ರಾಜ್ಯದಲ್ಲಿ ನಡೆದ 545 ಪೋಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಬೆಂಗಳೂರು: ಕರ್ನಾಟಕದಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಐಜಿಪಿ ಕಚೇರಿಯಿಂದ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದಂತ ಪ್ರವೀಣ್ ಸೂದ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,545 ಪಿಎಸ್‌ಐ ಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ದಿನಾಂಕ 03-10-2021 ರಂದು ರಾಜ್ಯಾದ್ಯಂತ 92 ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 54,104 ಅಭ್ಯರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಪ್ರಕಟಣೆಯ ನಂತರ ಕೆಲವು ವ್ಯತ್ಯಾಸಗಳು ವರದಿಯಾದ ಮೇರೆಗೆ ಆಂತರಿಕ ವಿಚಾರಣೆ ನಡೆಸಲಾಯಿತು ಎಂದಿದ್ದಾರೆ.

ದಿನಾಂಕ 07-04-2022 ರಂದು ಕೆಲವು ದುಷ್ಕೃತ್ಯಗಳ ಬಗ್ಗೆ ಪುರಾವೆಗಳು ಕಂಡು ಬಂದಿದ್ದರಿಂದ, ಗೃಹ ಸಚಿವರು ಸ್ವತಹ ಸಂಪೂರ್ಣ ನೇಮಕಾತಿ ಪ್ರಕ್ರಿಯೆ ಮತ್ತು ಅಪಾದಿತ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಅದೇಶಿಸಿದರು. ಅದರಂತೆ 09-04-2022ರಂದು ಎಫ್‌ಐಆರ್ ದಾಖಲಿಸಿಲಾಗಿದೆ. ಇದುವರೆಗೆ 7 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ನಾಲ್ವರು ಪರೀಕ್ಷೆ ಬರೆದಂತ ಅಭ್ಯರ್ಥಿಗಳು, ಇನ್ನುಳಿದ ಮೂವರು ಕಲಬುರ್ಗಿ ಕೇಂದ್ರದ ಮೇಲ್ವಿಚಾರಕರು ಸೇರಿದ್ದಾರೆ. ಇನ್ನೂ ಹಲವರು ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಲಾಗುವುದು ಎಂದು ಹೇಳಿದ್ದಾರೆ. ತನಿಖೆಯನ್ನು ನಿಷ್ಪಕ್ಷಪಾತವಾಗಿ ಮತ್ತು ಸಮಗ್ರವಾಗಿ ಶೀಘ್ರ ಗತಿಯಲ್ಲಿ ಪೂರ್ಣಗೊಳಿಸಲು ಗೃಹ ಸಚಿವರು ಸಿಐಡಿಗೆ ಆದೇಶಿಸಿದ್ದಾರೆ. ತನಿಖೆ ಪೂರ್ಣಗೊಂಡ ನಂತರ, ಅಂತಿಮ ವರದಿ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಮೇಲ್ವಿಚಾರಕರು ಮತ್ತು ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದಲ್ಲಿ, ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸಿಐಡಿ(CID) ತನಿಖೆ ಚುರುಕು:
545 ಪಿಎಸೈ ನೇಮಕ ಪರೀಕ್ಷೆಯಲ್ಲಿ ಅಕ್ರಮ ಆರೋಪಗಳ ಕುರಿತ ಸಿಐಡಿ ತನಿಖೆ ಚುರುಕುಗೊಂಡಿದೆ. ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ ಮೂವರು ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕೇಂದ್ರದ ಮೂವರು ಮೇಲ್ವಿಚಾರಕರು ಸೇರಿದಂತೆ ಒಟ್ಟು 6 ಜನರನ್ನು ಬಂಧಿಸಿ, ಶನಿವಾರ ಕಲಬುರಗಿಯ ಜೆಎಂಎಫ್‌ಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ.

ರಾಯಚೂರು ಮೂಲದ ಕೆ.ಪ್ರವೀಣ ಕುಮಾರ್‌, ಕಲಬುರಗಿ ಜಿಲ್ಲೆ ಆಳಂದ ನಿವಾಸಿ ಎನ್‌.ಚೇತನ್‌ ಹಾಗೂ ಕಲಬುರಗಿ ನಗರದ ಹಾಲ್‌ ಸುಲ್ತಾನಪುರ ಪ್ರದೇಶದ ಅರುಣ ಪಾಟೀಲ್‌ ಅಭ್ಯರ್ಥಿಗಳಾದರೆ, ಜ್ಞಾನಜ್ಯೋತಿ ಇಂಗ್ಲೀಷ್‌ ಮೀಡಿಯಂ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿದ್ದ ಸುಮಾ, ಸಿದ್ಧಮ್ಮ ಹಾಗೂ ಸಾವಿತ್ರಿ ಎನ್ನುವವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. ಬಂಧಿತ ಮೂವರು ಅಭ್ಯರ್ಥಿಗಳಲ್ಲೊಬ್ಬ ಕಲ್ಯಾಣ ಕರ್ನಾಟಕ ಜಿಲ್ಲೆಯೊಂದರ ಕಾರಾಗೃಹದ ವಾರ್ಡನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಈ ಪ್ರಕರಣದಲ್ಲಿ, ಮೊದಲು ಬಂಧಿಸಲಾಗಿದ್ದ ವೀರೇಶ್‌ ಸೇರಿದಂತೆ ಈವರೆಗೆ 7 ಜನರನ್ನು ಸಿಐಡಿ ಪೊಲೀಸರು ಬಂಧಿಸಿದಂತಾಗಿದೆ. ಸಿಐಡಿ ತನಿಖೆ ವಿಸ್ತಾರಗೊಳ್ಳುತ್ತಿದ್ದಂತೆ, ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಕೆಲವರು ನಾಪತ್ತೆಯಾಗಿದ್ದಾರೆ. ಆರ್‌ಟಿ​ಐ ಕಾರ್ಯಕರ್ತನೊಬ್ಬನ ಚಲನವಲನಗಳ ಮೇಲೂ ಪೊಲೀಸರು ನಿಗಾ ಇಟ್ಟಿದ್ದಾರೆ.

ಇನ್ನು ಯಾದಗಿರಿಯ ವ್ಯಕ್ತಿಯೊಬ್ಬನ ವಿಚಾರಣೆಗೆಂದು ಆತನ ಗ್ರಾಮಕ್ಕೆ ತೆರಳಿದ್ದ ತನಿಖಾ ತಂಡ ಮಾಹಿತಿಗಳ ಜಾಲಾಡಿ ಬಂದಿದೆ. ಕೊನೆಗೆ, ಫೋನ್‌ ಮೂಲಕ ಸಂಪರ್ಕಕ್ಕೆ ಬಂದಿದ್ದ ಆತ, ಮರುದಿನವೇ ಎಲ್ಲ ದಾಖಲೆಗಳನ್ನು ನೀಡುವುದಾಗಿ ಹೇಳಿದ್ದನಾದರೂ, ಇದೀಗ ಸಂಪರ್ಕಕ್ಕೆ ಸಿಗದಿರುವುದು ಮತ್ತಷ್ಟೂ ಅನುಮಾನಗಳಿಗೆ ಕಾರಣವಾಗಿದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ