ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

ಶಿರೂರು: ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ. ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 20 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 46 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 92 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ