ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

ಶಿರೂರು: ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ. ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.

Spread the love
  • Related Posts

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

    Spread the love

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ, ಹಲವೆಡೆ ಜಲಾವೃತ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 139 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು