ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !

‘ಸಿಬಿಐ’ನ ವೈಫಲ್ಯವೋ ಅಥವಾ ರಾಷ್ಟ್ರವಾದಿಯ ತಪ್ಪಾದ ತನಿಖೆಯ ಪರಿಣಾಮವೋ ! – ಸನಾತನ ಸಂಸ್ಥೆ

ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ; ಆದರೆ ದಾಭೊಲಕರ ಪ್ರಕರಣದಲ್ಲಿ ಅವರದ್ದೇ ಗೃಹ ಇಲಾಖೆಯು ಮಾಡಿದ ತಪ್ಪಾದ ತನಿಖೆಯ ಪರಿಣಾಮವನ್ನು ಸನಾತನ ಸಂಸ್ಥೆಯು ಅನುಭವಿಸಬೇಕಾಗುತ್ತಿದೆ.

2013 ರಲ್ಲಿ ಡಾ. ಧಾಭೊಲಕರರ ಹತ್ಯೆಯಾಯಿತು, ಅದೇ ಸಮಯದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕ ಹಾಗೂ ರಾಜ್ಯದ ಅಂದಿನ ಗೃಹಸಚಿವರಾದ ಆರ್.ಆರ್. ಪಾಟಿಲ್ ಇವರ ಮಾರ್ಗದರ್ಶನದಲ್ಲಿ ಪೊಲೀಸರು ತಕ್ಷಣವೇ ತನಿಖೆಯನ್ನು ಮಾಡುತ್ತಾ ಮನೀಷ ನಾಗೋರಿ ಹಾಗೂ ವಿಕಾಸ ಖಂಡೆಲವಾಲ ಎಂಬ ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗಳನ್ನು ಬಂಧಿಸಿದರು. ಅವರಲ್ಲಿ ಪತ್ತೆಯಾದ ಪಿಸ್ತೂಲಿನಿಂದ ದಾಭೋಲಕರ ಇವರ ಹತ್ಯೆಯಾಯಿತು, ಅದಕ್ಕಾಗಿ ಸಾಕ್ಷಿಯೆಂದು ‘ಫಾರೆನ್ಸೀಕ್ ವರದಿ’ಯನ್ನೂ ನ್ಯಾಯಾಲದಲ್ಲಿ ಸಲ್ಲಿಸಿದ್ದರು. ನಂತರ ಈ ತನಿಖೆಯಿಂದ ಅಸಮಾಧಾನಗೊಂಡಿರುವ ದಾಭೋಲಕರ ಕುಟುಂಬದವರು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ತನಿಖೆಯನ್ನು ‘ಸಿಬಿಐ’ಗೆ ನೀಡುವಂತೆ ಆಗ್ರಹಿಸಿದರು. ಅದಕ್ಕನುಸಾರ ‘ಸಿಬಿಐ’ ತನಿಖೆಯನ್ನು ಆರಂಭಿಸಿತು ಹಾಗೂ ಅದು ಮಾನ್ಯ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ.

ಹೀಗಿರುವಾಗ ಒಂದು ವೇಳೆ ರಾಷ್ಟ್ರವಾದಿ ನಾಯಕರು ಹಾಗೂ ದಾಭೊಲಕರ ಕುಟುಂಬ ಇಂದು ‘ಸಿಬಿಐ’ ವಿಫಲಗೊಂಡಿದೆ ಎಂದು ನಿರ್ಧರಿಸುತ್ತಿದ್ದರೆ, ಅದು ಅವರದ್ದೇ ವೈಫಲ್ಯವಾಗಿದೆ. ‘ಸಿಬಿಐ’ನ ವೈಫಲ್ಯದ ಬಗ್ಗೆ ಮಾತನಾಡುವುದಿದ್ದರೆ, ಆರ್.ಆರ್.ಪಾಟಿಲ್ ಇವರ ಕಾಲದಲ್ಲಿ ನಡೆದ ತನಿಖೆಯ ಮೇಲೆಯೂ ಪ್ರಶ್ನೆಚಿಹ್ನೆ ನಿರ್ಮಾಣವಾಗುತ್ತದೆ. ಈ ಎರಡು ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗ ಅಪರಾಧ ‘ಫಾರೆನ್ಸಿಕ್ ವರದಿ’ಯಲ್ಲಿ ಸಿದ್ಧವಾಗಿರುವಾಗ ಈ ಇಬ್ಬರಿಗೆ ‘ಕ್ಲೀನ್‌ಚೀಟ್’ ಹೇಗೆ ಸಿಕ್ಕಿತು? ಇದರ ಬಗ್ಗೆ ದಾಭೊಲಕರ ಕುಟುಂಬದವರಾಗಲಿ, ಆಗಿನ ರಾಜ್ಯ ಸರಕಾರವಾಗಲಿ ಏನೂ ಮಾತನಾಡುವುದಿಲ್ಲ, ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್-ಎನ್‌ಸಿಪಿ ಸರ್ಕಾರದ ಅವಧಿಯಲ್ಲಿ 2013 ರಲ್ಲಿ ದಾಭೋಲ್ಕರರ ಹತ್ಯೆಯಾದಾಗ, ದಾಭೋಲ್ಕರ್ ಅವರ ಕುಟುಂಬವು ತನಿಖೆಯನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಿತು. ಕಾಲಕ್ರಮೇಣ ತನಿಖೆಯು ಸಿಬಿಐಗೆ ಹೋಯಿತು, ಅನಂತರ ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾಯಿತು. ಈ ಪ್ರಕರಣದಲ್ಲಿ ವಿನಾಕಾರಣ ಕೆಲವು ಹಿಂದುತ್ವನಿಷ್ಠ ಕಾರ್ಯಕರ್ತರ ಬಂಧನವಾಯಿತು. ಇನ್ನೂ ಏನೂ ಆಗಲಿಲ್ಲ ಎಂದು ದಾಭೋಲ್ಕರ್ ಕುಟುಂಬ ಕೂಗುತ್ತಲೇ ಇತ್ತು. ಈಗ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಈ ಮೂರು ಪಕ್ಷಗಳ ‘ಮಹಾವಿಕಾಸ್ ಮೈತ್ರಿಕೂಟ’ ಅಧಿಕಾರಕ್ಕೆ ಬಂದಿರುವುದರಿಂದ, ತನಿಖೆ ಮತ್ತು ಸರ್ಕಾರದ ಬಗ್ಗೆ ಇನ್ನೂ ಪ್ರಶ್ನೆಗಳು ಎದ್ದಿವೆ. ಈ ಘಟನೆಯಿಂದ ಎದ್ದು ಕಾಣುವ ಒಂದು ವಿಷಯವೇನೆಂದರೆ, ಯಾವುದೇ ಪಕ್ಷದ ಸರ್ಕಾರವಿದ್ದರೂ ತನಿಖಾದಳ ಯಾವುದೇ ಇರಲಿ; ‘ದಾಭೋಲ್ಕರರ ನಿಜವಾದ ಕೊಲೆಗಾರರು ಯಾರು’ ಎಂಬುದಕ್ಕಿಂತ ದಾಭೋಲ್ಕರ್ ಕುಟುಂಬದವರು ಯಾರನ್ನು ‘ಕೊಲೆಗಾರ’ ಎಂದು ನಿರ್ಧರಿಸಿದೆಯೋ ಆ ‘ಕೊಲೆಗಾರ’ರ ಬಂಧನ ಇನ್ನೂ ಆಗಿಲ್ಲ, ಆದುದರಿಂದ ಈ ಕೋಲಾಹಲ ನಡೆಯುತ್ತಿದೆ. ಇದರಿಂದ ಪ್ರಜಾಪ್ರಭುತ್ವ ತತ್ವಗಳ ಹೆಸರಿನಲ್ಲಿ ಕೋಲಾಹಲವುಂಟು ಮಾಡುವ ದಾಬೋಲ್ಕರ್ ಕುಟುಂಬವು ನಿಜವಾಗಿಯೂ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತದೆಯೇ ? ಈಗ ‘ಭಾರತದ ಎಲ್ಲ ತನಿಖಾ ದಳಗಳು ತನಿಖೆ ಮಾಡಿಯೂ ಏನೂ ಸಿಗುತ್ತಿಲ್ಲ’, ಎಂದು ಹೇಳುತ್ತಾ, ಇನ್ನು ವಿದೇಶದ ‘ಎಫ್‌ಬಿಐ’ ಅಥವಾ ‘ಸ್ಕಾಟ್‌ಲ್ಯಾಂಡ್ ಯಾರ್ಡ್’ಗೆ ತನಿಖೆಯನ್ನು ಹಸ್ತಾಂತರಿಸಬೇಕೆಂದು ದಾಭೋಲ್ಕರ್ ಕುಟುಂಬ ಒತ್ತಾಯಿಸಲಿದೆಯೇ ?

Spread the love
  • Related Posts

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ಬೆಳ್ತಂಗಡಿ: ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆ.ಎಸ್‌.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿ ಕುಟುಂಬ ಸದಸ್ಯರಿಗೆ ಹಾಗೂ ಗಾಯಳು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು. Spread the love

    Spread the love

    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ: ತಾಲೂಕಿನ ಹೊಸಂಗಡಿ ಗ್ರಾಮದ ಪಾರ್ದೊಟ್ಟು ಪ್ರದೇಶದಲ್ಲಿ ದಾರುಣ ಘಟನೆೊಂದು ನಡೆದಿದ್ದು, ಕೇರಳ ಮೂಲದ ಕಾರ್ಮಿಕನೋರ್ವ ವಿದ್ಯುತ್ ಶಾಕ್ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಜೋಸೆಫ್ ತೋಮಸ್ (69) ಎಂದು ಗುರುತಿಸಲಾಗಿದೆ. ಈತ ಕೇರಳದಿಂದ ಬಂದು ಹೊಸಂಗಡಿಯಲ್ಲಿ ಶಾಜು.ಪಿ.ಟಿ ಎಂಬವರ…

    Spread the love

    You Missed

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 129 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    • By admin
    • March 31, 2026
    • 26 views
    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

    • By admin
    • March 31, 2026
    • 41 views
    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    • By admin
    • March 31, 2026
    • 259 views
    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    • By admin
    • March 31, 2026
    • 158 views
    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    • By admin
    • March 30, 2026
    • 115 views
    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ