ಲಾಕ್ ಡೌನ್ ಸಮಯದಲ್ಲಿ ಶ್ರಾವಣ ಸೋಮವಾರದ ವೃತವನ್ನು ಹೇಗೆ ಆಚರಿಸಬಹುದು.

‘ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ?

೨೭ ಜುಲೈ ಹಾಗೂ ೩, ೧೦ ಮತ್ತು ೧೭ ಆಗಸ್ಟ್ ಈ ದಿನಗಳಂದು ಶ್ರಾವಣ ಸೋಮವಾರದ ವ್ರತವನ್ನು ಆಚರಿಸಲಾಗುತ್ತದೆ.

ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು ಹೇಳುತ್ತಾರೆ. ಆಪದ್ಧರ್ಮವೆಂದರೆ ‘ಆಪದಿ ಕರ್ತವ್ಯೋ ಧರ್ಮಃ| ಎಂದರೆ ಆಪತ್ತಿನ ಸಮಯದಲ್ಲಿ ಆಚರಿಸುವ ಧರ್ಮ.
ಇಂತಹ ಸಂದರ್ಭದಲ್ಲಿ ಶ್ರಾವಣ ತಿಂಗಳು ಬರುತ್ತಿರುವುದರಿಂದ ಸಂಪತ್ಕಾಲದಲ್ಲಿ ತಿಳಿಸಿರುವ ಪದ್ಧತಿಯಿಂದ ಈ ಕಾಲಾವಧಿಯಲ್ಲಿ ಸಾಮೂಹಿಕ ರೂಪದಲ್ಲಿ ಆಚರಿಸುವ ಪರಂಪರೆಯಿರುವ ವಿವಿಧ ಹಬ್ಬಗಳು ಮತ್ತು ವ್ರತಗಳನ್ನು ಎಂದಿನಂತೆ ಆಚರಿಸಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಸದ್ಯದ ದೃಷ್ಟಿಯಿಂದ ಧರ್ಮಾಚರಣೆಯೆಂದು ಶ್ರಾವಣ ಸೋಮವಾರದಂದು ಮಾಡುವ ‘ಶ್ರಾವಣ ಸೋಮವಾರ ವ್ರತವನ್ನು ಹೇಗೆ ಆಚರಿಸುವುದು, ಎನ್ನುವ ವಿಚಾರವನ್ನು ಮಾಡಲಾಗಿದೆ. ಇಲ್ಲಿ ಮಹತ್ವದ ವಿಷಯವೆಂದರೆ, ಹಿಂದೂ ಧರ್ಮವು ಯಾವ ಮಟ್ಟದ ವರೆಗೆ ಮಾನವನ ವಿಚಾರವನ್ನು ಮಾಡಿದೆ ಎಂಬುದು ಇದರಿಂದ ಕಲಿಯಬಹುದಾಗಿದೆ. ಅದರಂತೆ ಹಿಂದೂ ಧರ್ಮದ ಶ್ರೇಷ್ಠತೆ ಗಮನಕ್ಕೆ ಬರುತ್ತದೆ.
ಶ್ರಾವಣ ಸೋಮವಾರದಂದು ಶಿವನ ದೇವಸ್ಥಾನಕ್ಕೆ ಹೋಗಿ ಶಿವಲಿಂಗಕ್ಕೆ ಅಭಿಷೇಕ ಮಾಡುವ ಪದ್ಧತಿಯಿದೆ. ‘ಲಾಕ್‌ಡೌನ್’ ಕಾರಣದಿಂದ ಮನೆಯಿಂದ ಹೊರಗೆ ಶಿವಾಲಯಕ್ಕೆ ಹೋಗಲು ಸಾಧ್ಯವಿಲ್ಲದವರು ‘ಆಪದ್ಧರ್ಮದ ಭಾಗವೆಂದು ಮನೆಯಲ್ಲಿಯೇ ಇದ್ದು, ಈ ವ್ರತವನ್ನು ಯಾವ ರೀತಿ ಆಚರಿಸಬೇಕು ಎನ್ನುವ ವಿಷಯದ ಲೇಖನದಲ್ಲಿ ಧರ್ಮಶಾಸ್ತ್ರಾಧಾರಿತ ವಿಶ್ಲೇಷಣೆಯನ್ನು ಮಾಡಲಾಗಿದೆ.

೧. ಶ್ರಾವಣ ಸೋಮವಾರದಂದು ಉಪವಾಸವನ್ನು ಮಾಡಿ ಶಿವನನ್ನು ವಿಧಿವತ್ತಾಗಿ ಪೂಜಿಸುವುದು.
‘ಉಪೋಷಿತಃ ಶುಚಿರ್ಭೂತ್ವಾ ಸೋಮವಾರೇ ಜಿತೇನ್ದ್ರಿಯಃ|
ವೈದಿಕೈರ್ಲೌಕಿಕೈರ್ಮನ್ತ್ರೈರ್ವಿಧಿವತ್ಪೂಜಯೇಚ್ಛಿವಮ್ ||’

ಸ್ಕಂದಪುರಾಣ, ಬ್ರಹ್ಮಖಂಡ, ಅಧ್ಯಾಯ ೮, ಶ್ಲೋಕ ೧೦
ಅರ್ಥ: ಸಂಯಮ ಮತ್ತು ಶುಚಿರ್ಭೂತ ಮುಂತಾದ ನಿಯಮಗಳ ಪಾಲನೆಯನ್ನು ಮಾಡುತ್ತ ಸೋಮವಾರದಂದು ಉಪವಾಸ ಮಾಡಿ ವೈದಿಕ ಅಥವಾ ಲೌಕಿಕ ಮಂತ್ರಗಳಿಂದ ಶಿವನನ್ನು ವಿಧಿವತ್ತಾಗಿ ಪೂಜಿಸಬೇಕು.
ಶಾಸ್ತ್ರಕಾರರು ಮನಸ್ಸಿನ ಮೇಲೆ ಸಂಯಮವನ್ನು ಇಟ್ಟು, ಶುಚಿರ್ಭೂತರಾಗಿ ನಿಯಮಗಳನ್ನು ಪಾಲಿಸುವ ವಿಷಯದಲ್ಲಿ ಮತ್ತು ಉಪವಾಸ ಮಾಡುವ ವಿಷಯದಲ್ಲಿ ತಿಳಿಸಿದ್ದಾರೆ. ಅದರಂತೆ ತಮ್ಮ ತಮ್ಮ ಜ್ಞಾನದ ಆಧಾರದಲ್ಲಿ ಸಾಧ್ಯವಿದ್ದರೆ, ಆ ವೈದಿಕ ಅಥವಾ ಲೌಕಿಕ ಮಂತ್ರಗಳ ಮೂಲಕ ಶಿವನ ಪೂಜೆಯನ್ನು ಮಾಡಲು ತಿಳಿಸಿದ್ದಾರೆ.

೨. ಶಿವನ ಪೂಜೆಯನ್ನು ಹೇಗೆ ಮಾಡಬೇಕು?

ಅ. ತಮ್ಮ ಮನೆಯಲ್ಲಿರುವ ಶಿವಲಿಂಗದ ಪೂಜೆಯನ್ನು ಮಾಡಬೇಕು.

ಆ. ಒಂದು ವೇಳೆ ಶಿವಲಿಂಗ ಉಪಲಬ್ಧವಿಲ್ಲದಿದ್ದರೆ, ಶಿವನ ಚಿತ್ರದ ಪೂಜೆಯನ್ನು ಮಾಡಬೇಕು.

. ಶಿವನ ಚಿತ್ರ ಕೂಡ ಉಪಲಬ್ಧವಿಲ್ಲದಿದ್ದರೆ, ಮಣೆಯ ಮೇಲೆ ಶಿವಲಿಂಗದ ಅಥವಾ ಶಿವನ ಚಿತ್ರವನ್ನು ಬಿಡಿಸಿ ಅದರ ಪೂಜೆಯನ್ನು ಮಾಡಬೇಕು.

ಈ. ಮೇಲಿನವುಗಳನ್ನು ಯಾವುದೂ ಸಾಧ್ಯವಿಲ್ಲದಿದ್ದರೆ, ಶಿವನ ‘ಓಂ ನಮಃ ಶಿವಾಯ ಈ ನಾಮಮಂತ್ರವನ್ನು ಬರೆದು ಅದರ ಪೂಜೆಯನ್ನು ಕೂಡ ಮಾಡಬಹುದಾಗಿದೆ.

ಆಧಾರ: ಸನಾತನ ಸಂಸ್ಥೆ
🖊️ಬರಹ: ಶ್ರೀ. ವಿನೋದ ಕಾಮತ,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ, ಕರ್ನಾಟಕ
(ಸಂಪರ್ಕ : 9342599299 )

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    You Missed

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 285 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 94 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 91 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 79 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 64 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ