ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿ

ಬೆಂಗಳೂರು : ಕರ್ನಾಟಕ ಸರ್ಕಾರಿ ನೌಕರರ ವೇತನವನ್ನು 17 ಶೇ. ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬರುವ ಏಪ್ರಿಲ್ 1 ರಿಂದ ಈ ನೂತನ ಆದೇಶ ಜಾರಿಯಾಗಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಇದರ ಅನ್ವಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.

ಈಗಿನ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಯ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಆಗಲಿದೆ. ಬರುವ ಏಪ್ರಿಲ್‌ 1 ರಿಂದ ಜಾರಿಗೆ ಬರುವಂತೆ ಸರ್ಕಾರ ಈ ಅಧಿಕೃತ ಆದೇಶ ಹೊರಡಿಸಿದೆ.
ಮೂಲವೇತನದಲ್ಲಿ ಈ ಕೆಳಗಿನ ಅಂಶಗಳು ಬಲಿದೆ. ವೈಯಕ್ತಿಕ ವೇತನಡಾ ಜತೆಗೆ ಸ್ಥಗಿತ ವೇತನ ಬಡ್ತಿ, ಜೊತೆಗೆ ಹೆಚ್ಚುವರಿ ವೇತನ ಬಡ್ತಿ ಕೂಡಾ ಇದರಲ್ಲಿ ಸೇರಿರುತ್ತದೆ. ಸರ್ಕಾರದ ಆದೇಶದಿಂದ ಮೂಲವೇತನದ ಶೇ.17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಲು ತೀರ್ಮಾನಿಸಲಾಗಿದೆ.

ಈಗಿನ ಅದೇಶದಲ್ಲೇನಿದೆ?
ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ, 2018 ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ಹರ್ಷಿಸುತ್ತದೆ ಎಂದಿದೆ ಬೊಮ್ಮಾಯಿ ಸರ್ಕಾರ.

ಮೂಲ ವೇತನ ಎಂದರೆ ಸರ್ಕಾರಿ ನೌಕರನು ಹೊಂದಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ. ಮತ್ತು ಅದರಲ್ಲಿ ಆಯಾ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಅದು ಸ್ಥಗಿತ ವೇತನ ಬಡ್ತಿ ಆಗುತ್ತದೆ. ಆ- 2018 ರ ಕರ್ನಾಟಕ ನಾಗರೀಕ ಸೇವಾ ( ಪರಿಷ್ಕೃತ ವೇತನ) ನಿಯಮಗಳ ನಿಯಮ 3 (ಸಿ) ಯನ್ನು ಓದಿಕೊಂಡು 7 ನೇ ನಿಯಮದ (3) ನೇ ಉಪ ನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ ಆ ವೈಯಕ್ತಿಕ ವೇತನ ಇ- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ ಅವುಗಳು ಸೇರುತ್ತವೆ ಎಂದು ಉಲ್ಲೇಖದಲ್ಲಿ ಹೇಳಿದೆ.

ಈ ನಡುವೆ ರಾಜ್ಯ ಸರ್ಕಾರ ಎರಡು ಆದೇಶ ಹೊರಡಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ 2 ಆದೇಶವನ್ನು ಹೊರಡಿಸಿದೆ. ಸರ್ಕಾರಿ ನೌಕರರ ವೇತನ ಶೇಕಡಾ 17ರಷ್ಟು ಹೆಚ್ಚಳ ಮತ್ತು ರಾಷ್ಟ್ರೀಯ ಪಿಂಚಣಿ ಯೋಜನೆ​ ಬಗ್ಗೆ ಪರಿಶೀಲನೆ ಸಂಬಂಧ ಆದೇಶ ಹೊರಡಿಸಿದೆ. ಎನ್​ಪಿಎಸ್​ ನಿವೃತ್ತ ನೌಕರರು ಸೇರಿದಂತೆ 15 ಲಕ್ಷ ಸರ್ಕಾರಿ ನೌಕರರಿಗೆ ಈ ಯೋಜನೆ ಅನ್ವಯವಾಗುತ್ತದೆ ಎಂದು ಷಡಕ್ಷರಿ ಅವರು ಹೇಳಿಕೆ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ