ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !

‘ಸಿಬಿಐ’ನ ವೈಫಲ್ಯವೋ ಅಥವಾ ರಾಷ್ಟ್ರವಾದಿಯ ತಪ್ಪಾದ ತನಿಖೆಯ ಪರಿಣಾಮವೋ ! – ಸನಾತನ ಸಂಸ್ಥೆ

ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ; ಆದರೆ ದಾಭೊಲಕರ ಪ್ರಕರಣದಲ್ಲಿ ಅವರದ್ದೇ ಗೃಹ ಇಲಾಖೆಯು ಮಾಡಿದ ತಪ್ಪಾದ ತನಿಖೆಯ ಪರಿಣಾಮವನ್ನು ಸನಾತನ ಸಂಸ್ಥೆಯು ಅನುಭವಿಸಬೇಕಾಗುತ್ತಿದೆ.

2013 ರಲ್ಲಿ ಡಾ. ಧಾಭೊಲಕರರ ಹತ್ಯೆಯಾಯಿತು, ಅದೇ ಸಮಯದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕ ಹಾಗೂ ರಾಜ್ಯದ ಅಂದಿನ ಗೃಹಸಚಿವರಾದ ಆರ್.ಆರ್. ಪಾಟಿಲ್ ಇವರ ಮಾರ್ಗದರ್ಶನದಲ್ಲಿ ಪೊಲೀಸರು ತಕ್ಷಣವೇ ತನಿಖೆಯನ್ನು ಮಾಡುತ್ತಾ ಮನೀಷ ನಾಗೋರಿ ಹಾಗೂ ವಿಕಾಸ ಖಂಡೆಲವಾಲ ಎಂಬ ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗಳನ್ನು ಬಂಧಿಸಿದರು. ಅವರಲ್ಲಿ ಪತ್ತೆಯಾದ ಪಿಸ್ತೂಲಿನಿಂದ ದಾಭೋಲಕರ ಇವರ ಹತ್ಯೆಯಾಯಿತು, ಅದಕ್ಕಾಗಿ ಸಾಕ್ಷಿಯೆಂದು ‘ಫಾರೆನ್ಸೀಕ್ ವರದಿ’ಯನ್ನೂ ನ್ಯಾಯಾಲದಲ್ಲಿ ಸಲ್ಲಿಸಿದ್ದರು. ನಂತರ ಈ ತನಿಖೆಯಿಂದ ಅಸಮಾಧಾನಗೊಂಡಿರುವ ದಾಭೋಲಕರ ಕುಟುಂಬದವರು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ತನಿಖೆಯನ್ನು ‘ಸಿಬಿಐ’ಗೆ ನೀಡುವಂತೆ ಆಗ್ರಹಿಸಿದರು. ಅದಕ್ಕನುಸಾರ ‘ಸಿಬಿಐ’ ತನಿಖೆಯನ್ನು ಆರಂಭಿಸಿತು ಹಾಗೂ ಅದು ಮಾನ್ಯ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ.

ಹೀಗಿರುವಾಗ ಒಂದು ವೇಳೆ ರಾಷ್ಟ್ರವಾದಿ ನಾಯಕರು ಹಾಗೂ ದಾಭೊಲಕರ ಕುಟುಂಬ ಇಂದು ‘ಸಿಬಿಐ’ ವಿಫಲಗೊಂಡಿದೆ ಎಂದು ನಿರ್ಧರಿಸುತ್ತಿದ್ದರೆ, ಅದು ಅವರದ್ದೇ ವೈಫಲ್ಯವಾಗಿದೆ. ‘ಸಿಬಿಐ’ನ ವೈಫಲ್ಯದ ಬಗ್ಗೆ ಮಾತನಾಡುವುದಿದ್ದರೆ, ಆರ್.ಆರ್.ಪಾಟಿಲ್ ಇವರ ಕಾಲದಲ್ಲಿ ನಡೆದ ತನಿಖೆಯ ಮೇಲೆಯೂ ಪ್ರಶ್ನೆಚಿಹ್ನೆ ನಿರ್ಮಾಣವಾಗುತ್ತದೆ. ಈ ಎರಡು ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರಿಗ ಅಪರಾಧ ‘ಫಾರೆನ್ಸಿಕ್ ವರದಿ’ಯಲ್ಲಿ ಸಿದ್ಧವಾಗಿರುವಾಗ ಈ ಇಬ್ಬರಿಗೆ ‘ಕ್ಲೀನ್‌ಚೀಟ್’ ಹೇಗೆ ಸಿಕ್ಕಿತು? ಇದರ ಬಗ್ಗೆ ದಾಭೊಲಕರ ಕುಟುಂಬದವರಾಗಲಿ, ಆಗಿನ ರಾಜ್ಯ ಸರಕಾರವಾಗಲಿ ಏನೂ ಮಾತನಾಡುವುದಿಲ್ಲ, ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್-ಎನ್‌ಸಿಪಿ ಸರ್ಕಾರದ ಅವಧಿಯಲ್ಲಿ 2013 ರಲ್ಲಿ ದಾಭೋಲ್ಕರರ ಹತ್ಯೆಯಾದಾಗ, ದಾಭೋಲ್ಕರ್ ಅವರ ಕುಟುಂಬವು ತನಿಖೆಯನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಿತು. ಕಾಲಕ್ರಮೇಣ ತನಿಖೆಯು ಸಿಬಿಐಗೆ ಹೋಯಿತು, ಅನಂತರ ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾಯಿತು. ಈ ಪ್ರಕರಣದಲ್ಲಿ ವಿನಾಕಾರಣ ಕೆಲವು ಹಿಂದುತ್ವನಿಷ್ಠ ಕಾರ್ಯಕರ್ತರ ಬಂಧನವಾಯಿತು. ಇನ್ನೂ ಏನೂ ಆಗಲಿಲ್ಲ ಎಂದು ದಾಭೋಲ್ಕರ್ ಕುಟುಂಬ ಕೂಗುತ್ತಲೇ ಇತ್ತು. ಈಗ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಈ ಮೂರು ಪಕ್ಷಗಳ ‘ಮಹಾವಿಕಾಸ್ ಮೈತ್ರಿಕೂಟ’ ಅಧಿಕಾರಕ್ಕೆ ಬಂದಿರುವುದರಿಂದ, ತನಿಖೆ ಮತ್ತು ಸರ್ಕಾರದ ಬಗ್ಗೆ ಇನ್ನೂ ಪ್ರಶ್ನೆಗಳು ಎದ್ದಿವೆ. ಈ ಘಟನೆಯಿಂದ ಎದ್ದು ಕಾಣುವ ಒಂದು ವಿಷಯವೇನೆಂದರೆ, ಯಾವುದೇ ಪಕ್ಷದ ಸರ್ಕಾರವಿದ್ದರೂ ತನಿಖಾದಳ ಯಾವುದೇ ಇರಲಿ; ‘ದಾಭೋಲ್ಕರರ ನಿಜವಾದ ಕೊಲೆಗಾರರು ಯಾರು’ ಎಂಬುದಕ್ಕಿಂತ ದಾಭೋಲ್ಕರ್ ಕುಟುಂಬದವರು ಯಾರನ್ನು ‘ಕೊಲೆಗಾರ’ ಎಂದು ನಿರ್ಧರಿಸಿದೆಯೋ ಆ ‘ಕೊಲೆಗಾರ’ರ ಬಂಧನ ಇನ್ನೂ ಆಗಿಲ್ಲ, ಆದುದರಿಂದ ಈ ಕೋಲಾಹಲ ನಡೆಯುತ್ತಿದೆ. ಇದರಿಂದ ಪ್ರಜಾಪ್ರಭುತ್ವ ತತ್ವಗಳ ಹೆಸರಿನಲ್ಲಿ ಕೋಲಾಹಲವುಂಟು ಮಾಡುವ ದಾಬೋಲ್ಕರ್ ಕುಟುಂಬವು ನಿಜವಾಗಿಯೂ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತದೆಯೇ ? ಈಗ ‘ಭಾರತದ ಎಲ್ಲ ತನಿಖಾ ದಳಗಳು ತನಿಖೆ ಮಾಡಿಯೂ ಏನೂ ಸಿಗುತ್ತಿಲ್ಲ’, ಎಂದು ಹೇಳುತ್ತಾ, ಇನ್ನು ವಿದೇಶದ ‘ಎಫ್‌ಬಿಐ’ ಅಥವಾ ‘ಸ್ಕಾಟ್‌ಲ್ಯಾಂಡ್ ಯಾರ್ಡ್’ಗೆ ತನಿಖೆಯನ್ನು ಹಸ್ತಾಂತರಿಸಬೇಕೆಂದು ದಾಭೋಲ್ಕರ್ ಕುಟುಂಬ ಒತ್ತಾಯಿಸಲಿದೆಯೇ ?

Spread the love
  • Related Posts

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 51 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2347 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 618 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 237 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 73 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 52 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ