ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿ ಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿಯವರನ್ನು ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು ಉತ್ತಮ ಚಾರಿತ್ರ್ಯ ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು. ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪುಗೊಳ್ಳಬೇಕು. ಜ್ಞಾನ ಸಂಗ್ರಹವೇ ಶಿಕ್ಷಣದ ಗುರಿಯಲ್ಲ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುವುದೇ ಸಾಧಕರ ಸನ್ಮಾನದ ಉದ್ದೇಶ. ಪ್ರಾಥಮಿಕ ಶಾಲಾ ಹಂತದಿಂದಲೇ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದೊಂದಿಗೆ ಉನ್ನತ ಸಾಧನೆ ಮಾಡಬೇಕು. ದೇವರು ಅಗೋಚರವಾಗಿ ನಮ್ಮ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸತ್ಯ, ಧರ್ಮ, ನ್ಯಾಯ, ನೀತಿಯ ಪರಿಪಾಲನೆಯೊಂದಿಗೆ ಪ್ರಾಮಾಣಿಕ ವ್ಯವಹಾರ ನಡೆಸಬೇಕು. ಆತ್ಮಸಾಕ್ಷಿಗೆ ಸರಿಯಾಗಿ ಕರ್ತವ್ಯ ಮಾಡಬೇಕು ಎಂದರು.

ಕಾಮನ್ವೆಲ್ತ್ ಪದಕ ವಿಜೇತರಾದ ಗುರುರಾಜ್ ಪೂಜಾರಿ

ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ಪ್ರಬಲ ಇಚ್ಛಾಶಕ್ತಿಯೊಂದಿಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರಯತ್ನಿಸಿದಲ್ಲಿ ಉನ್ನತ ಸಾಧನೆಯೊಂದಿಗೆ ಯಶಸ್ಸು ಪಡೆಯಬಹುದು ಎಂದರು.

ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ ಪೂಜಾರಿ ಅವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಎಸ್‌ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸ್ಮರಿಸಿದರು ಕಾಲೇಜಿನ ಉಪಪ್ರಾಂಶುಪಾಲ ಡಾ.ಎ.ಜಯಕುಮಾ ಯುಟ್ಯೂಬ್ ಶೆಟ್ಟಿ ವಾರ್ಷಿಕ ವರದಿ ಮಂಡಿದರು. ಕಾಲೇಜು ಪ್ರಾಂಶುಪಾಲ ಡಾ.ಪಿ.ಎನ್.ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗದ ಡೀನ್ ಡಾ.ಶಲೀಪ್ ಕುಮಾರಿ ವಂದಿಸಿದರು. ಡಾ.ಬಿ.ಎ.ಕುಮಾರ್ ಹೆಗ್ಡೆ, ಡಾ.ಚಿತ್ರಾ, ಮತ್ತುಡಾ ನೆಫಿಸೆತ್ ಕಾರ್ಯಕ್ರಮ ನಿರೂಪಿಸಿದರು.

Spread the love

Related Posts

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

Spread the love

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

Spread the love

You Missed

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

  • By admin
  • June 14, 2026
  • 20 views
ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

  • By admin
  • June 13, 2026
  • 72 views
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

  • By admin
  • June 13, 2026
  • 25 views
ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

  • By admin
  • June 13, 2026
  • 62 views
ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

  • By admin
  • June 13, 2026
  • 21 views
ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

  • By admin
  • June 13, 2026
  • 191 views
ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ