ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ, ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಡ ನಿಷೇಧಿಸಲಾಗಿದೆ. ಹಾಡು, ಸಂಗೀತ, ಆವೇಶ ಭಾಷಣ, ಇಂಗಿತ ಸೂಚನೆಗಳು, ಅಂಕ ನಿರೂಪಣೆಗಳು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ…

    Spread the love

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…

    Spread the love

    You Missed

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 4 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 6 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 5 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 5 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 9 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 12 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ