ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ

ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ
ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ
ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಶ್ರೀಪಾದರು ಹಾಗೂ ಅಭಿಮಾನಿ ಬಳಗದವರು ಶ್ರೀ ಶಿರೂರು ಭಕ್ತವೃಂದಕ್ಕೆ ಕರೆ ನೀಡಿದ್ದಾರೆ.

ಕೇಮಾರು ಶ್ರೀ

ನಿರಂತರ 48 ವರ್ಷಗಳ ಕಾಲ ಶ್ರೀಕೃಷ್ಣದೇವರಿಗೆ ಪೂಜೆ ಸಲ್ಲಿಸಿ,ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ಪೂರೈಸಿ ಕೃಷ್ಣಮಠ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ಸಲ್ಲಿಸಿರುವ ಶ್ರೀ ಮುಖ್ಯಪ್ರಾಣದೇವರ ಅನನ್ಯ ಉಪಾಸಕ, ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು 2018ರ ಜುಲೈ19ರಂದು ಹರಿಪಾದ ಸೇರಿದ್ದರು.

ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು,ಉಡುಪಿ, ಸಿಮಂತೂರು, ಕೇಮಾರು ಸೇರಿದಂತೆ ನಾಡಿನ ವಿವಿಧ ಸ್ಥಳಗಳಲ್ಲಿ ಶ್ರೀ ಶಿರೂರು ಶ್ರೀಪಾದರ ಜನ್ಮದಿನ ಹಾಗೂ ಕೃಷ್ಣೈಖ್ಯ ದಿನವನ್ನು ಶ್ರೀ ಶಿರೂರು ಶ್ರೀಪಾದರ ಆಪ್ತರಾದ
ಶ್ರೀ ಕೇಮಾರು ಸಾಂದೀಪಿನಿ ಮಠದ
ಶ್ರೀ ಈಶವಿಠಲದಾಸ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತವೃಂದವು ವಿವಿಧ ಸಮಾಜಮುಖೀ ಕಾರ್ಯಕ್ರಮಗಳೊಂದಿಗೆ ಸ್ಮರಣಾರ್ಹವಾಗಿ ಆಯೋಜಿಸಿತ್ತು.

ಆದರೆ ಈ ಭಾರೀ ಕೊರೋನಾ ಸಮಸ್ಯೆಯು ಎಲ್ಲೆಡೆ ತೀವ್ರಗೊಂಡಿರುವ ಕಾರಣ ಜಿಲ್ಲಾಡಳಿತದ ನೀತಿ ಸಂಹಿತೆಯನ್ನು ಗೌರವಿಸಿ ಶ್ರೀಶಿರೂರು ಶ್ರೀಪಾದರ ಸಂಸ್ಮರಣಾ ಕಾರ್ಯಕ್ರಮವನ್ನು ಶಿಷ್ಯ ಸಮುದಾಯ ಹಾಗೂ ಅಭಿಮಾನಿಗಳು ಸ್ವಗೃಹದಲ್ಲೇ ಸರಳವಾಗಿ ಆಚರಿಸಬೇಕೆಂದು ಶ್ರೀಕೇಮಾರು ಶ್ರೀಪಾದರು, ಶಿರೂರು ಶ್ರೀ ಅಭಿಮಾನಿ ಬಳಗದ ಶ್ರೀ ರಾಧಾಕೃಷ್ಣ ಶೆಟ್ಟಿ
ದೊಡ್ನಗುಡ್ಡೆ, ಜಯರಾಂ ಅಂಬೇಕಲ್ಲು, ನವೀನ್ ರಾವ್, ಶ್ರೀಜಿತ್ ಹಾಗೂ ಶಿರೂರು ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ.ಲಾತವ್ಯ ಆಚಾರ್ಯ ರವರು ವಿನಂತಿಸಿಕೊಂಡಿದ್ದಾರೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    ಬೆಂಗಳೂರು: ವಿಶ್ವಖ್ಯಾತ ಪರಿಸರವಾದಿ ಮತ್ತು ಪದ್ಮಶ್ರಿ ಪ್ರಶಸ್ತಿ ಪುರಸ್ಕೃತೆ ಶತಾಯುಷಿ ಸಾಲುಮರದ ತಿಮ್ಮಕ್ಕ ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ…

    Spread the love

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    You Missed

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    • By admin
    • November 14, 2025
    • 57 views
    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 88 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 149 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 196 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 71 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 254 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ