ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ

ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ
ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ
ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಶ್ರೀಪಾದರು ಹಾಗೂ ಅಭಿಮಾನಿ ಬಳಗದವರು ಶ್ರೀ ಶಿರೂರು ಭಕ್ತವೃಂದಕ್ಕೆ ಕರೆ ನೀಡಿದ್ದಾರೆ.

ಕೇಮಾರು ಶ್ರೀ

ನಿರಂತರ 48 ವರ್ಷಗಳ ಕಾಲ ಶ್ರೀಕೃಷ್ಣದೇವರಿಗೆ ಪೂಜೆ ಸಲ್ಲಿಸಿ,ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ಪೂರೈಸಿ ಕೃಷ್ಣಮಠ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ಸಲ್ಲಿಸಿರುವ ಶ್ರೀ ಮುಖ್ಯಪ್ರಾಣದೇವರ ಅನನ್ಯ ಉಪಾಸಕ, ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು 2018ರ ಜುಲೈ19ರಂದು ಹರಿಪಾದ ಸೇರಿದ್ದರು.

ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು,ಉಡುಪಿ, ಸಿಮಂತೂರು, ಕೇಮಾರು ಸೇರಿದಂತೆ ನಾಡಿನ ವಿವಿಧ ಸ್ಥಳಗಳಲ್ಲಿ ಶ್ರೀ ಶಿರೂರು ಶ್ರೀಪಾದರ ಜನ್ಮದಿನ ಹಾಗೂ ಕೃಷ್ಣೈಖ್ಯ ದಿನವನ್ನು ಶ್ರೀ ಶಿರೂರು ಶ್ರೀಪಾದರ ಆಪ್ತರಾದ
ಶ್ರೀ ಕೇಮಾರು ಸಾಂದೀಪಿನಿ ಮಠದ
ಶ್ರೀ ಈಶವಿಠಲದಾಸ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತವೃಂದವು ವಿವಿಧ ಸಮಾಜಮುಖೀ ಕಾರ್ಯಕ್ರಮಗಳೊಂದಿಗೆ ಸ್ಮರಣಾರ್ಹವಾಗಿ ಆಯೋಜಿಸಿತ್ತು.

ಆದರೆ ಈ ಭಾರೀ ಕೊರೋನಾ ಸಮಸ್ಯೆಯು ಎಲ್ಲೆಡೆ ತೀವ್ರಗೊಂಡಿರುವ ಕಾರಣ ಜಿಲ್ಲಾಡಳಿತದ ನೀತಿ ಸಂಹಿತೆಯನ್ನು ಗೌರವಿಸಿ ಶ್ರೀಶಿರೂರು ಶ್ರೀಪಾದರ ಸಂಸ್ಮರಣಾ ಕಾರ್ಯಕ್ರಮವನ್ನು ಶಿಷ್ಯ ಸಮುದಾಯ ಹಾಗೂ ಅಭಿಮಾನಿಗಳು ಸ್ವಗೃಹದಲ್ಲೇ ಸರಳವಾಗಿ ಆಚರಿಸಬೇಕೆಂದು ಶ್ರೀಕೇಮಾರು ಶ್ರೀಪಾದರು, ಶಿರೂರು ಶ್ರೀ ಅಭಿಮಾನಿ ಬಳಗದ ಶ್ರೀ ರಾಧಾಕೃಷ್ಣ ಶೆಟ್ಟಿ
ದೊಡ್ನಗುಡ್ಡೆ, ಜಯರಾಂ ಅಂಬೇಕಲ್ಲು, ನವೀನ್ ರಾವ್, ಶ್ರೀಜಿತ್ ಹಾಗೂ ಶಿರೂರು ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ.ಲಾತವ್ಯ ಆಚಾರ್ಯ ರವರು ವಿನಂತಿಸಿಕೊಂಡಿದ್ದಾರೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ