ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಅಕ್ಕರೆಯಿಂದ ಅಕ್ಷರವನ್ನು ಕಲಿಸಿ ನಾಗರಿಕರನ್ನು ನಾಡಿನ ಸತ್ಪ್ರಜೆಯಾಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು💐💐💐

ದೇಶದ ಶೈಕ್ಷಣಿಕ ವ್ಯವಸ್ಥೆಗೆ ಮೌಲ್ಯ ನೀಡಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ನ್ನು 1962ರಿಂದಲೂ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ. ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳನ್ನು ನೆನೆಯುವ ದಿನವೇ ಶಿಕ್ಷಕರ ದಿನಾಚರಣೆ.

ಭಾರತೀಯ ಪರಂಪರೆಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ದಾಸ ಶ್ರೇಷ್ಠರಾದ ಪುರಂದರದಾಸರೇ ಗುರುವಿನ ಪ್ರಾಮುಖ್ಯತೆಯನ್ನು ಬಲು ಸೊಗಸಾಗಿಯೇ ವಿವರಿಸಿದ್ದಾರೆ. ‘ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ ಎಂಬ ಉಕ್ತಿಯಂತೆ ನಡೆದುಕೊಳ್ಳುತ್ತಿದ್ದ ಸಂದರ್ಭವೂ ಇತ್ತು. ಎಂದರೆ, ಗುರುವಿನಲ್ಲಿ ತನ್ನ ಅಧೀನತೆ ಕಂಡಾಗ ಶಿಷ್ಯನಲ್ಲಿ ಜ್ಞಾನೋದಯ ಸಾಧ್ಯ. ಗುರುವಿನ ಮೂಲಕ ಕೇಳುವ ಪಾಠ, ಪ್ರವಚನ, ವಿಚಾರಗಳಿಂದ ಶಿಷ್ಯನ ಸರ್ವಾಂಗೀಣ ಬೆಳವಣಿಗೆ ಆಗುತ್ತದೆ ಎಂಬುದು ಇದರ ಯಥಾರ್ಥ.

ವಿದ್ಯಾರ್ಥಿ ಜೀವನವನ್ನು ನೆನೆಪಿಸಿಕೊಂಡರೆ ಹಲವಾರು ಶಿಕ್ಷಕರ ಚಿತ್ರಗಳು ಸ್ಮೃತಿಪಟಲದಲ್ಲಿ ಮೂಡುತ್ತವೆ. ಪ್ರತಿಯೊಬ್ಬನ ಬದುಕಿನಲ್ಲಿ ಶಿಕ್ಷಣವನ್ನು ಪಡೆಯುವಾಗ ಶಿಕ್ಷಕರ ಪ್ರವೇಶವಾಗಿರುವುದು ನಿಜ. ದಾರಿ ತಪ್ಪಿದಾಗ ತಿದ್ದಿ, ಮೌಲ್ಯಯುತ ಶಿಕ್ಷಣ ಒದಗಿಸಿ ಸಮಾಜದಲ್ಲಿ ತನಗೂ ಒಂದು ಅಸ್ಮಿತೆ ಇದೆ ಎಂಬುದನ್ನು ಸಾಧಿಸುವಂತೆ ಮಾಡಿದ ಗುರುಗಳನ್ನು ಮರೆಯಲು ಅಸಾಧ್ಯ. ಅಂಥ ಶಿಕ್ಷಕರನ್ನು ಸ್ಮರಿಸುವ ದಿನವೇ ಶಿಕ್ಷಕರ ದಿನಾಚರಣೆ.

Spread the love
  • Related Posts

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 25 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 63 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 83 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ