ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 114ನೇ ಜನ್ಮಜಯಂತಿ ಆಚರಣೆ

ತುಮಕೂರು: ಇಂದು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 114ನೇ ಜನ್ಮಜಯಂತಿಯನ್ನು ಆಚರಿಸಲಾಯಿತು . ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಮಠ, ಗದ್ದುಗೆ ಪೂಜೆ, ಮಕ್ಕಳ ನಾಮಕರಣದ ಮೂಲಕ ಜನ್ಮದಿನ ಕಾರ್ಯಕ್ರಮ ನೆರವೇರಿತು. ಬೆಳಗ್ಗೆಯಿಂದ ಭಕ್ತರು ಮಠಕ್ಕೆ ಆಗಮಿಸಿ ಗದ್ದುಗೆ ದರ್ಶನ ಪಡೆದರು.

ಸಾಮೂಹಿಕ ನಾಮಕರಣ ಮತ್ತು ತೊಟ್ಟಿಲು ಶಾಸ್ತ್ರ ಕಾರ್ಯಕ್ರಮ: ಸಾಮೂಹಿಕ ನಾಮಕರಣ ಕಾರ್ಯಕ್ರಮವನ್ನು ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದು, ಶ್ರೀಗಳ ಹುಟ್ಟುಹಬ್ಬದಲ್ಲಿ ಈ ಕಾರ್ಯಕ್ರಮ ಮೆರುಗು ನೀಡಿದೆ. ಮಠದ ಆವರಣದಲ್ಲಿರುವ ಉದ್ಧಾನ ಶಿವಯೋಗಿಗಳ ಸಮುದಾಯ ಭವನದಲ್ಲಿ 48 ಮಕ್ಕಳಿಗೆ ಸಾಮೂಹಿಕ ನಾಮಕರಣ ಏರ್ಪಡಿಸಲಾಗಿತ್ತು.

ಬಳಿಕ ಶ್ರೀಗಳ ಭಾವಚಿತ್ರ ಹಾಗೂ ಪುತ್ಥಳಿಯನ್ನು ಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು. ನಂದಿ ಧ್ವಜ, ವೀರಗಾಸೆ, ಪೂರ್ಣಕುಂಭದ ಮೂಲಕ ನಡೆದ ಮೆರವಣಿಗೆ ಶ್ರೀಗಳ ಹುಟ್ಟುಹಬ್ಬಕ್ಕೆ ಮೆರಗು ನೀಡಿತು. ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದರು. ಪೀಠಾಧಿಪತಿ ಸಿದ್ದಲಿಂಗಸ್ವಾಮೀಜಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದರು.

ಬೆಂಗಳೂರು-ತುಮಕೂರು ಸೇರಿದಂತೆ ರಾಜ್ಯದ ಹಲವು ಕಡೆಯಿಂದ ಪೋಷಕರು ಮಕ್ಕಳನ್ನು ಕೆರೆದುಕೊಂಡು ಬಂದಿದ್ದರು. ಗಂಡುಮಕ್ಕಳಿಗೆ ಶಿವಕುಮಾರ್, ಹೆಣ್ಣು ಮಕ್ಕಳಿಗೆ ಶಿವಾನಿ ಎಂದು ನಾಮಕರಣ ಮಾಡಲಾಯಿತು. ನಾಮಕರಣದಲ್ಲಿ ಪಾಲ್ಗೊಂಡಿದ್ದ ಪೋಷಕರಿಗೆ ತೊಟ್ಟಿಲು ಹಾಗೂ ಶ್ರೀಗಳ ಭಾವಚಿತ್ರ ನೀಡಲಾಯಿತು.

ನಡೆದಾಡುವ ದೇವರಿಗೆ ಪ್ರಧಾನಿ ನರೆಂದ್ರ ಮೋದಿ ಅವರೂ ಟ್ವೀಟ್​ ಮೂಲಕ ಶುಭಾಶಯ ತಿಳಿಸಿದ್ದಾರೆ.

ಬೆಳಗ್ಗೆಯಿಂದಲೇ ಮಠದ ಆವರಣದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದ್ದು, ಭಕ್ತಾದಿಗಳು ಬೆಳಗ್ಗೆಯಿಂದ ಮಠದತ್ತ ಧಾವಿಸಿ ಗದ್ದುಗೆ ದರ್ಶನ ಪಡೆದರು. ಮಠಕ್ಕೆ ಬರುವ ಎಲ್ಲಾ ಭಕ್ತರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದ್ದು ಪಾಯಸ, ಮೈಸೂರು ಪಾಕ್, ಚಿತ್ರಾನ್ನ, ಮಧ್ಯಾಹ್ನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ