ಗಡಿಯಲ್ಲಿ ಚೀನಾ ಸೇನೆಯು ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ : ಸಿದ್ದರಾಮಯ್ಯ ಸರಣಿ ಟ್ವೀಟ್ ವಾರ್!

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿ ಎಲ್ ಸಂತೋಷ್ ಗೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ ಎಂದಿದ್ದಾರೆ.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ, ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದಿದ್ದಾರೆ.

ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ದೇಶದ ಪ್ರಧಾನ ಮಂತ್ರಿಗಳು. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿ.ಎಲ್.ಸಂತೋಷ್ ಅವರೇ, ನೀವು ಬಿ ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್ಗಿರಿ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 202 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 46 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ