ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ, ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಡ ನಿಷೇಧಿಸಲಾಗಿದೆ. ಹಾಡು, ಸಂಗೀತ, ಆವೇಶ ಭಾಷಣ, ಇಂಗಿತ ಸೂಚನೆಗಳು, ಅಂಕ ನಿರೂಪಣೆಗಳು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…

    Spread the love

    You Missed

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 17 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 19 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 46 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 52 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 42 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ