ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !

‘ಸಿಬಿಐ’ನ ವೈಫಲ್ಯವೋ ಅಥವಾ ರಾಷ್ಟ್ರವಾದಿಯ ತಪ್ಪಾದ ತನಿಖೆಯ ಪರಿಣಾಮವೋ ! – ಸನಾತನ ಸಂಸ್ಥೆ

ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ; ಆದರೆ ದಾಭೊಲಕರ ಪ್ರಕರಣದಲ್ಲಿ ಅವರದ್ದೇ ಗೃಹ ಇಲಾಖೆಯು ಮಾಡಿದ ತಪ್ಪಾದ ತನಿಖೆಯ ಪರಿಣಾಮವನ್ನು ಸನಾತನ ಸಂಸ್ಥೆಯು ಅನುಭವಿಸಬೇಕಾಗುತ್ತಿದೆ.

2013 ರಲ್ಲಿ ಡಾ. ಧಾಭೊಲಕರರ ಹತ್ಯೆಯಾಯಿತು, ಅದೇ ಸಮಯದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕ ಹಾಗೂ ರಾಜ್ಯದ ಅಂದಿನ ಗೃಹಸಚಿವರಾದ ಆರ್.ಆರ್. ಪಾಟಿಲ್ ಇವರ ಮಾರ್ಗದರ್ಶನದಲ್ಲಿ ಪೊಲೀಸರು ತಕ್ಷಣವೇ ತನಿಖೆಯನ್ನು ಮಾಡುತ್ತಾ ಮನೀಷ ನಾಗೋರಿ ಹಾಗೂ ವಿಕಾಸ ಖಂಡೆಲವಾಲ ಎಂಬ ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗಳನ್ನು ಬಂಧಿಸಿದರು. ಅವರಲ್ಲಿ ಪತ್ತೆಯಾದ ಪಿಸ್ತೂಲಿನಿಂದ ದಾಭೋಲಕರ ಇವರ ಹತ್ಯೆಯಾಯಿತು, ಅದಕ್ಕಾಗಿ ಸಾಕ್ಷಿಯೆಂದು ‘ಫಾರೆನ್ಸೀಕ್ ವರದಿ’ಯನ್ನೂ ನ್ಯಾಯಾಲದಲ್ಲಿ ಸಲ್ಲಿಸಿದ್ದರು. ನಂತರ ಈ ತನಿಖೆಯಿಂದ ಅಸಮಾಧಾನಗೊಂಡಿರುವ ದಾಭೋಲಕರ ಕುಟುಂಬದವರು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ತನಿಖೆಯನ್ನು ‘ಸಿಬಿಐ’ಗೆ ನೀಡುವಂತೆ ಆಗ್ರಹಿಸಿದರು. ಅದಕ್ಕನುಸಾರ ‘ಸಿಬಿಐ’ ತನಿಖೆಯನ್ನು ಆರಂಭಿಸಿತು ಹಾಗೂ ಅದು ಮಾನ್ಯ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ.

ಹೀಗಿರುವಾಗ ಒಂದು ವೇಳೆ ರಾಷ್ಟ್ರವಾದಿ ನಾಯಕರು ಹಾಗೂ ದಾಭೊಲಕರ ಕುಟುಂಬ ಇಂದು ‘ಸಿಬಿಐ’ ವಿಫಲಗೊಂಡಿದೆ ಎಂದು ನಿರ್ಧರಿಸುತ್ತಿದ್ದರೆ, ಅದು ಅವರದ್ದೇ ವೈಫಲ್ಯವಾಗಿದೆ. ‘ಸಿಬಿಐ’ನ ವೈಫಲ್ಯದ ಬಗ್ಗೆ ಮಾತನಾಡುವುದಿದ್ದರೆ, ಆರ್.ಆರ್.ಪಾಟಿಲ್ ಇವರ ಕಾಲದಲ್ಲಿ ನಡೆದ ತನಿಖೆಯ ಮೇಲೆಯೂ ಪ್ರಶ್ನೆಚಿಹ್ನೆ ನಿರ್ಮಾಣವಾಗುತ್ತದೆ. ಈ ಎರಡು ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗ ಅಪರಾಧ ‘ಫಾರೆನ್ಸಿಕ್ ವರದಿ’ಯಲ್ಲಿ ಸಿದ್ಧವಾಗಿರುವಾಗ ಈ ಇಬ್ಬರಿಗೆ ‘ಕ್ಲೀನ್‌ಚೀಟ್’ ಹೇಗೆ ಸಿಕ್ಕಿತು? ಇದರ ಬಗ್ಗೆ ದಾಭೊಲಕರ ಕುಟುಂಬದವರಾಗಲಿ, ಆಗಿನ ರಾಜ್ಯ ಸರಕಾರವಾಗಲಿ ಏನೂ ಮಾತನಾಡುವುದಿಲ್ಲ, ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್-ಎನ್‌ಸಿಪಿ ಸರ್ಕಾರದ ಅವಧಿಯಲ್ಲಿ 2013 ರಲ್ಲಿ ದಾಭೋಲ್ಕರರ ಹತ್ಯೆಯಾದಾಗ, ದಾಭೋಲ್ಕರ್ ಅವರ ಕುಟುಂಬವು ತನಿಖೆಯನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಿತು. ಕಾಲಕ್ರಮೇಣ ತನಿಖೆಯು ಸಿಬಿಐಗೆ ಹೋಯಿತು, ಅನಂತರ ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾಯಿತು. ಈ ಪ್ರಕರಣದಲ್ಲಿ ವಿನಾಕಾರಣ ಕೆಲವು ಹಿಂದುತ್ವನಿಷ್ಠ ಕಾರ್ಯಕರ್ತರ ಬಂಧನವಾಯಿತು. ಇನ್ನೂ ಏನೂ ಆಗಲಿಲ್ಲ ಎಂದು ದಾಭೋಲ್ಕರ್ ಕುಟುಂಬ ಕೂಗುತ್ತಲೇ ಇತ್ತು. ಈಗ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಈ ಮೂರು ಪಕ್ಷಗಳ ‘ಮಹಾವಿಕಾಸ್ ಮೈತ್ರಿಕೂಟ’ ಅಧಿಕಾರಕ್ಕೆ ಬಂದಿರುವುದರಿಂದ, ತನಿಖೆ ಮತ್ತು ಸರ್ಕಾರದ ಬಗ್ಗೆ ಇನ್ನೂ ಪ್ರಶ್ನೆಗಳು ಎದ್ದಿವೆ. ಈ ಘಟನೆಯಿಂದ ಎದ್ದು ಕಾಣುವ ಒಂದು ವಿಷಯವೇನೆಂದರೆ, ಯಾವುದೇ ಪಕ್ಷದ ಸರ್ಕಾರವಿದ್ದರೂ ತನಿಖಾದಳ ಯಾವುದೇ ಇರಲಿ; ‘ದಾಭೋಲ್ಕರರ ನಿಜವಾದ ಕೊಲೆಗಾರರು ಯಾರು’ ಎಂಬುದಕ್ಕಿಂತ ದಾಭೋಲ್ಕರ್ ಕುಟುಂಬದವರು ಯಾರನ್ನು ‘ಕೊಲೆಗಾರ’ ಎಂದು ನಿರ್ಧರಿಸಿದೆಯೋ ಆ ‘ಕೊಲೆಗಾರ’ರ ಬಂಧನ ಇನ್ನೂ ಆಗಿಲ್ಲ, ಆದುದರಿಂದ ಈ ಕೋಲಾಹಲ ನಡೆಯುತ್ತಿದೆ. ಇದರಿಂದ ಪ್ರಜಾಪ್ರಭುತ್ವ ತತ್ವಗಳ ಹೆಸರಿನಲ್ಲಿ ಕೋಲಾಹಲವುಂಟು ಮಾಡುವ ದಾಬೋಲ್ಕರ್ ಕುಟುಂಬವು ನಿಜವಾಗಿಯೂ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತದೆಯೇ ? ಈಗ ‘ಭಾರತದ ಎಲ್ಲ ತನಿಖಾ ದಳಗಳು ತನಿಖೆ ಮಾಡಿಯೂ ಏನೂ ಸಿಗುತ್ತಿಲ್ಲ’, ಎಂದು ಹೇಳುತ್ತಾ, ಇನ್ನು ವಿದೇಶದ ‘ಎಫ್‌ಬಿಐ’ ಅಥವಾ ‘ಸ್ಕಾಟ್‌ಲ್ಯಾಂಡ್ ಯಾರ್ಡ್’ಗೆ ತನಿಖೆಯನ್ನು ಹಸ್ತಾಂತರಿಸಬೇಕೆಂದು ದಾಭೋಲ್ಕರ್ ಕುಟುಂಬ ಒತ್ತಾಯಿಸಲಿದೆಯೇ ?

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ