ಜೀವಂತ ಮೊಲ ಸಿಗದ ಹಿನ್ನೆಲೆಯಲ್ಲಿ “ಸಂಕ್ರಾಂತಿ” ಮುಂದೂಡಿದ ಗ್ರಾಮಸ್ಥರು!

ಚಿತ್ರದುರ್ಗ: ಜೀವಂತ ಮೊಲ ಸಿಗದ ಹಿನ್ನೆಲೆಯಲ್ಲಿ ಹೊಸದುರ್ಗ ತಾಲ್ಲೂಕಿನ ಕಂಚೀಪುರ ಗ್ರಾಮದ ಜನ ಸಂಕ್ರಾಂತಿ ಹಬ್ಬವನ್ನೇ ಮುಂದೂಡಿದ ಘಟನೆ ವರದಿಯಾಗಿದೆ.

ಕಂಚೀವರದರಾಜಸ್ವಾಮಿ ಭಕ್ತರು ಮಕರ ಸಂಕ್ರಾಂತಿ ದಿನ ಕಾಡಿನಲ್ಲಿ ಬೇಟೆಯಾಡಿ ಮೊಲವೊಂದನ್ನು ಜೀವಂತವಾಗಿ ಹಿಡಿದು ದೇಗುಲಕ್ಕೆ ತರುತ್ತಾರೆ. ನಂತರ ಅದರ ಕಿವಿಚುಚ್ಚಿ ಓಲೆ ಹಾಕಿ, ವಿಶೇಷ ಅಲಂಕಾರ ಮಾಡಿ, ನಾಮಧಾರಣೆ ಮಾಡುವ ಮೂಲಕ ರಾಜಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮಾಡುತ್ತಾರೆ. ನಂತರ ಆ ಮೊಲಕ್ಕೆ ಸ್ವಲ್ಪವೂ ಪೆಟ್ಟು ಮಾಡದಂತೆ ಪುನಃ ಕಾಡಿಗೆ ಬಿಡುವ ಮೂಲಕ ಇಲ್ಲಿನ ಜನರು ಸಂಕ್ರಾಂತಿ ಆಚರಿಸುವುದು ವಿಶೇಷ.


ಪ್ರತಿವರ್ಷದಂತೆ ಈ ವರ್ಷವು ಸಂಕ್ರಾಂತಿ ದಿನ (ಗುರುವಾರ) ಬೆಳಗ್ಗೆ 10 ಗಂಟೆಗೆ ಬೇಟೆಗಾರಿಕೆಯಲ್ಲಿ ನೈಪುಣ್ಯ ಹೊಂದಿರುವ ಸುಮಾರು 35 ಜನರ ತಂಡ ದೇಗುಲದಲ್ಲಿ ನಾಮಧಾರಣೆ ಮಾಡಿಕೊಂಡು ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಹೆಗಲ ಮೇಲೆ ಮೊಲ ಹಿಡಿಯುವ ಐದಾರು ಬಲೆ ಹಾಕಿಕೊಂಡು, ಕಂಚೀವರದರಾಜಸ್ವಾಮಿ ಗೋವಿಂದಾ.. ಗೋವಿಂದಾ… ಎಂಬ ಘೋಷಣೆ ಕೂಗುತ್ತ ಸಮೀಪದ ಕಾಡಿಗೆ ಹೋಗಿದ್ದರು.


ಆದರೆ, ಈ ಬಾರಿ ಕಾಡಿಗೆ ಹೋದ ಬೇಟೆಗಾರರಿಗೆ ಸಂಜೆ 6.30 ಆದರೂ ಮೊಲ ಸಿಗಲಿಲ್ಲ. ಸಂಕ್ರಾಂತಿ ಆಚರಿಸಬೇಕು ಎಂಬ ನಿರೀಕ್ಷೆಯಿಂದ ಕಾಡಿನಲ್ಲಿ ಮೊಲ ಸುತ್ತಾಡಿರುವ ಜಾಗ ನೋಡಿ ಐದಾರು ಬಲೆಯನ್ನು ಹೂಡಿದ್ದರು. ಆದರೂ ಮೊಲ ಸಿಗಲಿಲ್ಲ. ಮೊಲ ಸಿಗುವವರೆಗೂ ಗ್ರಾಮಸ್ಥರು ಸಂಕ್ರಾಂತಿ ಆಚರಿಸುವುದಿಲ್ಲ. ಹೀಗಾಗಿ ಶುಕ್ರವಾರ(ಜ.15) ಬೆಳಗ್ಗೆಯಿಂದ ಮೊಲ ಬೇಟೆಗಾರಿಕೆ ಮುಂದುವರೆಸಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ