ಶಿರಾಡಿ ಘಾಟ್ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಸಂಚಾರಕ್ಕೆ ಅನುಮತಿ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ: ಸಚಿವ ಆರ್. ಅಶೋಕ್

ಹಾಸನ: ಮಲೆನಾಡು ಪ್ರದೇಶದಲ್ಲಿ ಮಳೆಹಾನಿಗೊಳಗಾದ ಶಿರಾಡಿ ಘಾಟ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳು ಸಂಚಾರಕ್ಕೆ ಮುಕ್ತವಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

ಲಘುವಾಹನಗಳು ಮತ್ತು ಬಾರಿ ವಾಹನಗಳು 22/08/2021ರಿಂದ ಜಾರಿಗೆ ಬರುವಂತೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚರಿಸಲು ಮುಕ್ತ ಅವಕಾಶ ನೀಡಲಾಗಿದೆ.

ಇಲ್ಲಿನ ಸಕಲೇಶಪುರದ ದೋಣಿಗಲ್ ಎಂಬಲ್ಲಿ ರಸ್ತೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಿತ್ತು. ಶಿರಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿತ್ತು. ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆ ಕಾರಣದಿಂದ ವಾಹನ ಸವಾರರು ಚಾರ್ಮಾಡಿ ಘಾಟ್ ಮೂಲಕ ಸಂಚಾರ ನಡೆಸುವ ಸನ್ನಿವೇಶ ಎದುರಾಗಿತ್ತು. ಆದರೆ, ನಿನ್ನೆ ಚಾರ್ಮಾಡಿ ಘಾಟ್​ನಲ್ಲೂ ರಾತ್ರಿ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ, ಘನ ವಾಹನಗಳ ಪ್ರಯಾಣ ನಿರ್ಬಂಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಪರದಾಟ ಮತ್ತಷ್ಟು ಹೆಚ್ಚಾಗಿತ್ತು. ಬದಲಿ ಮಾರ್ಗವಾಗಿ ರಾತ್ರಿ ಪ್ರಯಾಣ ಮಾಡುವವರು ಮಡಿಕೇರಿ ಮೂಲಕವೇ ಸಂಚಾರ ನಡೆಸಬೇಕಿತ್ತು. ಈ ಕಾರಣದಿಂದ ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ತೆರೆದು ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಆದರೆ, ಕೆಲವು ನಿಯಮಗಳನ್ನು ತಿಳಿಸಲಾಗಿದೆ.

ಅದರಂತೆ, ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ, ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದೆ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ