ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಅಕ್ಕರೆಯಿಂದ ಅಕ್ಷರವನ್ನು ಕಲಿಸಿ ನಾಗರಿಕರನ್ನು ನಾಡಿನ ಸತ್ಪ್ರಜೆಯಾಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು💐💐💐

ದೇಶದ ಶೈಕ್ಷಣಿಕ ವ್ಯವಸ್ಥೆಗೆ ಮೌಲ್ಯ ನೀಡಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ನ್ನು 1962ರಿಂದಲೂ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ. ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳನ್ನು ನೆನೆಯುವ ದಿನವೇ ಶಿಕ್ಷಕರ ದಿನಾಚರಣೆ.

ಭಾರತೀಯ ಪರಂಪರೆಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ದಾಸ ಶ್ರೇಷ್ಠರಾದ ಪುರಂದರದಾಸರೇ ಗುರುವಿನ ಪ್ರಾಮುಖ್ಯತೆಯನ್ನು ಬಲು ಸೊಗಸಾಗಿಯೇ ವಿವರಿಸಿದ್ದಾರೆ. ‘ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ ಎಂಬ ಉಕ್ತಿಯಂತೆ ನಡೆದುಕೊಳ್ಳುತ್ತಿದ್ದ ಸಂದರ್ಭವೂ ಇತ್ತು. ಎಂದರೆ, ಗುರುವಿನಲ್ಲಿ ತನ್ನ ಅಧೀನತೆ ಕಂಡಾಗ ಶಿಷ್ಯನಲ್ಲಿ ಜ್ಞಾನೋದಯ ಸಾಧ್ಯ. ಗುರುವಿನ ಮೂಲಕ ಕೇಳುವ ಪಾಠ, ಪ್ರವಚನ, ವಿಚಾರಗಳಿಂದ ಶಿಷ್ಯನ ಸರ್ವಾಂಗೀಣ ಬೆಳವಣಿಗೆ ಆಗುತ್ತದೆ ಎಂಬುದು ಇದರ ಯಥಾರ್ಥ.

ವಿದ್ಯಾರ್ಥಿ ಜೀವನವನ್ನು ನೆನೆಪಿಸಿಕೊಂಡರೆ ಹಲವಾರು ಶಿಕ್ಷಕರ ಚಿತ್ರಗಳು ಸ್ಮೃತಿಪಟಲದಲ್ಲಿ ಮೂಡುತ್ತವೆ. ಪ್ರತಿಯೊಬ್ಬನ ಬದುಕಿನಲ್ಲಿ ಶಿಕ್ಷಣವನ್ನು ಪಡೆಯುವಾಗ ಶಿಕ್ಷಕರ ಪ್ರವೇಶವಾಗಿರುವುದು ನಿಜ. ದಾರಿ ತಪ್ಪಿದಾಗ ತಿದ್ದಿ, ಮೌಲ್ಯಯುತ ಶಿಕ್ಷಣ ಒದಗಿಸಿ ಸಮಾಜದಲ್ಲಿ ತನಗೂ ಒಂದು ಅಸ್ಮಿತೆ ಇದೆ ಎಂಬುದನ್ನು ಸಾಧಿಸುವಂತೆ ಮಾಡಿದ ಗುರುಗಳನ್ನು ಮರೆಯಲು ಅಸಾಧ್ಯ. ಅಂಥ ಶಿಕ್ಷಕರನ್ನು ಸ್ಮರಿಸುವ ದಿನವೇ ಶಿಕ್ಷಕರ ದಿನಾಚರಣೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 46 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 33 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 80 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 40 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 238 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”