ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿ ಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿಯವರನ್ನು ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು ಉತ್ತಮ ಚಾರಿತ್ರ್ಯ ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು. ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪುಗೊಳ್ಳಬೇಕು. ಜ್ಞಾನ ಸಂಗ್ರಹವೇ ಶಿಕ್ಷಣದ ಗುರಿಯಲ್ಲ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುವುದೇ ಸಾಧಕರ ಸನ್ಮಾನದ ಉದ್ದೇಶ. ಪ್ರಾಥಮಿಕ ಶಾಲಾ ಹಂತದಿಂದಲೇ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದೊಂದಿಗೆ ಉನ್ನತ ಸಾಧನೆ ಮಾಡಬೇಕು. ದೇವರು ಅಗೋಚರವಾಗಿ ನಮ್ಮ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸತ್ಯ, ಧರ್ಮ, ನ್ಯಾಯ, ನೀತಿಯ ಪರಿಪಾಲನೆಯೊಂದಿಗೆ ಪ್ರಾಮಾಣಿಕ ವ್ಯವಹಾರ ನಡೆಸಬೇಕು. ಆತ್ಮಸಾಕ್ಷಿಗೆ ಸರಿಯಾಗಿ ಕರ್ತವ್ಯ ಮಾಡಬೇಕು ಎಂದರು.

ಕಾಮನ್ವೆಲ್ತ್ ಪದಕ ವಿಜೇತರಾದ ಗುರುರಾಜ್ ಪೂಜಾರಿ

ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ಪ್ರಬಲ ಇಚ್ಛಾಶಕ್ತಿಯೊಂದಿಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರಯತ್ನಿಸಿದಲ್ಲಿ ಉನ್ನತ ಸಾಧನೆಯೊಂದಿಗೆ ಯಶಸ್ಸು ಪಡೆಯಬಹುದು ಎಂದರು.

ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ ಪೂಜಾರಿ ಅವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಎಸ್‌ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸ್ಮರಿಸಿದರು ಕಾಲೇಜಿನ ಉಪಪ್ರಾಂಶುಪಾಲ ಡಾ.ಎ.ಜಯಕುಮಾ ಯುಟ್ಯೂಬ್ ಶೆಟ್ಟಿ ವಾರ್ಷಿಕ ವರದಿ ಮಂಡಿದರು. ಕಾಲೇಜು ಪ್ರಾಂಶುಪಾಲ ಡಾ.ಪಿ.ಎನ್.ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗದ ಡೀನ್ ಡಾ.ಶಲೀಪ್ ಕುಮಾರಿ ವಂದಿಸಿದರು. ಡಾ.ಬಿ.ಎ.ಕುಮಾರ್ ಹೆಗ್ಡೆ, ಡಾ.ಚಿತ್ರಾ, ಮತ್ತುಡಾ ನೆಫಿಸೆತ್ ಕಾರ್ಯಕ್ರಮ ನಿರೂಪಿಸಿದರು.

Spread the love

Related Posts

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.…

Spread the love

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್, ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ,…

Spread the love

You Missed

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

  • By admin
  • October 29, 2025
  • 42 views
ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

  • By admin
  • October 29, 2025
  • 76 views
ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

  • By admin
  • October 25, 2025
  • 27 views
ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

  • By admin
  • October 25, 2025
  • 20 views
ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

  • By admin
  • October 25, 2025
  • 22 views
ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

  • By admin
  • October 24, 2025
  • 68 views
ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ