ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿ

ಬೆಂಗಳೂರು : ಕರ್ನಾಟಕ ಸರ್ಕಾರಿ ನೌಕರರ ವೇತನವನ್ನು 17 ಶೇ. ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬರುವ ಏಪ್ರಿಲ್ 1 ರಿಂದ ಈ ನೂತನ ಆದೇಶ ಜಾರಿಯಾಗಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಇದರ ಅನ್ವಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.

ಈಗಿನ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಯ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಆಗಲಿದೆ. ಬರುವ ಏಪ್ರಿಲ್‌ 1 ರಿಂದ ಜಾರಿಗೆ ಬರುವಂತೆ ಸರ್ಕಾರ ಈ ಅಧಿಕೃತ ಆದೇಶ ಹೊರಡಿಸಿದೆ.
ಮೂಲವೇತನದಲ್ಲಿ ಈ ಕೆಳಗಿನ ಅಂಶಗಳು ಬಲಿದೆ. ವೈಯಕ್ತಿಕ ವೇತನಡಾ ಜತೆಗೆ ಸ್ಥಗಿತ ವೇತನ ಬಡ್ತಿ, ಜೊತೆಗೆ ಹೆಚ್ಚುವರಿ ವೇತನ ಬಡ್ತಿ ಕೂಡಾ ಇದರಲ್ಲಿ ಸೇರಿರುತ್ತದೆ. ಸರ್ಕಾರದ ಆದೇಶದಿಂದ ಮೂಲವೇತನದ ಶೇ.17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಲು ತೀರ್ಮಾನಿಸಲಾಗಿದೆ.

ಈಗಿನ ಅದೇಶದಲ್ಲೇನಿದೆ?
ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ, 2018 ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ಹರ್ಷಿಸುತ್ತದೆ ಎಂದಿದೆ ಬೊಮ್ಮಾಯಿ ಸರ್ಕಾರ.

ಮೂಲ ವೇತನ ಎಂದರೆ ಸರ್ಕಾರಿ ನೌಕರನು ಹೊಂದಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ. ಮತ್ತು ಅದರಲ್ಲಿ ಆಯಾ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಅದು ಸ್ಥಗಿತ ವೇತನ ಬಡ್ತಿ ಆಗುತ್ತದೆ. ಆ- 2018 ರ ಕರ್ನಾಟಕ ನಾಗರೀಕ ಸೇವಾ ( ಪರಿಷ್ಕೃತ ವೇತನ) ನಿಯಮಗಳ ನಿಯಮ 3 (ಸಿ) ಯನ್ನು ಓದಿಕೊಂಡು 7 ನೇ ನಿಯಮದ (3) ನೇ ಉಪ ನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ ಆ ವೈಯಕ್ತಿಕ ವೇತನ ಇ- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ ಅವುಗಳು ಸೇರುತ್ತವೆ ಎಂದು ಉಲ್ಲೇಖದಲ್ಲಿ ಹೇಳಿದೆ.

ಈ ನಡುವೆ ರಾಜ್ಯ ಸರ್ಕಾರ ಎರಡು ಆದೇಶ ಹೊರಡಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ 2 ಆದೇಶವನ್ನು ಹೊರಡಿಸಿದೆ. ಸರ್ಕಾರಿ ನೌಕರರ ವೇತನ ಶೇಕಡಾ 17ರಷ್ಟು ಹೆಚ್ಚಳ ಮತ್ತು ರಾಷ್ಟ್ರೀಯ ಪಿಂಚಣಿ ಯೋಜನೆ​ ಬಗ್ಗೆ ಪರಿಶೀಲನೆ ಸಂಬಂಧ ಆದೇಶ ಹೊರಡಿಸಿದೆ. ಎನ್​ಪಿಎಸ್​ ನಿವೃತ್ತ ನೌಕರರು ಸೇರಿದಂತೆ 15 ಲಕ್ಷ ಸರ್ಕಾರಿ ನೌಕರರಿಗೆ ಈ ಯೋಜನೆ ಅನ್ವಯವಾಗುತ್ತದೆ ಎಂದು ಷಡಕ್ಷರಿ ಅವರು ಹೇಳಿಕೆ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ