ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ, ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಡ ನಿಷೇಧಿಸಲಾಗಿದೆ. ಹಾಡು, ಸಂಗೀತ, ಆವೇಶ ಭಾಷಣ, ಇಂಗಿತ ಸೂಚನೆಗಳು, ಅಂಕ ನಿರೂಪಣೆಗಳು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 7 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ