ಲಾಕ್ ಡೌನ್ ಸಮಯದಲ್ಲಿ ಶ್ರಾವಣ ಸೋಮವಾರದ ವೃತವನ್ನು ಹೇಗೆ ಆಚರಿಸಬಹುದು.

‘ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ?

೨೭ ಜುಲೈ ಹಾಗೂ ೩, ೧೦ ಮತ್ತು ೧೭ ಆಗಸ್ಟ್ ಈ ದಿನಗಳಂದು ಶ್ರಾವಣ ಸೋಮವಾರದ ವ್ರತವನ್ನು ಆಚರಿಸಲಾಗುತ್ತದೆ.

ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು ಹೇಳುತ್ತಾರೆ. ಆಪದ್ಧರ್ಮವೆಂದರೆ ‘ಆಪದಿ ಕರ್ತವ್ಯೋ ಧರ್ಮಃ| ಎಂದರೆ ಆಪತ್ತಿನ ಸಮಯದಲ್ಲಿ ಆಚರಿಸುವ ಧರ್ಮ.
ಇಂತಹ ಸಂದರ್ಭದಲ್ಲಿ ಶ್ರಾವಣ ತಿಂಗಳು ಬರುತ್ತಿರುವುದರಿಂದ ಸಂಪತ್ಕಾಲದಲ್ಲಿ ತಿಳಿಸಿರುವ ಪದ್ಧತಿಯಿಂದ ಈ ಕಾಲಾವಧಿಯಲ್ಲಿ ಸಾಮೂಹಿಕ ರೂಪದಲ್ಲಿ ಆಚರಿಸುವ ಪರಂಪರೆಯಿರುವ ವಿವಿಧ ಹಬ್ಬಗಳು ಮತ್ತು ವ್ರತಗಳನ್ನು ಎಂದಿನಂತೆ ಆಚರಿಸಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಸದ್ಯದ ದೃಷ್ಟಿಯಿಂದ ಧರ್ಮಾಚರಣೆಯೆಂದು ಶ್ರಾವಣ ಸೋಮವಾರದಂದು ಮಾಡುವ ‘ಶ್ರಾವಣ ಸೋಮವಾರ ವ್ರತವನ್ನು ಹೇಗೆ ಆಚರಿಸುವುದು, ಎನ್ನುವ ವಿಚಾರವನ್ನು ಮಾಡಲಾಗಿದೆ. ಇಲ್ಲಿ ಮಹತ್ವದ ವಿಷಯವೆಂದರೆ, ಹಿಂದೂ ಧರ್ಮವು ಯಾವ ಮಟ್ಟದ ವರೆಗೆ ಮಾನವನ ವಿಚಾರವನ್ನು ಮಾಡಿದೆ ಎಂಬುದು ಇದರಿಂದ ಕಲಿಯಬಹುದಾಗಿದೆ. ಅದರಂತೆ ಹಿಂದೂ ಧರ್ಮದ ಶ್ರೇಷ್ಠತೆ ಗಮನಕ್ಕೆ ಬರುತ್ತದೆ.
ಶ್ರಾವಣ ಸೋಮವಾರದಂದು ಶಿವನ ದೇವಸ್ಥಾನಕ್ಕೆ ಹೋಗಿ ಶಿವಲಿಂಗಕ್ಕೆ ಅಭಿಷೇಕ ಮಾಡುವ ಪದ್ಧತಿಯಿದೆ. ‘ಲಾಕ್‌ಡೌನ್’ ಕಾರಣದಿಂದ ಮನೆಯಿಂದ ಹೊರಗೆ ಶಿವಾಲಯಕ್ಕೆ ಹೋಗಲು ಸಾಧ್ಯವಿಲ್ಲದವರು ‘ಆಪದ್ಧರ್ಮದ ಭಾಗವೆಂದು ಮನೆಯಲ್ಲಿಯೇ ಇದ್ದು, ಈ ವ್ರತವನ್ನು ಯಾವ ರೀತಿ ಆಚರಿಸಬೇಕು ಎನ್ನುವ ವಿಷಯದ ಲೇಖನದಲ್ಲಿ ಧರ್ಮಶಾಸ್ತ್ರಾಧಾರಿತ ವಿಶ್ಲೇಷಣೆಯನ್ನು ಮಾಡಲಾಗಿದೆ.

೧. ಶ್ರಾವಣ ಸೋಮವಾರದಂದು ಉಪವಾಸವನ್ನು ಮಾಡಿ ಶಿವನನ್ನು ವಿಧಿವತ್ತಾಗಿ ಪೂಜಿಸುವುದು.
‘ಉಪೋಷಿತಃ ಶುಚಿರ್ಭೂತ್ವಾ ಸೋಮವಾರೇ ಜಿತೇನ್ದ್ರಿಯಃ|
ವೈದಿಕೈರ್ಲೌಕಿಕೈರ್ಮನ್ತ್ರೈರ್ವಿಧಿವತ್ಪೂಜಯೇಚ್ಛಿವಮ್ ||’

ಸ್ಕಂದಪುರಾಣ, ಬ್ರಹ್ಮಖಂಡ, ಅಧ್ಯಾಯ ೮, ಶ್ಲೋಕ ೧೦
ಅರ್ಥ: ಸಂಯಮ ಮತ್ತು ಶುಚಿರ್ಭೂತ ಮುಂತಾದ ನಿಯಮಗಳ ಪಾಲನೆಯನ್ನು ಮಾಡುತ್ತ ಸೋಮವಾರದಂದು ಉಪವಾಸ ಮಾಡಿ ವೈದಿಕ ಅಥವಾ ಲೌಕಿಕ ಮಂತ್ರಗಳಿಂದ ಶಿವನನ್ನು ವಿಧಿವತ್ತಾಗಿ ಪೂಜಿಸಬೇಕು.
ಶಾಸ್ತ್ರಕಾರರು ಮನಸ್ಸಿನ ಮೇಲೆ ಸಂಯಮವನ್ನು ಇಟ್ಟು, ಶುಚಿರ್ಭೂತರಾಗಿ ನಿಯಮಗಳನ್ನು ಪಾಲಿಸುವ ವಿಷಯದಲ್ಲಿ ಮತ್ತು ಉಪವಾಸ ಮಾಡುವ ವಿಷಯದಲ್ಲಿ ತಿಳಿಸಿದ್ದಾರೆ. ಅದರಂತೆ ತಮ್ಮ ತಮ್ಮ ಜ್ಞಾನದ ಆಧಾರದಲ್ಲಿ ಸಾಧ್ಯವಿದ್ದರೆ, ಆ ವೈದಿಕ ಅಥವಾ ಲೌಕಿಕ ಮಂತ್ರಗಳ ಮೂಲಕ ಶಿವನ ಪೂಜೆಯನ್ನು ಮಾಡಲು ತಿಳಿಸಿದ್ದಾರೆ.

೨. ಶಿವನ ಪೂಜೆಯನ್ನು ಹೇಗೆ ಮಾಡಬೇಕು?

ಅ. ತಮ್ಮ ಮನೆಯಲ್ಲಿರುವ ಶಿವಲಿಂಗದ ಪೂಜೆಯನ್ನು ಮಾಡಬೇಕು.

ಆ. ಒಂದು ವೇಳೆ ಶಿವಲಿಂಗ ಉಪಲಬ್ಧವಿಲ್ಲದಿದ್ದರೆ, ಶಿವನ ಚಿತ್ರದ ಪೂಜೆಯನ್ನು ಮಾಡಬೇಕು.

. ಶಿವನ ಚಿತ್ರ ಕೂಡ ಉಪಲಬ್ಧವಿಲ್ಲದಿದ್ದರೆ, ಮಣೆಯ ಮೇಲೆ ಶಿವಲಿಂಗದ ಅಥವಾ ಶಿವನ ಚಿತ್ರವನ್ನು ಬಿಡಿಸಿ ಅದರ ಪೂಜೆಯನ್ನು ಮಾಡಬೇಕು.

ಈ. ಮೇಲಿನವುಗಳನ್ನು ಯಾವುದೂ ಸಾಧ್ಯವಿಲ್ಲದಿದ್ದರೆ, ಶಿವನ ‘ಓಂ ನಮಃ ಶಿವಾಯ ಈ ನಾಮಮಂತ್ರವನ್ನು ಬರೆದು ಅದರ ಪೂಜೆಯನ್ನು ಕೂಡ ಮಾಡಬಹುದಾಗಿದೆ.

ಆಧಾರ: ಸನಾತನ ಸಂಸ್ಥೆ
🖊️ಬರಹ: ಶ್ರೀ. ವಿನೋದ ಕಾಮತ,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ, ಕರ್ನಾಟಕ
(ಸಂಪರ್ಕ : 9342599299 )

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ