ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !

‘ಸಿಬಿಐ’ನ ವೈಫಲ್ಯವೋ ಅಥವಾ ರಾಷ್ಟ್ರವಾದಿಯ ತಪ್ಪಾದ ತನಿಖೆಯ ಪರಿಣಾಮವೋ ! – ಸನಾತನ ಸಂಸ್ಥೆ

ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ; ಆದರೆ ದಾಭೊಲಕರ ಪ್ರಕರಣದಲ್ಲಿ ಅವರದ್ದೇ ಗೃಹ ಇಲಾಖೆಯು ಮಾಡಿದ ತಪ್ಪಾದ ತನಿಖೆಯ ಪರಿಣಾಮವನ್ನು ಸನಾತನ ಸಂಸ್ಥೆಯು ಅನುಭವಿಸಬೇಕಾಗುತ್ತಿದೆ.

2013 ರಲ್ಲಿ ಡಾ. ಧಾಭೊಲಕರರ ಹತ್ಯೆಯಾಯಿತು, ಅದೇ ಸಮಯದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕ ಹಾಗೂ ರಾಜ್ಯದ ಅಂದಿನ ಗೃಹಸಚಿವರಾದ ಆರ್.ಆರ್. ಪಾಟಿಲ್ ಇವರ ಮಾರ್ಗದರ್ಶನದಲ್ಲಿ ಪೊಲೀಸರು ತಕ್ಷಣವೇ ತನಿಖೆಯನ್ನು ಮಾಡುತ್ತಾ ಮನೀಷ ನಾಗೋರಿ ಹಾಗೂ ವಿಕಾಸ ಖಂಡೆಲವಾಲ ಎಂಬ ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗಳನ್ನು ಬಂಧಿಸಿದರು. ಅವರಲ್ಲಿ ಪತ್ತೆಯಾದ ಪಿಸ್ತೂಲಿನಿಂದ ದಾಭೋಲಕರ ಇವರ ಹತ್ಯೆಯಾಯಿತು, ಅದಕ್ಕಾಗಿ ಸಾಕ್ಷಿಯೆಂದು ‘ಫಾರೆನ್ಸೀಕ್ ವರದಿ’ಯನ್ನೂ ನ್ಯಾಯಾಲದಲ್ಲಿ ಸಲ್ಲಿಸಿದ್ದರು. ನಂತರ ಈ ತನಿಖೆಯಿಂದ ಅಸಮಾಧಾನಗೊಂಡಿರುವ ದಾಭೋಲಕರ ಕುಟುಂಬದವರು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ತನಿಖೆಯನ್ನು ‘ಸಿಬಿಐ’ಗೆ ನೀಡುವಂತೆ ಆಗ್ರಹಿಸಿದರು. ಅದಕ್ಕನುಸಾರ ‘ಸಿಬಿಐ’ ತನಿಖೆಯನ್ನು ಆರಂಭಿಸಿತು ಹಾಗೂ ಅದು ಮಾನ್ಯ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ.

ಹೀಗಿರುವಾಗ ಒಂದು ವೇಳೆ ರಾಷ್ಟ್ರವಾದಿ ನಾಯಕರು ಹಾಗೂ ದಾಭೊಲಕರ ಕುಟುಂಬ ಇಂದು ‘ಸಿಬಿಐ’ ವಿಫಲಗೊಂಡಿದೆ ಎಂದು ನಿರ್ಧರಿಸುತ್ತಿದ್ದರೆ, ಅದು ಅವರದ್ದೇ ವೈಫಲ್ಯವಾಗಿದೆ. ‘ಸಿಬಿಐ’ನ ವೈಫಲ್ಯದ ಬಗ್ಗೆ ಮಾತನಾಡುವುದಿದ್ದರೆ, ಆರ್.ಆರ್.ಪಾಟಿಲ್ ಇವರ ಕಾಲದಲ್ಲಿ ನಡೆದ ತನಿಖೆಯ ಮೇಲೆಯೂ ಪ್ರಶ್ನೆಚಿಹ್ನೆ ನಿರ್ಮಾಣವಾಗುತ್ತದೆ. ಈ ಎರಡು ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗ ಅಪರಾಧ ‘ಫಾರೆನ್ಸಿಕ್ ವರದಿ’ಯಲ್ಲಿ ಸಿದ್ಧವಾಗಿರುವಾಗ ಈ ಇಬ್ಬರಿಗೆ ‘ಕ್ಲೀನ್‌ಚೀಟ್’ ಹೇಗೆ ಸಿಕ್ಕಿತು? ಇದರ ಬಗ್ಗೆ ದಾಭೊಲಕರ ಕುಟುಂಬದವರಾಗಲಿ, ಆಗಿನ ರಾಜ್ಯ ಸರಕಾರವಾಗಲಿ ಏನೂ ಮಾತನಾಡುವುದಿಲ್ಲ, ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್-ಎನ್‌ಸಿಪಿ ಸರ್ಕಾರದ ಅವಧಿಯಲ್ಲಿ 2013 ರಲ್ಲಿ ದಾಭೋಲ್ಕರರ ಹತ್ಯೆಯಾದಾಗ, ದಾಭೋಲ್ಕರ್ ಅವರ ಕುಟುಂಬವು ತನಿಖೆಯನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಿತು. ಕಾಲಕ್ರಮೇಣ ತನಿಖೆಯು ಸಿಬಿಐಗೆ ಹೋಯಿತು, ಅನಂತರ ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾಯಿತು. ಈ ಪ್ರಕರಣದಲ್ಲಿ ವಿನಾಕಾರಣ ಕೆಲವು ಹಿಂದುತ್ವನಿಷ್ಠ ಕಾರ್ಯಕರ್ತರ ಬಂಧನವಾಯಿತು. ಇನ್ನೂ ಏನೂ ಆಗಲಿಲ್ಲ ಎಂದು ದಾಭೋಲ್ಕರ್ ಕುಟುಂಬ ಕೂಗುತ್ತಲೇ ಇತ್ತು. ಈಗ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಈ ಮೂರು ಪಕ್ಷಗಳ ‘ಮಹಾವಿಕಾಸ್ ಮೈತ್ರಿಕೂಟ’ ಅಧಿಕಾರಕ್ಕೆ ಬಂದಿರುವುದರಿಂದ, ತನಿಖೆ ಮತ್ತು ಸರ್ಕಾರದ ಬಗ್ಗೆ ಇನ್ನೂ ಪ್ರಶ್ನೆಗಳು ಎದ್ದಿವೆ. ಈ ಘಟನೆಯಿಂದ ಎದ್ದು ಕಾಣುವ ಒಂದು ವಿಷಯವೇನೆಂದರೆ, ಯಾವುದೇ ಪಕ್ಷದ ಸರ್ಕಾರವಿದ್ದರೂ ತನಿಖಾದಳ ಯಾವುದೇ ಇರಲಿ; ‘ದಾಭೋಲ್ಕರರ ನಿಜವಾದ ಕೊಲೆಗಾರರು ಯಾರು’ ಎಂಬುದಕ್ಕಿಂತ ದಾಭೋಲ್ಕರ್ ಕುಟುಂಬದವರು ಯಾರನ್ನು ‘ಕೊಲೆಗಾರ’ ಎಂದು ನಿರ್ಧರಿಸಿದೆಯೋ ಆ ‘ಕೊಲೆಗಾರ’ರ ಬಂಧನ ಇನ್ನೂ ಆಗಿಲ್ಲ, ಆದುದರಿಂದ ಈ ಕೋಲಾಹಲ ನಡೆಯುತ್ತಿದೆ. ಇದರಿಂದ ಪ್ರಜಾಪ್ರಭುತ್ವ ತತ್ವಗಳ ಹೆಸರಿನಲ್ಲಿ ಕೋಲಾಹಲವುಂಟು ಮಾಡುವ ದಾಬೋಲ್ಕರ್ ಕುಟುಂಬವು ನಿಜವಾಗಿಯೂ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತದೆಯೇ ? ಈಗ ‘ಭಾರತದ ಎಲ್ಲ ತನಿಖಾ ದಳಗಳು ತನಿಖೆ ಮಾಡಿಯೂ ಏನೂ ಸಿಗುತ್ತಿಲ್ಲ’, ಎಂದು ಹೇಳುತ್ತಾ, ಇನ್ನು ವಿದೇಶದ ‘ಎಫ್‌ಬಿಐ’ ಅಥವಾ ‘ಸ್ಕಾಟ್‌ಲ್ಯಾಂಡ್ ಯಾರ್ಡ್’ಗೆ ತನಿಖೆಯನ್ನು ಹಸ್ತಾಂತರಿಸಬೇಕೆಂದು ದಾಭೋಲ್ಕರ್ ಕುಟುಂಬ ಒತ್ತಾಯಿಸಲಿದೆಯೇ ?

Spread the love
  • Related Posts

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

    Spread the love

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 53 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 41 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 27 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 232 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 33 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ