ಗಡಿಯಲ್ಲಿ ಚೀನಾ ಸೇನೆಯು ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ : ಸಿದ್ದರಾಮಯ್ಯ ಸರಣಿ ಟ್ವೀಟ್ ವಾರ್!

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿ ಎಲ್ ಸಂತೋಷ್ ಗೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ ಎಂದಿದ್ದಾರೆ.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ, ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದಿದ್ದಾರೆ.

ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ದೇಶದ ಪ್ರಧಾನ ಮಂತ್ರಿಗಳು. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿ.ಎಲ್.ಸಂತೋಷ್ ಅವರೇ, ನೀವು ಬಿ ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್ಗಿರಿ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ