ಖ್ಯಾತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ವಿಧಿವಶ

ಬೆಂಗಳೂರು: ಹಿರಿಯ ಕವಿ ಡಾ.ಸಿದ್ದಲಿಂಗಯ್ಯನವರು ಕೋವಿಡ್ ಸೋಂಕಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿರುತ್ತಾರೆ.

ಕಳೆದ ಮೇ.2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆ, ಅಪೋಲೋ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಿಗೆ ಸುತ್ತಾಡಿದ್ದರೂ ಬೆಡ್ ಸಿಕ್ಕಿರಲಿಲ್ಲ. ಅಂತಿಮವಾಗಿ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣಗೆ ವಿಷಯ ತಿಳಿಯುತ್ತಿದ್ದಂತೆ ಕರೆ ಮಾಡಿ, ಬೆಡ್ ವ್ಯವಸ್ಥೆ ಮಾಡಿದ್ದರಿಂದಾಗಿ ಮೇ.3ರಂದು ರಂಗದೊರೆ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ಬೆಡ್ ದೊರೆತು ಚಿಕಿತ್ಸೆ ಪಡೆಯುತ್ತಿದ್ದರು.

ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಸಿಕೊಂಡರು ಎನ್ನುತ್ತಿರುವಾಗಲೇ, ಇಂದು ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿದ್ದಲಿಂಗಯ್ಯ ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿ ದಲಿತ ಕವಿ ಎಂದೇ ಹೆಸರು ಪಡೆದವರು. ಅಧ್ಯಾಪಕರಾಗಿ, ಕವಿಗಳಾಗಿ, ಹೋರಾಟಗಾರರಾಗಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಇವರು ಸಲ್ಲಿಸಿರುವ ಸೇವೆ ಅಪಾರ. ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಕೂಡ ಆಗಿದ್ದವರು ಇವರು. 1954ರಲ್ಲಿ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ಹುಟ್ಟಿದ್ದ ಸಿದ್ದಲಿಂಗಯ್ಯನವರು, ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾದವರು. ಶಾಲಾ ದಿನಗಳಿಂದಲೇ ಕವಿತೆ ಬರೆಯುವ ಹವ್ಯಾಸವುಳ್ಳವಾಗಿದ್ದ ಇವರು, ಅಂದಿನಿಂದಲೇ ಉತ್ತಮ ಭಾಷಣಕಾರರಾಗಿದ್ದರು.

‘ಹೊಲೆಮಾದಿಗರ ಹಾಡು’, ‘ಮೆರವಣಿಗೆ’, ‘ಸಾವಿರಾರು ನದಿಗಳು’, ‘ಕಪ್ಪು ಕಾಡಿನ ಹಾಡು’, ‘ನನ್ನ ಜನಗಳು’ ಸೇರಿದಂತೆ ಹಲವು ಕವನ ಸಂಕಲಗಳನ್ನು ಸಿದ್ದಲಿಂಗಯ್ಯ ಅವರು ಹೊರತಂದಿದ್ದಾರೆ. ‘ಊರು-ಕೇರಿ’ ಎಂಬ ಆತ್ಮಕಥನವನ್ನು ಅವರು ರಚಿಸಿದ್ದಾರೆ. ಪಂಪ ಪ್ರಶಸ್ತಿ, ಕರ್ನಾಟಕ ಸಾಹಿತ್ಯು ಅಕಾಡೆಮಿ ಪ್ರಶಸ್ತಿ, ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳು ಅವರಿಗೆ ದೊರೆತಿವೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು