ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ, ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಡ ನಿಷೇಧಿಸಲಾಗಿದೆ. ಹಾಡು, ಸಂಗೀತ, ಆವೇಶ ಭಾಷಣ, ಇಂಗಿತ ಸೂಚನೆಗಳು, ಅಂಕ ನಿರೂಪಣೆಗಳು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 3 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 10 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ