ಶಿರಾಡಿ ಘಾಟ್ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಸಂಚಾರಕ್ಕೆ ಅನುಮತಿ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ: ಸಚಿವ ಆರ್. ಅಶೋಕ್

ಹಾಸನ: ಮಲೆನಾಡು ಪ್ರದೇಶದಲ್ಲಿ ಮಳೆಹಾನಿಗೊಳಗಾದ ಶಿರಾಡಿ ಘಾಟ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳು ಸಂಚಾರಕ್ಕೆ ಮುಕ್ತವಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

ಲಘುವಾಹನಗಳು ಮತ್ತು ಬಾರಿ ವಾಹನಗಳು 22/08/2021ರಿಂದ ಜಾರಿಗೆ ಬರುವಂತೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚರಿಸಲು ಮುಕ್ತ ಅವಕಾಶ ನೀಡಲಾಗಿದೆ.

ಇಲ್ಲಿನ ಸಕಲೇಶಪುರದ ದೋಣಿಗಲ್ ಎಂಬಲ್ಲಿ ರಸ್ತೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಿತ್ತು. ಶಿರಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿತ್ತು. ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆ ಕಾರಣದಿಂದ ವಾಹನ ಸವಾರರು ಚಾರ್ಮಾಡಿ ಘಾಟ್ ಮೂಲಕ ಸಂಚಾರ ನಡೆಸುವ ಸನ್ನಿವೇಶ ಎದುರಾಗಿತ್ತು. ಆದರೆ, ನಿನ್ನೆ ಚಾರ್ಮಾಡಿ ಘಾಟ್​ನಲ್ಲೂ ರಾತ್ರಿ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ, ಘನ ವಾಹನಗಳ ಪ್ರಯಾಣ ನಿರ್ಬಂಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಪರದಾಟ ಮತ್ತಷ್ಟು ಹೆಚ್ಚಾಗಿತ್ತು. ಬದಲಿ ಮಾರ್ಗವಾಗಿ ರಾತ್ರಿ ಪ್ರಯಾಣ ಮಾಡುವವರು ಮಡಿಕೇರಿ ಮೂಲಕವೇ ಸಂಚಾರ ನಡೆಸಬೇಕಿತ್ತು. ಈ ಕಾರಣದಿಂದ ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ತೆರೆದು ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಆದರೆ, ಕೆಲವು ನಿಯಮಗಳನ್ನು ತಿಳಿಸಲಾಗಿದೆ.

ಅದರಂತೆ, ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ, ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದೆ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 56 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 22 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 61 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 188 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2200 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ