ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ

ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ.

ವೃಷಭ

ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ. ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಹೊಸ ಕೆಲಸ ಬರಲಿದೆ.

ಮಿಥುನ

ಮಹಿಳೆಯರಿಗೆ ವಿಶೇಷ ದಿನ. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸುವುದು ಉತ್ತಮ. ಅತಿ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ.

ಕಟಕ

ಕಾರ್ಯಕ್ಷೇತ್ರದಲ್ಲಿನ ಕೆಲಸಗಳನ್ನು ಶೀಘ್ರ ಮುಗಿಸಲಿದ್ದೀರಿ. ಮದುವೆ ಮುಂಜಿ ಮುಂತಾದ ಮಂಗಳ ಕಾರ್ಯಗಳ ಜವಾಬ್ದಾರಿ ನಿಭಾಯಿಸುವ ಧಾವಂತ ಉಂಟಾಗಲಿದೆ. ಬಂಧುಗಳ ಆಗಮನ ಸಾಧ್ಯತೆ ಕಂಡುಬರುವುದು.

ಸಿಂಹ

ಕಾರ್ಯತಂತ್ರವನ್ನು ತಡಮಾಡದೇ ಕಾರ್ಯರೂಪಕ್ಕೆ ತರಲಿದ್ದೀರಿ. ಈ ದಿನ ನೀವು ವಿಚಾರ ಮಾಡಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳು ಸರಿಯಾಗಿದ್ದು ಶುಭಫಲಗಳನ್ನೇ ತರಲಿವೆ. ಹಿರಿಯರ ಆರೋಗ್ಯಕ್ಕಾಗಿ ವೆಚ್ಚ ಭರಿಸಬೇಕಾದೀತು.

ಕನ್ಯಾ

ಸ್ನೇಹ ಸಂಬಂಧಗಳು ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ. ಪ್ರಿಯರಿಂದ ಉಡುಗೋರೆ ಲಭ್ಯವಾಗುವ ಸಾಧ್ಯತೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯ.

ತುಲಾ

ವ್ಯವಹಾರದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗದು. ಈ ದಿನದ ಕಷ್ಟದ ಕ್ಷಣಗಳು ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ತಾಳ್ಮೆ ಹಾಗೂ ಸಹಿಷ್ಣುತೆಯೇ ಈ ದಿನದ ಶುಭ ಫಲಕ್ಕೆ ಹೇತುವಾಗಲಿದೆ.

ವೃಶ್ಚಿಕ

ಚಿನ್ನಾಭರಣ ಖರೀದಿಸುವ ಸಾಧ್ಯತೆ ಕಂಡುಬರುವುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ತಂದೆಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರ ಪ್ರಯಾಣಕ್ಕೆ ಸಿದ್ಧತೆ.

ಧನು

ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ, ತಯಾರಕರಿಗೆ, ದುರಸ್ತಿ ಮಾಡುವವರಿಗೆ ಹೆಚ್ಚಿನ ಆದಾಯ . ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ಹಬ್ಬದ ವಾತಾವರಣ.

ಮಕರ

ಮೇಲಧಿಕಾರಿಗಳು ನಿಮ್ಮ ನಿರ್ಧಾರಕ್ಕೆ ನಿಮ್ಮೊಂದಿಗಿದ್ದಾರೆಂಬ ಭರವಸೆಯಿಂದ ಕೆಲಸ ನಿರ್ವಹಿಸಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಾಲೋಚನೆ ನಡೆಸುವುದು ಉತ್ತಮ.

ಕುಂಭ

ಸಹೋದ್ಯೋಗಿಗಳೊಡನೆ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಕೆಲಸದ ಒತ್ತಡ ಕಡಿಮೆಯಾಗಿ ನೆಮ್ಮದಿಯನ್ನು ತರಲಿದೆ. ಉದ್ಯೋಗದಲ್ಲಿ ಲಾಭ ಕಾಣಲಿದ್ದೀರಿ.

ಮೀನ

ಪೀಠೋಪಕರಣಗಳು ಮತ್ತು ಆಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳಿತು. ಮಕ್ಕಳ ಆರೋಗ್ಯದ ಕಡೆ ಗಮನ ಅಗತ್ಯ. ಸಂಗಾತಿಯೊಂದಿಗೆ ಸಂತಸದ ಕ್ಷಣಗಳು.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ