ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಅಕ್ಕರೆಯಿಂದ ಅಕ್ಷರವನ್ನು ಕಲಿಸಿ ನಾಗರಿಕರನ್ನು ನಾಡಿನ ಸತ್ಪ್ರಜೆಯಾಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು💐💐💐

ದೇಶದ ಶೈಕ್ಷಣಿಕ ವ್ಯವಸ್ಥೆಗೆ ಮೌಲ್ಯ ನೀಡಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ನ್ನು 1962ರಿಂದಲೂ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ. ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳನ್ನು ನೆನೆಯುವ ದಿನವೇ ಶಿಕ್ಷಕರ ದಿನಾಚರಣೆ.

ಭಾರತೀಯ ಪರಂಪರೆಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ದಾಸ ಶ್ರೇಷ್ಠರಾದ ಪುರಂದರದಾಸರೇ ಗುರುವಿನ ಪ್ರಾಮುಖ್ಯತೆಯನ್ನು ಬಲು ಸೊಗಸಾಗಿಯೇ ವಿವರಿಸಿದ್ದಾರೆ. ‘ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ ಎಂಬ ಉಕ್ತಿಯಂತೆ ನಡೆದುಕೊಳ್ಳುತ್ತಿದ್ದ ಸಂದರ್ಭವೂ ಇತ್ತು. ಎಂದರೆ, ಗುರುವಿನಲ್ಲಿ ತನ್ನ ಅಧೀನತೆ ಕಂಡಾಗ ಶಿಷ್ಯನಲ್ಲಿ ಜ್ಞಾನೋದಯ ಸಾಧ್ಯ. ಗುರುವಿನ ಮೂಲಕ ಕೇಳುವ ಪಾಠ, ಪ್ರವಚನ, ವಿಚಾರಗಳಿಂದ ಶಿಷ್ಯನ ಸರ್ವಾಂಗೀಣ ಬೆಳವಣಿಗೆ ಆಗುತ್ತದೆ ಎಂಬುದು ಇದರ ಯಥಾರ್ಥ.

ವಿದ್ಯಾರ್ಥಿ ಜೀವನವನ್ನು ನೆನೆಪಿಸಿಕೊಂಡರೆ ಹಲವಾರು ಶಿಕ್ಷಕರ ಚಿತ್ರಗಳು ಸ್ಮೃತಿಪಟಲದಲ್ಲಿ ಮೂಡುತ್ತವೆ. ಪ್ರತಿಯೊಬ್ಬನ ಬದುಕಿನಲ್ಲಿ ಶಿಕ್ಷಣವನ್ನು ಪಡೆಯುವಾಗ ಶಿಕ್ಷಕರ ಪ್ರವೇಶವಾಗಿರುವುದು ನಿಜ. ದಾರಿ ತಪ್ಪಿದಾಗ ತಿದ್ದಿ, ಮೌಲ್ಯಯುತ ಶಿಕ್ಷಣ ಒದಗಿಸಿ ಸಮಾಜದಲ್ಲಿ ತನಗೂ ಒಂದು ಅಸ್ಮಿತೆ ಇದೆ ಎಂಬುದನ್ನು ಸಾಧಿಸುವಂತೆ ಮಾಡಿದ ಗುರುಗಳನ್ನು ಮರೆಯಲು ಅಸಾಧ್ಯ. ಅಂಥ ಶಿಕ್ಷಕರನ್ನು ಸ್ಮರಿಸುವ ದಿನವೇ ಶಿಕ್ಷಕರ ದಿನಾಚರಣೆ.

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ