ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !

‘ಸಿಬಿಐ’ನ ವೈಫಲ್ಯವೋ ಅಥವಾ ರಾಷ್ಟ್ರವಾದಿಯ ತಪ್ಪಾದ ತನಿಖೆಯ ಪರಿಣಾಮವೋ ! – ಸನಾತನ ಸಂಸ್ಥೆ

ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ; ಆದರೆ ದಾಭೊಲಕರ ಪ್ರಕರಣದಲ್ಲಿ ಅವರದ್ದೇ ಗೃಹ ಇಲಾಖೆಯು ಮಾಡಿದ ತಪ್ಪಾದ ತನಿಖೆಯ ಪರಿಣಾಮವನ್ನು ಸನಾತನ ಸಂಸ್ಥೆಯು ಅನುಭವಿಸಬೇಕಾಗುತ್ತಿದೆ.

2013 ರಲ್ಲಿ ಡಾ. ಧಾಭೊಲಕರರ ಹತ್ಯೆಯಾಯಿತು, ಅದೇ ಸಮಯದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕ ಹಾಗೂ ರಾಜ್ಯದ ಅಂದಿನ ಗೃಹಸಚಿವರಾದ ಆರ್.ಆರ್. ಪಾಟಿಲ್ ಇವರ ಮಾರ್ಗದರ್ಶನದಲ್ಲಿ ಪೊಲೀಸರು ತಕ್ಷಣವೇ ತನಿಖೆಯನ್ನು ಮಾಡುತ್ತಾ ಮನೀಷ ನಾಗೋರಿ ಹಾಗೂ ವಿಕಾಸ ಖಂಡೆಲವಾಲ ಎಂಬ ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗಳನ್ನು ಬಂಧಿಸಿದರು. ಅವರಲ್ಲಿ ಪತ್ತೆಯಾದ ಪಿಸ್ತೂಲಿನಿಂದ ದಾಭೋಲಕರ ಇವರ ಹತ್ಯೆಯಾಯಿತು, ಅದಕ್ಕಾಗಿ ಸಾಕ್ಷಿಯೆಂದು ‘ಫಾರೆನ್ಸೀಕ್ ವರದಿ’ಯನ್ನೂ ನ್ಯಾಯಾಲದಲ್ಲಿ ಸಲ್ಲಿಸಿದ್ದರು. ನಂತರ ಈ ತನಿಖೆಯಿಂದ ಅಸಮಾಧಾನಗೊಂಡಿರುವ ದಾಭೋಲಕರ ಕುಟುಂಬದವರು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ತನಿಖೆಯನ್ನು ‘ಸಿಬಿಐ’ಗೆ ನೀಡುವಂತೆ ಆಗ್ರಹಿಸಿದರು. ಅದಕ್ಕನುಸಾರ ‘ಸಿಬಿಐ’ ತನಿಖೆಯನ್ನು ಆರಂಭಿಸಿತು ಹಾಗೂ ಅದು ಮಾನ್ಯ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ.

ಹೀಗಿರುವಾಗ ಒಂದು ವೇಳೆ ರಾಷ್ಟ್ರವಾದಿ ನಾಯಕರು ಹಾಗೂ ದಾಭೊಲಕರ ಕುಟುಂಬ ಇಂದು ‘ಸಿಬಿಐ’ ವಿಫಲಗೊಂಡಿದೆ ಎಂದು ನಿರ್ಧರಿಸುತ್ತಿದ್ದರೆ, ಅದು ಅವರದ್ದೇ ವೈಫಲ್ಯವಾಗಿದೆ. ‘ಸಿಬಿಐ’ನ ವೈಫಲ್ಯದ ಬಗ್ಗೆ ಮಾತನಾಡುವುದಿದ್ದರೆ, ಆರ್.ಆರ್.ಪಾಟಿಲ್ ಇವರ ಕಾಲದಲ್ಲಿ ನಡೆದ ತನಿಖೆಯ ಮೇಲೆಯೂ ಪ್ರಶ್ನೆಚಿಹ್ನೆ ನಿರ್ಮಾಣವಾಗುತ್ತದೆ. ಈ ಎರಡು ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗ ಅಪರಾಧ ‘ಫಾರೆನ್ಸಿಕ್ ವರದಿ’ಯಲ್ಲಿ ಸಿದ್ಧವಾಗಿರುವಾಗ ಈ ಇಬ್ಬರಿಗೆ ‘ಕ್ಲೀನ್‌ಚೀಟ್’ ಹೇಗೆ ಸಿಕ್ಕಿತು? ಇದರ ಬಗ್ಗೆ ದಾಭೊಲಕರ ಕುಟುಂಬದವರಾಗಲಿ, ಆಗಿನ ರಾಜ್ಯ ಸರಕಾರವಾಗಲಿ ಏನೂ ಮಾತನಾಡುವುದಿಲ್ಲ, ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್-ಎನ್‌ಸಿಪಿ ಸರ್ಕಾರದ ಅವಧಿಯಲ್ಲಿ 2013 ರಲ್ಲಿ ದಾಭೋಲ್ಕರರ ಹತ್ಯೆಯಾದಾಗ, ದಾಭೋಲ್ಕರ್ ಅವರ ಕುಟುಂಬವು ತನಿಖೆಯನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಿತು. ಕಾಲಕ್ರಮೇಣ ತನಿಖೆಯು ಸಿಬಿಐಗೆ ಹೋಯಿತು, ಅನಂತರ ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾಯಿತು. ಈ ಪ್ರಕರಣದಲ್ಲಿ ವಿನಾಕಾರಣ ಕೆಲವು ಹಿಂದುತ್ವನಿಷ್ಠ ಕಾರ್ಯಕರ್ತರ ಬಂಧನವಾಯಿತು. ಇನ್ನೂ ಏನೂ ಆಗಲಿಲ್ಲ ಎಂದು ದಾಭೋಲ್ಕರ್ ಕುಟುಂಬ ಕೂಗುತ್ತಲೇ ಇತ್ತು. ಈಗ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಈ ಮೂರು ಪಕ್ಷಗಳ ‘ಮಹಾವಿಕಾಸ್ ಮೈತ್ರಿಕೂಟ’ ಅಧಿಕಾರಕ್ಕೆ ಬಂದಿರುವುದರಿಂದ, ತನಿಖೆ ಮತ್ತು ಸರ್ಕಾರದ ಬಗ್ಗೆ ಇನ್ನೂ ಪ್ರಶ್ನೆಗಳು ಎದ್ದಿವೆ. ಈ ಘಟನೆಯಿಂದ ಎದ್ದು ಕಾಣುವ ಒಂದು ವಿಷಯವೇನೆಂದರೆ, ಯಾವುದೇ ಪಕ್ಷದ ಸರ್ಕಾರವಿದ್ದರೂ ತನಿಖಾದಳ ಯಾವುದೇ ಇರಲಿ; ‘ದಾಭೋಲ್ಕರರ ನಿಜವಾದ ಕೊಲೆಗಾರರು ಯಾರು’ ಎಂಬುದಕ್ಕಿಂತ ದಾಭೋಲ್ಕರ್ ಕುಟುಂಬದವರು ಯಾರನ್ನು ‘ಕೊಲೆಗಾರ’ ಎಂದು ನಿರ್ಧರಿಸಿದೆಯೋ ಆ ‘ಕೊಲೆಗಾರ’ರ ಬಂಧನ ಇನ್ನೂ ಆಗಿಲ್ಲ, ಆದುದರಿಂದ ಈ ಕೋಲಾಹಲ ನಡೆಯುತ್ತಿದೆ. ಇದರಿಂದ ಪ್ರಜಾಪ್ರಭುತ್ವ ತತ್ವಗಳ ಹೆಸರಿನಲ್ಲಿ ಕೋಲಾಹಲವುಂಟು ಮಾಡುವ ದಾಬೋಲ್ಕರ್ ಕುಟುಂಬವು ನಿಜವಾಗಿಯೂ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತದೆಯೇ ? ಈಗ ‘ಭಾರತದ ಎಲ್ಲ ತನಿಖಾ ದಳಗಳು ತನಿಖೆ ಮಾಡಿಯೂ ಏನೂ ಸಿಗುತ್ತಿಲ್ಲ’, ಎಂದು ಹೇಳುತ್ತಾ, ಇನ್ನು ವಿದೇಶದ ‘ಎಫ್‌ಬಿಐ’ ಅಥವಾ ‘ಸ್ಕಾಟ್‌ಲ್ಯಾಂಡ್ ಯಾರ್ಡ್’ಗೆ ತನಿಖೆಯನ್ನು ಹಸ್ತಾಂತರಿಸಬೇಕೆಂದು ದಾಭೋಲ್ಕರ್ ಕುಟುಂಬ ಒತ್ತಾಯಿಸಲಿದೆಯೇ ?

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 126 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 123 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!