ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿ ಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿಯವರನ್ನು ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು ಉತ್ತಮ ಚಾರಿತ್ರ್ಯ ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು. ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪುಗೊಳ್ಳಬೇಕು. ಜ್ಞಾನ ಸಂಗ್ರಹವೇ ಶಿಕ್ಷಣದ ಗುರಿಯಲ್ಲ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುವುದೇ ಸಾಧಕರ ಸನ್ಮಾನದ ಉದ್ದೇಶ. ಪ್ರಾಥಮಿಕ ಶಾಲಾ ಹಂತದಿಂದಲೇ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದೊಂದಿಗೆ ಉನ್ನತ ಸಾಧನೆ ಮಾಡಬೇಕು. ದೇವರು ಅಗೋಚರವಾಗಿ ನಮ್ಮ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸತ್ಯ, ಧರ್ಮ, ನ್ಯಾಯ, ನೀತಿಯ ಪರಿಪಾಲನೆಯೊಂದಿಗೆ ಪ್ರಾಮಾಣಿಕ ವ್ಯವಹಾರ ನಡೆಸಬೇಕು. ಆತ್ಮಸಾಕ್ಷಿಗೆ ಸರಿಯಾಗಿ ಕರ್ತವ್ಯ ಮಾಡಬೇಕು ಎಂದರು.

ಕಾಮನ್ವೆಲ್ತ್ ಪದಕ ವಿಜೇತರಾದ ಗುರುರಾಜ್ ಪೂಜಾರಿ

ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ಪ್ರಬಲ ಇಚ್ಛಾಶಕ್ತಿಯೊಂದಿಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರಯತ್ನಿಸಿದಲ್ಲಿ ಉನ್ನತ ಸಾಧನೆಯೊಂದಿಗೆ ಯಶಸ್ಸು ಪಡೆಯಬಹುದು ಎಂದರು.

ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ ಪೂಜಾರಿ ಅವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಎಸ್‌ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸ್ಮರಿಸಿದರು ಕಾಲೇಜಿನ ಉಪಪ್ರಾಂಶುಪಾಲ ಡಾ.ಎ.ಜಯಕುಮಾ ಯುಟ್ಯೂಬ್ ಶೆಟ್ಟಿ ವಾರ್ಷಿಕ ವರದಿ ಮಂಡಿದರು. ಕಾಲೇಜು ಪ್ರಾಂಶುಪಾಲ ಡಾ.ಪಿ.ಎನ್.ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗದ ಡೀನ್ ಡಾ.ಶಲೀಪ್ ಕುಮಾರಿ ವಂದಿಸಿದರು. ಡಾ.ಬಿ.ಎ.ಕುಮಾರ್ ಹೆಗ್ಡೆ, ಡಾ.ಚಿತ್ರಾ, ಮತ್ತುಡಾ ನೆಫಿಸೆತ್ ಕಾರ್ಯಕ್ರಮ ನಿರೂಪಿಸಿದರು.

Spread the love

Related Posts

ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

Spread the love

ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

Spread the love

You Missed

ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

  • By admin
  • June 30, 2025
  • 13 views
ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

  • By admin
  • June 28, 2025
  • 271 views
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

  • By admin
  • June 26, 2025
  • 186 views
ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

  • By admin
  • June 26, 2025
  • 292 views
ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

  • By admin
  • June 25, 2025
  • 154 views
ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

  • By admin
  • June 21, 2025
  • 87 views
ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ