಪುರಸ್ಕಾರಕ್ಕೆ ಪರಿಗಣಿಸಲಾಗಿದೆ ಎಂದು ಆಯ್ಕೆ ಮಂಡಳಿ ಘೋಷಿಸಿದೆ.

ಅಂಗವೈಕಲ್ಯತೆ ಎಂಬುವುದನ್ನು ಮರೆತು ಧೃತಿಗೆಡದೇ ಪ್ರಯತ್ನ ಪಟ್ಟಲ್ಲಿ ಎಲ್ಲವನ್ನೂ ಮನಸ್ಸಿನಿಂದ ಸಾಧಿಸಬಹುದು. ದೇಹದ ಅಂಗ ನ್ಯೂನತೆಯ ಬಗ್ಗೆ ಯೋಚಿಸದೇ ಸಾಧಿಸಿದರೆ ಎಲ್ಲವನ್ನೂ ಜಯಿಸಬಹುದು ಅಂದ್ರು. ಹುಟ್ಟಿನಿಂದಲೇ ನನಗೆ ಕೈಗಳಿಲ್ಲದಿದ್ದರೂ ಕಾಲನ್ನೇ ಕೈಗಳನ್ನಾಗಿಸಿಕೊಂಡು ಅದರಲ್ಲೇ ನನ್ನ ದಿನನಿತ್ಯದ ಕೆಲಸಗಳನ್ನು ಮಾಡುತ್ತೇನೆ, ಅದಲ್ಲದೆ ಎಲ್ಲರಂತೆ ನಾನೂ ವಿದ್ಯಾಭ್ಯಾಸ ‌ಉತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಮುಗಿಸಿ ಇದೀಗ ನೌಕರಿಯನ್ನು ಮಾಡುತಿದ್ದೇನೆ. ಕೈಗಳಿಲ್ಲ ಎಂದು ಧೃತಿಗೆಟ್ಟು ಕುಳಿತಿದ್ದರೆ ನಾನು ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿರಲಿಲ್ಲ, ಈ ನನ್ನ ಪ್ರಯತ್ನಕ್ಕೆ ನಮ್ಮ ಮನೆಯವರು ಶಾಲಾ ಅಧ್ಯಾಪಕರು, ಗೆಳೆಯರು ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಾ ಬರುತಿದ್ದಾರೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಮೋಹನ್ ಆಳ್ವಾ ಅವರು ಉಚಿತ ಶಿಕ್ಷಣ ನೀಡಿದ್ದಲ್ಲದೇ ಅದೇ ಕಾಲೇಜಿನಲ್ಲಿ ಉದ್ಯೋಗವನ್ನೂ ಕಲ್ಪಿಸಿ ಕೊಟ್ಟಿದ್ದಾರೆ. ನನ್ನ ಎಲ್ಲ ಪ್ರಯತ್ನಗಳಿಗೆ ಸಹಕಾರ ನೀಡಿದ ಹಾಗೂ ನನ್ನ ಸಾಧನೆಯನ್ನು ಗುರುತಿಸಿ ಗೌರವಿಸಿದ ಸಂಘ ಸಂಸ್ಥೆಗಳಿಗೆ ಅಭಿನಂದನೆಗಳು ಎಂದ ಸಬಿತಾ ಮೋನಿಸ್ , ಸಮಾಜದಲ್ಲಿ ಪ್ರತಿಯೊಬ್ಬ ಮಹಿಳೆಗೆ ಗೌರವ ನೀಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕು‌ ಹಾಗೆಯೇ ಮಹಿಳೆಯರೂ ಕೂಡ ಧೃತಿಗೆಡದೇ ಪ್ರಯತ್ನ ಪಡಬೇಕು ಆಗ ಪ್ರಯತ್ನಕ್ಕೆ ಫಲ ಸಿಕ್ಕೆಸಿಗುತ್ತದೆ ಎಂದು ಸಾಧಕಿ ಸಬಿತಾ ಮೋನಿಸ್ ಅಭಿಪ್ರಾಯಪಟ್ಟರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ