ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ, ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಡ ನಿಷೇಧಿಸಲಾಗಿದೆ. ಹಾಡು, ಸಂಗೀತ, ಆವೇಶ ಭಾಷಣ, ಇಂಗಿತ ಸೂಚನೆಗಳು, ಅಂಕ ನಿರೂಪಣೆಗಳು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    You Missed

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 4 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 7 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 13 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 12 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ