ಖ್ಯಾತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ವಿಧಿವಶ

ಬೆಂಗಳೂರು: ಹಿರಿಯ ಕವಿ ಡಾ.ಸಿದ್ದಲಿಂಗಯ್ಯನವರು ಕೋವಿಡ್ ಸೋಂಕಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿರುತ್ತಾರೆ.

ಕಳೆದ ಮೇ.2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆ, ಅಪೋಲೋ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಿಗೆ ಸುತ್ತಾಡಿದ್ದರೂ ಬೆಡ್ ಸಿಕ್ಕಿರಲಿಲ್ಲ. ಅಂತಿಮವಾಗಿ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣಗೆ ವಿಷಯ ತಿಳಿಯುತ್ತಿದ್ದಂತೆ ಕರೆ ಮಾಡಿ, ಬೆಡ್ ವ್ಯವಸ್ಥೆ ಮಾಡಿದ್ದರಿಂದಾಗಿ ಮೇ.3ರಂದು ರಂಗದೊರೆ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ಬೆಡ್ ದೊರೆತು ಚಿಕಿತ್ಸೆ ಪಡೆಯುತ್ತಿದ್ದರು.

ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಸಿಕೊಂಡರು ಎನ್ನುತ್ತಿರುವಾಗಲೇ, ಇಂದು ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿದ್ದಲಿಂಗಯ್ಯ ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿ ದಲಿತ ಕವಿ ಎಂದೇ ಹೆಸರು ಪಡೆದವರು. ಅಧ್ಯಾಪಕರಾಗಿ, ಕವಿಗಳಾಗಿ, ಹೋರಾಟಗಾರರಾಗಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಇವರು ಸಲ್ಲಿಸಿರುವ ಸೇವೆ ಅಪಾರ. ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಕೂಡ ಆಗಿದ್ದವರು ಇವರು. 1954ರಲ್ಲಿ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ಹುಟ್ಟಿದ್ದ ಸಿದ್ದಲಿಂಗಯ್ಯನವರು, ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾದವರು. ಶಾಲಾ ದಿನಗಳಿಂದಲೇ ಕವಿತೆ ಬರೆಯುವ ಹವ್ಯಾಸವುಳ್ಳವಾಗಿದ್ದ ಇವರು, ಅಂದಿನಿಂದಲೇ ಉತ್ತಮ ಭಾಷಣಕಾರರಾಗಿದ್ದರು.

‘ಹೊಲೆಮಾದಿಗರ ಹಾಡು’, ‘ಮೆರವಣಿಗೆ’, ‘ಸಾವಿರಾರು ನದಿಗಳು’, ‘ಕಪ್ಪು ಕಾಡಿನ ಹಾಡು’, ‘ನನ್ನ ಜನಗಳು’ ಸೇರಿದಂತೆ ಹಲವು ಕವನ ಸಂಕಲಗಳನ್ನು ಸಿದ್ದಲಿಂಗಯ್ಯ ಅವರು ಹೊರತಂದಿದ್ದಾರೆ. ‘ಊರು-ಕೇರಿ’ ಎಂಬ ಆತ್ಮಕಥನವನ್ನು ಅವರು ರಚಿಸಿದ್ದಾರೆ. ಪಂಪ ಪ್ರಶಸ್ತಿ, ಕರ್ನಾಟಕ ಸಾಹಿತ್ಯು ಅಕಾಡೆಮಿ ಪ್ರಶಸ್ತಿ, ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳು ಅವರಿಗೆ ದೊರೆತಿವೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 68 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 63 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 230 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 85 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 160 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ