ಜೀವನದಲ್ಲಿ ಹಂಬಲವಿದ್ದರೆ ಸಾಧನೆಗೆ ಅಸಾಧ್ಯವಾದುದ್ದು ಯಾವುದು ಇಲ್ಲ ಯೋಚನೆ ಯೋಜನೆಯೊಂದಿಗೆ ಸಾಧನೆ ಮಾಡಿ ಗುರಿಮುಟ್ಟಿ ಇತರರಿಗೂ ಮಾದರಿಯಾಗಿ : ವಿವೇಕ್. ವಿ. ಪಾಯಸ್

ತುಮಕೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ಕಚೇರಿ ಬೆಂಗಳೂರು, ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿ ಹಾಗೂ SBI ಬ್ಯಾಂಕ್, Rsetiಸಂಸ್ಥೆ ತುಮಕೂರು ಇದರ ಸಹಯೋಗದೊಂದಿಗೆ ಪಾನಮುಕ್ತ ನವಜೀವನ ಸದಸ್ಯರಿಗೆ ಹಮ್ಮಿಕೊಂಡ ಉದ್ಯಮಶೀಲತಾ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮವು rsetiಸಂಸ್ಥೆ ತುಮಕೂರಿನಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯಿಂದ ನಡೆದ ಮಧ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿದ ತುಮಕೂರು ಜಿಲ್ಲೆಯ ಪಾನಮುಕ್ತ ಸದಸ್ಯರಿಗೆ ವಿಶೇಷವಾಗಿ ಸ್ವಉದ್ಯೋಗದಲ್ಲಿ ಉದ್ಯಮಶೀಲತಾ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 4ರಿಂದ ಫೆಬ್ರವರಿ 9ನೇ ತಾರೀಕಿನ ವರೆಗೆ ವಿಶೇಷ ತರಬೇತಿ ಕಾರ್ಯಗಾರ ನಡೆಸಲಾಯಿತು.

ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿ ಇದರ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ ಪಯಾಸ್ ರವರು ಮಾತನಾಡುತ್ತಾ ಈ ತರಬೇತಿ ಕಾರ್ಯಗಾರ ದಿಂದ ನಿಮಗೆ ಬದ್ಧತೆ ಬಂದಿರುತ್ತದೆ ಜೀವನದಲ್ಲಿ ಹಂಬಲವಿದ್ದರೆ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ನೀವು ಇಲ್ಲಿಂದ ಹೋಗಬೇಕಾದರೆ ಗುರಿಯನ್ನಿಟ್ಟುಕೊಂಡು ಹೋಗಬೇಕು ಜೊತೆಗೆ ಇತರರಿಗೆ ಮಾದರಿ ವ್ಯಕ್ತಿಗಳಾಗಬೇಕು ಎಂದು ಶುಭ ಹಾರೈಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ರಾಜ್ಯಧ್ಯಕ್ಷರಾದ ವಿ. ರಾಮಸ್ವಾಮಿಯವರು ಮಾತನಾಡುತ್ತಾ ತಾನು ಕೂಡ ಈ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದುಕೊಂಡ ಬಳಿಕ ಅಲ್ಲಿ ತಿಳಿಸಿದ 15 ಸೂತ್ರಗಳನ್ನು ತನ್ನಜೀವನದಲ್ಲಿ ಅಳವಡಿಸಿಕೊಂಡ ಕಾರಣ ಇವತ್ತು ಸಮಾಜದಲ್ಲಿ ಮಾದರಿ ಮತ್ತು ಉತ್ತಮ ಉದ್ಯಮಿಯಾಗಲು ಕಾರಣವಾಗಿದೆ ಎಂದು ತನ್ನ ಜೀವನದ ಅನುಭವಗಳನ್ನು ವ್ಯಕ್ತಪಡಿಸಿ ತಾವೂ ಜೀವನದಲ್ಲಿ ಯಶಸ್ವಿ ಉದ್ಯಮಿಗಳಾಗಿ ಎಂದು ಶುಭಹಾರೈಸಿದರು.

ತರಬೇತಿ ಕಾರ್ಯಾಗಾರದ ಬಗ್ಗೆ ಶಿಬಿರಾರ್ಥಿಗಳಾದ ಉಮಾಪತಿ ಮಂಜುನಾಥ ಜಗದೀಶ್ ಹಾಗೂ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭ rseti ಸಂಸ್ಥೆಯ ನಿರ್ದೇಶಕರಾದ ರಾಮಚಂದ್ರ ರವರು, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ, ಉಪನ್ಯಾಸಕರಾದ ಶ್ರೀಮತಿ ರಮ್ಯಾ, ಮಂಜುನಾಥ್ ಹಾಗೂ ಮನೋಜ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸುದೀಪ್ ನಿರೂಪಿಸಿ, ಗಣೇಶ್ ಆಚಾರ್ಯರವರು ಸ್ವಾಗತಿಸಿ, ಉಮಾಪತಿಯವರು ಧನ್ಯವಾದವಿತ್ತರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ