ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ

ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ.

ವೃಷಭ

ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ. ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಹೊಸ ಕೆಲಸ ಬರಲಿದೆ.

ಮಿಥುನ

ಮಹಿಳೆಯರಿಗೆ ವಿಶೇಷ ದಿನ. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸುವುದು ಉತ್ತಮ. ಅತಿ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ.

ಕಟಕ

ಕಾರ್ಯಕ್ಷೇತ್ರದಲ್ಲಿನ ಕೆಲಸಗಳನ್ನು ಶೀಘ್ರ ಮುಗಿಸಲಿದ್ದೀರಿ. ಮದುವೆ ಮುಂಜಿ ಮುಂತಾದ ಮಂಗಳ ಕಾರ್ಯಗಳ ಜವಾಬ್ದಾರಿ ನಿಭಾಯಿಸುವ ಧಾವಂತ ಉಂಟಾಗಲಿದೆ. ಬಂಧುಗಳ ಆಗಮನ ಸಾಧ್ಯತೆ ಕಂಡುಬರುವುದು.

ಸಿಂಹ

ಕಾರ್ಯತಂತ್ರವನ್ನು ತಡಮಾಡದೇ ಕಾರ್ಯರೂಪಕ್ಕೆ ತರಲಿದ್ದೀರಿ. ಈ ದಿನ ನೀವು ವಿಚಾರ ಮಾಡಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳು ಸರಿಯಾಗಿದ್ದು ಶುಭಫಲಗಳನ್ನೇ ತರಲಿವೆ. ಹಿರಿಯರ ಆರೋಗ್ಯಕ್ಕಾಗಿ ವೆಚ್ಚ ಭರಿಸಬೇಕಾದೀತು.

ಕನ್ಯಾ

ಸ್ನೇಹ ಸಂಬಂಧಗಳು ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ. ಪ್ರಿಯರಿಂದ ಉಡುಗೋರೆ ಲಭ್ಯವಾಗುವ ಸಾಧ್ಯತೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯ.

ತುಲಾ

ವ್ಯವಹಾರದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗದು. ಈ ದಿನದ ಕಷ್ಟದ ಕ್ಷಣಗಳು ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ತಾಳ್ಮೆ ಹಾಗೂ ಸಹಿಷ್ಣುತೆಯೇ ಈ ದಿನದ ಶುಭ ಫಲಕ್ಕೆ ಹೇತುವಾಗಲಿದೆ.

ವೃಶ್ಚಿಕ

ಚಿನ್ನಾಭರಣ ಖರೀದಿಸುವ ಸಾಧ್ಯತೆ ಕಂಡುಬರುವುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ತಂದೆಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರ ಪ್ರಯಾಣಕ್ಕೆ ಸಿದ್ಧತೆ.

ಧನು

ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ, ತಯಾರಕರಿಗೆ, ದುರಸ್ತಿ ಮಾಡುವವರಿಗೆ ಹೆಚ್ಚಿನ ಆದಾಯ . ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ಹಬ್ಬದ ವಾತಾವರಣ.

ಮಕರ

ಮೇಲಧಿಕಾರಿಗಳು ನಿಮ್ಮ ನಿರ್ಧಾರಕ್ಕೆ ನಿಮ್ಮೊಂದಿಗಿದ್ದಾರೆಂಬ ಭರವಸೆಯಿಂದ ಕೆಲಸ ನಿರ್ವಹಿಸಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಾಲೋಚನೆ ನಡೆಸುವುದು ಉತ್ತಮ.

ಕುಂಭ

ಸಹೋದ್ಯೋಗಿಗಳೊಡನೆ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಕೆಲಸದ ಒತ್ತಡ ಕಡಿಮೆಯಾಗಿ ನೆಮ್ಮದಿಯನ್ನು ತರಲಿದೆ. ಉದ್ಯೋಗದಲ್ಲಿ ಲಾಭ ಕಾಣಲಿದ್ದೀರಿ.

ಮೀನ

ಪೀಠೋಪಕರಣಗಳು ಮತ್ತು ಆಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳಿತು. ಮಕ್ಕಳ ಆರೋಗ್ಯದ ಕಡೆ ಗಮನ ಅಗತ್ಯ. ಸಂಗಾತಿಯೊಂದಿಗೆ ಸಂತಸದ ಕ್ಷಣಗಳು.

Spread the love
  • Related Posts

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ…

    Spread the love

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    You Missed

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    • By admin
    • September 18, 2024
    • 58 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

    • By admin
    • September 18, 2024
    • 22 views
    ಬಿಎಂಎಸ್  ರಿಕ್ಷಾ  ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 24 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 36 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 59 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 48 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ