ಲಾಕ್ ಡೌನ್ ಸಮಯದಲ್ಲಿ ಶ್ರಾವಣ ಸೋಮವಾರದ ವೃತವನ್ನು ಹೇಗೆ ಆಚರಿಸಬಹುದು.

‘ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ?

೨೭ ಜುಲೈ ಹಾಗೂ ೩, ೧೦ ಮತ್ತು ೧೭ ಆಗಸ್ಟ್ ಈ ದಿನಗಳಂದು ಶ್ರಾವಣ ಸೋಮವಾರದ ವ್ರತವನ್ನು ಆಚರಿಸಲಾಗುತ್ತದೆ.

ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು ಹೇಳುತ್ತಾರೆ. ಆಪದ್ಧರ್ಮವೆಂದರೆ ‘ಆಪದಿ ಕರ್ತವ್ಯೋ ಧರ್ಮಃ| ಎಂದರೆ ಆಪತ್ತಿನ ಸಮಯದಲ್ಲಿ ಆಚರಿಸುವ ಧರ್ಮ.
ಇಂತಹ ಸಂದರ್ಭದಲ್ಲಿ ಶ್ರಾವಣ ತಿಂಗಳು ಬರುತ್ತಿರುವುದರಿಂದ ಸಂಪತ್ಕಾಲದಲ್ಲಿ ತಿಳಿಸಿರುವ ಪದ್ಧತಿಯಿಂದ ಈ ಕಾಲಾವಧಿಯಲ್ಲಿ ಸಾಮೂಹಿಕ ರೂಪದಲ್ಲಿ ಆಚರಿಸುವ ಪರಂಪರೆಯಿರುವ ವಿವಿಧ ಹಬ್ಬಗಳು ಮತ್ತು ವ್ರತಗಳನ್ನು ಎಂದಿನಂತೆ ಆಚರಿಸಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಸದ್ಯದ ದೃಷ್ಟಿಯಿಂದ ಧರ್ಮಾಚರಣೆಯೆಂದು ಶ್ರಾವಣ ಸೋಮವಾರದಂದು ಮಾಡುವ ‘ಶ್ರಾವಣ ಸೋಮವಾರ ವ್ರತವನ್ನು ಹೇಗೆ ಆಚರಿಸುವುದು, ಎನ್ನುವ ವಿಚಾರವನ್ನು ಮಾಡಲಾಗಿದೆ. ಇಲ್ಲಿ ಮಹತ್ವದ ವಿಷಯವೆಂದರೆ, ಹಿಂದೂ ಧರ್ಮವು ಯಾವ ಮಟ್ಟದ ವರೆಗೆ ಮಾನವನ ವಿಚಾರವನ್ನು ಮಾಡಿದೆ ಎಂಬುದು ಇದರಿಂದ ಕಲಿಯಬಹುದಾಗಿದೆ. ಅದರಂತೆ ಹಿಂದೂ ಧರ್ಮದ ಶ್ರೇಷ್ಠತೆ ಗಮನಕ್ಕೆ ಬರುತ್ತದೆ.
ಶ್ರಾವಣ ಸೋಮವಾರದಂದು ಶಿವನ ದೇವಸ್ಥಾನಕ್ಕೆ ಹೋಗಿ ಶಿವಲಿಂಗಕ್ಕೆ ಅಭಿಷೇಕ ಮಾಡುವ ಪದ್ಧತಿಯಿದೆ. ‘ಲಾಕ್‌ಡೌನ್’ ಕಾರಣದಿಂದ ಮನೆಯಿಂದ ಹೊರಗೆ ಶಿವಾಲಯಕ್ಕೆ ಹೋಗಲು ಸಾಧ್ಯವಿಲ್ಲದವರು ‘ಆಪದ್ಧರ್ಮದ ಭಾಗವೆಂದು ಮನೆಯಲ್ಲಿಯೇ ಇದ್ದು, ಈ ವ್ರತವನ್ನು ಯಾವ ರೀತಿ ಆಚರಿಸಬೇಕು ಎನ್ನುವ ವಿಷಯದ ಲೇಖನದಲ್ಲಿ ಧರ್ಮಶಾಸ್ತ್ರಾಧಾರಿತ ವಿಶ್ಲೇಷಣೆಯನ್ನು ಮಾಡಲಾಗಿದೆ.

೧. ಶ್ರಾವಣ ಸೋಮವಾರದಂದು ಉಪವಾಸವನ್ನು ಮಾಡಿ ಶಿವನನ್ನು ವಿಧಿವತ್ತಾಗಿ ಪೂಜಿಸುವುದು.
‘ಉಪೋಷಿತಃ ಶುಚಿರ್ಭೂತ್ವಾ ಸೋಮವಾರೇ ಜಿತೇನ್ದ್ರಿಯಃ|
ವೈದಿಕೈರ್ಲೌಕಿಕೈರ್ಮನ್ತ್ರೈರ್ವಿಧಿವತ್ಪೂಜಯೇಚ್ಛಿವಮ್ ||’

ಸ್ಕಂದಪುರಾಣ, ಬ್ರಹ್ಮಖಂಡ, ಅಧ್ಯಾಯ ೮, ಶ್ಲೋಕ ೧೦
ಅರ್ಥ: ಸಂಯಮ ಮತ್ತು ಶುಚಿರ್ಭೂತ ಮುಂತಾದ ನಿಯಮಗಳ ಪಾಲನೆಯನ್ನು ಮಾಡುತ್ತ ಸೋಮವಾರದಂದು ಉಪವಾಸ ಮಾಡಿ ವೈದಿಕ ಅಥವಾ ಲೌಕಿಕ ಮಂತ್ರಗಳಿಂದ ಶಿವನನ್ನು ವಿಧಿವತ್ತಾಗಿ ಪೂಜಿಸಬೇಕು.
ಶಾಸ್ತ್ರಕಾರರು ಮನಸ್ಸಿನ ಮೇಲೆ ಸಂಯಮವನ್ನು ಇಟ್ಟು, ಶುಚಿರ್ಭೂತರಾಗಿ ನಿಯಮಗಳನ್ನು ಪಾಲಿಸುವ ವಿಷಯದಲ್ಲಿ ಮತ್ತು ಉಪವಾಸ ಮಾಡುವ ವಿಷಯದಲ್ಲಿ ತಿಳಿಸಿದ್ದಾರೆ. ಅದರಂತೆ ತಮ್ಮ ತಮ್ಮ ಜ್ಞಾನದ ಆಧಾರದಲ್ಲಿ ಸಾಧ್ಯವಿದ್ದರೆ, ಆ ವೈದಿಕ ಅಥವಾ ಲೌಕಿಕ ಮಂತ್ರಗಳ ಮೂಲಕ ಶಿವನ ಪೂಜೆಯನ್ನು ಮಾಡಲು ತಿಳಿಸಿದ್ದಾರೆ.

೨. ಶಿವನ ಪೂಜೆಯನ್ನು ಹೇಗೆ ಮಾಡಬೇಕು?

ಅ. ತಮ್ಮ ಮನೆಯಲ್ಲಿರುವ ಶಿವಲಿಂಗದ ಪೂಜೆಯನ್ನು ಮಾಡಬೇಕು.

ಆ. ಒಂದು ವೇಳೆ ಶಿವಲಿಂಗ ಉಪಲಬ್ಧವಿಲ್ಲದಿದ್ದರೆ, ಶಿವನ ಚಿತ್ರದ ಪೂಜೆಯನ್ನು ಮಾಡಬೇಕು.

. ಶಿವನ ಚಿತ್ರ ಕೂಡ ಉಪಲಬ್ಧವಿಲ್ಲದಿದ್ದರೆ, ಮಣೆಯ ಮೇಲೆ ಶಿವಲಿಂಗದ ಅಥವಾ ಶಿವನ ಚಿತ್ರವನ್ನು ಬಿಡಿಸಿ ಅದರ ಪೂಜೆಯನ್ನು ಮಾಡಬೇಕು.

ಈ. ಮೇಲಿನವುಗಳನ್ನು ಯಾವುದೂ ಸಾಧ್ಯವಿಲ್ಲದಿದ್ದರೆ, ಶಿವನ ‘ಓಂ ನಮಃ ಶಿವಾಯ ಈ ನಾಮಮಂತ್ರವನ್ನು ಬರೆದು ಅದರ ಪೂಜೆಯನ್ನು ಕೂಡ ಮಾಡಬಹುದಾಗಿದೆ.

ಆಧಾರ: ಸನಾತನ ಸಂಸ್ಥೆ
🖊️ಬರಹ: ಶ್ರೀ. ವಿನೋದ ಕಾಮತ,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ, ಕರ್ನಾಟಕ
(ಸಂಪರ್ಕ : 9342599299 )

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!