ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ

ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ.

ವೃಷಭ

ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ. ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಹೊಸ ಕೆಲಸ ಬರಲಿದೆ.

ಮಿಥುನ

ಮಹಿಳೆಯರಿಗೆ ವಿಶೇಷ ದಿನ. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸುವುದು ಉತ್ತಮ. ಅತಿ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ.

ಕಟಕ

ಕಾರ್ಯಕ್ಷೇತ್ರದಲ್ಲಿನ ಕೆಲಸಗಳನ್ನು ಶೀಘ್ರ ಮುಗಿಸಲಿದ್ದೀರಿ. ಮದುವೆ ಮುಂಜಿ ಮುಂತಾದ ಮಂಗಳ ಕಾರ್ಯಗಳ ಜವಾಬ್ದಾರಿ ನಿಭಾಯಿಸುವ ಧಾವಂತ ಉಂಟಾಗಲಿದೆ. ಬಂಧುಗಳ ಆಗಮನ ಸಾಧ್ಯತೆ ಕಂಡುಬರುವುದು.

ಸಿಂಹ

ಕಾರ್ಯತಂತ್ರವನ್ನು ತಡಮಾಡದೇ ಕಾರ್ಯರೂಪಕ್ಕೆ ತರಲಿದ್ದೀರಿ. ಈ ದಿನ ನೀವು ವಿಚಾರ ಮಾಡಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳು ಸರಿಯಾಗಿದ್ದು ಶುಭಫಲಗಳನ್ನೇ ತರಲಿವೆ. ಹಿರಿಯರ ಆರೋಗ್ಯಕ್ಕಾಗಿ ವೆಚ್ಚ ಭರಿಸಬೇಕಾದೀತು.

ಕನ್ಯಾ

ಸ್ನೇಹ ಸಂಬಂಧಗಳು ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ. ಪ್ರಿಯರಿಂದ ಉಡುಗೋರೆ ಲಭ್ಯವಾಗುವ ಸಾಧ್ಯತೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯ.

ತುಲಾ

ವ್ಯವಹಾರದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗದು. ಈ ದಿನದ ಕಷ್ಟದ ಕ್ಷಣಗಳು ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ತಾಳ್ಮೆ ಹಾಗೂ ಸಹಿಷ್ಣುತೆಯೇ ಈ ದಿನದ ಶುಭ ಫಲಕ್ಕೆ ಹೇತುವಾಗಲಿದೆ.

ವೃಶ್ಚಿಕ

ಚಿನ್ನಾಭರಣ ಖರೀದಿಸುವ ಸಾಧ್ಯತೆ ಕಂಡುಬರುವುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ತಂದೆಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರ ಪ್ರಯಾಣಕ್ಕೆ ಸಿದ್ಧತೆ.

ಧನು

ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ, ತಯಾರಕರಿಗೆ, ದುರಸ್ತಿ ಮಾಡುವವರಿಗೆ ಹೆಚ್ಚಿನ ಆದಾಯ . ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ಹಬ್ಬದ ವಾತಾವರಣ.

ಮಕರ

ಮೇಲಧಿಕಾರಿಗಳು ನಿಮ್ಮ ನಿರ್ಧಾರಕ್ಕೆ ನಿಮ್ಮೊಂದಿಗಿದ್ದಾರೆಂಬ ಭರವಸೆಯಿಂದ ಕೆಲಸ ನಿರ್ವಹಿಸಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಾಲೋಚನೆ ನಡೆಸುವುದು ಉತ್ತಮ.

ಕುಂಭ

ಸಹೋದ್ಯೋಗಿಗಳೊಡನೆ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಕೆಲಸದ ಒತ್ತಡ ಕಡಿಮೆಯಾಗಿ ನೆಮ್ಮದಿಯನ್ನು ತರಲಿದೆ. ಉದ್ಯೋಗದಲ್ಲಿ ಲಾಭ ಕಾಣಲಿದ್ದೀರಿ.

ಮೀನ

ಪೀಠೋಪಕರಣಗಳು ಮತ್ತು ಆಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳಿತು. ಮಕ್ಕಳ ಆರೋಗ್ಯದ ಕಡೆ ಗಮನ ಅಗತ್ಯ. ಸಂಗಾತಿಯೊಂದಿಗೆ ಸಂತಸದ ಕ್ಷಣಗಳು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು