ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ

ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ.

ವೃಷಭ

ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ. ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಹೊಸ ಕೆಲಸ ಬರಲಿದೆ.

ಮಿಥುನ

ಮಹಿಳೆಯರಿಗೆ ವಿಶೇಷ ದಿನ. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸುವುದು ಉತ್ತಮ. ಅತಿ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ.

ಕಟಕ

ಕಾರ್ಯಕ್ಷೇತ್ರದಲ್ಲಿನ ಕೆಲಸಗಳನ್ನು ಶೀಘ್ರ ಮುಗಿಸಲಿದ್ದೀರಿ. ಮದುವೆ ಮುಂಜಿ ಮುಂತಾದ ಮಂಗಳ ಕಾರ್ಯಗಳ ಜವಾಬ್ದಾರಿ ನಿಭಾಯಿಸುವ ಧಾವಂತ ಉಂಟಾಗಲಿದೆ. ಬಂಧುಗಳ ಆಗಮನ ಸಾಧ್ಯತೆ ಕಂಡುಬರುವುದು.

ಸಿಂಹ

ಕಾರ್ಯತಂತ್ರವನ್ನು ತಡಮಾಡದೇ ಕಾರ್ಯರೂಪಕ್ಕೆ ತರಲಿದ್ದೀರಿ. ಈ ದಿನ ನೀವು ವಿಚಾರ ಮಾಡಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳು ಸರಿಯಾಗಿದ್ದು ಶುಭಫಲಗಳನ್ನೇ ತರಲಿವೆ. ಹಿರಿಯರ ಆರೋಗ್ಯಕ್ಕಾಗಿ ವೆಚ್ಚ ಭರಿಸಬೇಕಾದೀತು.

ಕನ್ಯಾ

ಸ್ನೇಹ ಸಂಬಂಧಗಳು ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ. ಪ್ರಿಯರಿಂದ ಉಡುಗೋರೆ ಲಭ್ಯವಾಗುವ ಸಾಧ್ಯತೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯ.

ತುಲಾ

ವ್ಯವಹಾರದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗದು. ಈ ದಿನದ ಕಷ್ಟದ ಕ್ಷಣಗಳು ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ತಾಳ್ಮೆ ಹಾಗೂ ಸಹಿಷ್ಣುತೆಯೇ ಈ ದಿನದ ಶುಭ ಫಲಕ್ಕೆ ಹೇತುವಾಗಲಿದೆ.

ವೃಶ್ಚಿಕ

ಚಿನ್ನಾಭರಣ ಖರೀದಿಸುವ ಸಾಧ್ಯತೆ ಕಂಡುಬರುವುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ತಂದೆಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರ ಪ್ರಯಾಣಕ್ಕೆ ಸಿದ್ಧತೆ.

ಧನು

ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ, ತಯಾರಕರಿಗೆ, ದುರಸ್ತಿ ಮಾಡುವವರಿಗೆ ಹೆಚ್ಚಿನ ಆದಾಯ . ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ಹಬ್ಬದ ವಾತಾವರಣ.

ಮಕರ

ಮೇಲಧಿಕಾರಿಗಳು ನಿಮ್ಮ ನಿರ್ಧಾರಕ್ಕೆ ನಿಮ್ಮೊಂದಿಗಿದ್ದಾರೆಂಬ ಭರವಸೆಯಿಂದ ಕೆಲಸ ನಿರ್ವಹಿಸಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಾಲೋಚನೆ ನಡೆಸುವುದು ಉತ್ತಮ.

ಕುಂಭ

ಸಹೋದ್ಯೋಗಿಗಳೊಡನೆ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಕೆಲಸದ ಒತ್ತಡ ಕಡಿಮೆಯಾಗಿ ನೆಮ್ಮದಿಯನ್ನು ತರಲಿದೆ. ಉದ್ಯೋಗದಲ್ಲಿ ಲಾಭ ಕಾಣಲಿದ್ದೀರಿ.

ಮೀನ

ಪೀಠೋಪಕರಣಗಳು ಮತ್ತು ಆಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳಿತು. ಮಕ್ಕಳ ಆರೋಗ್ಯದ ಕಡೆ ಗಮನ ಅಗತ್ಯ. ಸಂಗಾತಿಯೊಂದಿಗೆ ಸಂತಸದ ಕ್ಷಣಗಳು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 209 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 54 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 52 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 48 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 89 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ