ಮಲೆನಾಡಿನಲ್ಲಿ ನಡೆದ ಬಹುದೊಡ್ಡ ದುರಂತ! ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ಬಹುದೊಡ್ಡ ಸ್ಪೋಟ! ಲಾರಿಯಲ್ಲಿದ್ದ ಜಿಲೆಟಿನ್ ಬ್ಲಾಸ್ಟ್! 10 ಮಂದಿ ಸಾವನ್ನಪ್ಪಿದ ಸಾದ್ಯತೆ! ಶಿವಮೊಗ್ಗದ ಹುಣುಸೋಡು ರೈಲ್ವೇ ಕ್ರಷರ್ ನಲ್ಲಿ ನಡೆದ ದುರ್ಘಟನೆ

ಶಿವಮೊಗ್ಗ: ಶಿವಮೊಗ್ಗದ ಅಬ್ಬಲಗೆರೆ ಹುಣಸೋಡು ಬಳಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಭಾರಿ ಸ್ಪೋಟವಾಗಿದ್ದು ಮಲೆನಾಡಿನಲ್ಲಿ ಬಹುದೊಡ್ಡ ದುರ್ಘಟನೆ ನಡೆದಿದ್ದು 10 ರಿಂದ 15 ಮಂದಿ ಸಾವಿಗೀಡಾಗಿರುವ ಸಾಧ್ಯತೆಯಿದೆ.

ಲಾರಿಯಲ್ಲಿ ಡೈನಾಮೆಟ್ ಸ್ಪೋಟಗೊಂಡು ಲಾರಿ ಛಿದ್ರವಾಗಿದ್ದು ಬಿಹಾರ ಮೂಲದ 15 ಕ್ಕೂ ಅಧಿಕ ಕಾರ್ಮಿಕರು ಸಾವನ್ನಪ್ಪಿದ ಸಾದ್ಯತೆಯಿದೆ.

ಬ್ಲಾಸ್ಟ್ ಆದ ಲಾರಿಯ ಅವಶೇಷಗಳು

ಡೈನಾಮೆಟ್ ಸ್ಪೋಟದ ತೀವ್ರತೆಗೆ ಕಾರ್ಮಿಕರ ದೇಹ ಛಿದ್ರಛಿದ್ರವಾಗಿದೆ. ಅನಿಲ್ ಎಂಬುವವರ ಒಡೆತನಕ್ಕೆ ಸೇರಿದ ಕ್ರಷರ್‌ನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಗಂಟೆ ಕಳೆದರೂ ಪೊಲೀಸರು ಸ್ಥಳಕ್ಕೆ ಆಗಮಿಸಿರಲಿಲ್ಲ. ಹಾಗೆಯೇ ಸ್ಥಳದಲ್ಲಿ ಸ್ಫೋಟಗೊಳ್ಳದ ಜೀವಂತ ಡೈನಾಮೈಟ್‌ಗಳು ಇರುವ ಸಾಧ್ಯತೆ ಇದೆ ಎಂಬ ಭೀತಿ ಕೂಡ ಇದೆ.

ಇಡೀ ಜಿಲ್ಲೆಯಲ್ಲಿ ಅಷ್ಟೇ ಅಲ್ಲದೇ ಚಿಕ್ಕಮಗಳೂರು, ಶಿರಸಿ, ಸಿದ್ದಾಪುರ, ದಾವಣಗೆರೆಯಲ್ಲೂ ಕೇಳಿಬಂದ ಶಬ್ದಕ್ಕೆ ಇದು ಕಾರಣವಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಅಥವಾ ಭಾರೀ ಶಬ್ದದ ತೀವ್ರತೆಗೆ ಡೈನಾಮೈಟ್‌ ಬ್ಲಾಸ್‌ ಆಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಪೋಲೀಸ್ ವರಿಷ್ಠಾಧಿಕಾರಿಯವರು ಬೇಟಿ ನೀಡಿ ಪರಿಶೀಲನೆ ನಡೆಸುತಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 33 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 28 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 77 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 37 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 148 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 226 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”